ಸಿಪಿಎಂ ಕೊಲೆ, ಕಾಂಗ್ರೆಸ್‌ ಕಪಟ ರಾಜಕಾರಣ: ಬಿಜೆಪಿ


Team Udayavani, Feb 25, 2019, 1:00 AM IST

cpm.jpg

ಕುಂಬಳೆ: ಸಂಘ ಪರಿವಾರ ರಾಜ್ಯಾದ್ಯಂತ ಆಯೋಜಿಸಿದ ಶಬರಿಮಲೆ ಸಂರಕ್ಷಣಾ ಹೋರಾಟ ಅತ್ಯಂತ ಯಶಸ್ಸು ಕಂಡಿದೆ. ಸಮಾನಮನಸ್ಕ ಸಮುದಾಯ ಹಾಗೂ ಯುವಕರ ತಂಡವು ಶಬರಿಮಲೆ ಆಚಾರ ವಿಚಾರಗಳ ರಕ್ಷಣೆಗೆ ಕಟಿಬದ್ಧವಾಗಿದ್ದು ಧರ್ಮ ರಕ್ಷಣೆಯ ಕಾರ್ಯದಲ್ಲಿ ಕಾರ್ಯ ತತ್ಪರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಡ್ವ ಕೆ. ಶ್ರೀಕಾಂತ್‌ ಹೇಳಿದರು. 

ಸಜಂಕಿಲದ ಆವಳಮಠ ಶ್ರೀ ದುರ್ಗಾಸದನದಲ್ಲಿ ನಡೆದ ಪೈವಳಿಕೆ ಪಂಚಾಯತ್‌ ಬಿಜೆಪಿ ಕುಟುಂಬ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪುಲ್ವಾಮಾ ದಾಳಿಯಲ್ಲಿ ಮಡಿದ ಸೆ„ನಿಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ದೇಶದ ಗಡಿ ರಕ್ಷಣೆಯ ಹೊಣೆಯನ್ನು ಧೀಮಂತ ಸೆ„ನಿಕರು ಹೊತ್ತರೆ, ಧರ್ಮ ಮತ್ತು ಸಮಾಜದ ರಕ್ಷಣೆಯ ಜವಾಬ್ದಾರಿಯನ್ನು ಸಂಘಪರಿವಾರದ ಯುವಕರು ಹೊತ್ತಿದ್ದಾರೆ. ದೇಶ ಮತ್ತು ಧರ್ಮದ ವಿರುದ್ಧವಾಗಿ ನಡೆಯುವವರಿಗೆ ತಕ್ಕ ಶಾಸ್ತಿಯಾಗಬೇಕಿದೆ ಎಂದರು. ಶಬರಿಮಲೆ ಕ್ಷೇತ್ರದ ಆಚರಣೆಯನ್ನು ಉಳಿಸುವ ನಿಟ್ಟಿನಲ್ಲಿ ಜರಗಿದ ನಾಮಜಪ ಯಜ್ಞಗಳು ರಾಜ್ಯ, ದೇಶದ ಗಡಿ ದಾಟಿ ವಿಶ್ವಾದ್ಯಂತ ಹಬ್ಬಿವೆ. ಏಕತೆಯ ಮಂತ್ರ ತಣ್ತೀಮಸಿಯನ್ನು ಬೋಧಿಸುವ ಅಯ್ಯಪ್ಪನ ಸಂದೇಶವು ಎಲ್ಲಡೆ ಪಸರಿದೆ ಎಂದರು. 

ಸಿಪಿಎಂ ಕೇವಲ ಕೊಲೆ ರಾಜಕಾರಣ ದಲ್ಲಿ ತೊಡಗಿದೆ. ಪುಲ್ಲೂರು ಪೆರಿಯಾದಲ್ಲಿ ನಡೆದ ಅವಳಿ ಯುವಕರ ಬರ್ಬರ ಕೊಲೆ ಕೃತ್ಯವೇ ಇದಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್‌ ನಾಯಕರು ತಮ್ಮ ಕಾರ್ಯಕರ್ತರ ಹತ್ಯೆಗೆ ಕೇವಲ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ವಿಪಕ್ಷ ಸಿಪಿಎಂ ಜತೆ ಜಿಲ್ಲೆಯ ಕೆಲ ಗ್ರಾ.ಪಂ. ಗಳಲ್ಲಿ ಅಧಿಕಾರ ಹಂಚಿಕೊಂಡಿರುವ ಕಾಂಗ್ರೆಸ್‌ ಕಪಟ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದರು. ಪೈವಳಿಕೆ,ಕಾರಡ್ಕ, ಎಣ್ಮಕಜೆ ಗ್ರಾ.ಪಂಗಳಲ್ಲಿ ಕೋಲಿಬಿ ಸಖ್ಯದಲ್ಲಿದೆ ಎಂದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ ಮಾತನಾಡಿ ಕೇಂದ್ರದಲ್ಲಿ ಮತ್ತೂಮ್ಮೆ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೇರಿ ನರೇಂದ್ರ ಮೋದಿ ದೇಶದ ಪ್ರಧಾನಿ ಯಾಗಲಿರುವರು. ಇದನ್ನು ನನಸಾ ಗಿಸಲು ಎಲ್ಲ ಕಾರ್ಯಕರ್ತರು ಜತೆಗೂಡಿ ಶ್ರಮಿಸಬೇಕೆಂದರು. ಮೋದಿ ಸರಕಾರದ ವಿಶೇಷ ಸಾಧನೆಗಳನ್ನು ಜನರ ಬಳಿ ತಲುಪಿಸುವ ಜವಾಬ್ದಾರಿಯು ಪ್ರತಿಯೊಬ್ಬ ಕಾರ್ಯಕರ್ತನ ಹೆಗಲ ಮೇಲಿದೆ ಎಂದರು. 

ಚುನಾವಣೆಯಲ್ಲಿ ತಕ್ಕ ಶಾಸ್ತಿ 
ಸ್ತ್ರೀ ಸ್ವಾತಂತ್ರ್ಯದ ನೆಪದಲ್ಲಿ ಅನ್ಯಮತೀಯ ಯುವತಿಯರನ್ನು ಶಬರಿಮಲೆಗೆ ಒತ್ತಾಯಪೂರ್ವಕವಾಗಿ ಕಳುಹಿಸಿದ ಎಡರಂಗ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಶಾಸ್ತಿಯಾಗಲಿದೆ ಎಂದರು. ರಾಜ್ಯದ ವಿವಿಧೆೆಡೆಗಳಲ್ಲಿ ನಾಮಜಪ ಯಜ್ಞದಲ್ಲಿ ತೊಡಗಿದ್ದ ಸುಮಾರು 6 ಸಾವಿರ ಮಂದಿ ಮಹಿಳೆಯರು ಮತ್ತು 4 ಸಾವಿರ ಮಂದಿ ಯುವಕರ ವಿರುದ್ಧ ವಿನಾಕಾರಣ ಕೇಸುಗಳನ್ನು ದಾಖಲಿಸಿದ ರಾಜ್ಯ ಸರಕಾರದ ಕ್ರಮ ತರವಲ್ಲವೆಂದರು. ಶಬರಿಮಲೆ ಹೋರಾಟವು ಧರ್ಮ ರಕ್ಷಣೆಯ ಭಾಗವಾಗಿ ಯಶಸ್ಸು ಕಂಡಿದ್ದು ಚರಿತ್ರೆಯ ಪುಟಗಳಲ್ಲಿ ದಾಖಲಾಗಿದೆ ಎಂದರು.
-ಕೆ. ಶ್ರೀಕಾಂತ್‌ ಬಿಜೆಪಿ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.