ವಿದ್ಯಾರ್ಥಿಗಳ ಅಳಲಿಗೆ ಕಿವುಡಾದ ಸರಕಾರ

ಕನ್ನಡ ಶಾಲೆಗಳಿಗೆ ಮತ್ತೆ ಕನ್ನಡ ಅರಿಯದ ಶಿಕ್ಷಕರ ನೇಮಕಕ್ಕೆ ಸನ್ನಾಹ

Team Udayavani, Oct 11, 2019, 5:00 AM IST

kasargod-school

ಕಾಸರಗೋಡು: ಒಂದೆಡೆ “ಭಾಷಾ ಅಲ್ಪಸಂಖ್ಯಾಕರ ಸಾಂವಿಧಾನಿಕ ಹಕು Rಗಳನ್ನು ರಕ್ಷಿಸಲಾಗುವುದು’ ಎಂದು ಮಂಜೇಶ್ವರ ವಿಧಾನಸಭಾ ಉಪಚುನಾ ವಣೆ ಪ್ರಚಾರದಲ್ಲಿ ವಿವಿಧ ಪಕ್ಷಗಳ ಮುಖಂಡರು ಹೇಳಿಕೊಂಡು ಬರುತ್ತಿದ್ದರೆ ಇನ್ನೊಂದೆಡೆ ಕನ್ನಡ ಶಾಲೆಗಳಲ್ಲಿ ಮತ್ತೆ ಕನ್ನಡ ತಿಳಿಯದ ಶಿಕ್ಷಕರನ್ನು ನೇಮಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಕರಾಳ ವಾಗಿಸಲು ರಾಜ್ಯ ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ.

ಕನ್ನಡ ಶಾಲೆಗಳಿಗೆ ಕನ್ನಡ ತಿಳಿದವರನ್ನೇ ಶಿಕ್ಷಕರನ್ನಾಗಿ ನೇಮಿಸಬೇಕೆಂಬ ಕನ್ನಡ ವಿದ್ಯಾರ್ಥಿಗಳ ಪೋಷಕರ ಸಂಘಟನೆಗಳ ಹೋರಾಟಕ್ಕೆ ಕಿವುಡಾದ ಸರಕಾರ ಈ ಸಮಸ್ಯೆಗೆ ಯಾವುದೇ ಪರಿಹಾರವನ್ನು ಕೈಗೊಳ್ಳುತ್ತಿಲ್ಲ. ಸರಕಾರದ ಈ ನಿರ್ಲಕ್ಷ್ಯ ಮತ್ತು ನಿಷ್ಕ್ರಿಯಕ್ಕೆ ಕನ್ನಡಿಗರ ವಲಯದಲ್ಲಿ ಭಾರೀ ಆಕ್ರೋಶ ಕಂಡುಬರುತ್ತಿದ್ದು ಇದು ಮಂಜೇಶ್ವರ ಉಪ ಚುನಾವಣೆಯಲ್ಲಿ ಪ್ರತಿಫಲಿಸುವ ಸಾಧ್ಯತೆಯಿದೆ.

ಕನ್ನಡ ಶಾಲೆಗಳಿಗೆ ಕನ್ನಡ ತಿಳಿಯದ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ಭಾಷಾ ಅಲ್ಪಸಂಖ್ಯಾಕರಿಗೆ ಮಾತೃ ಭಾಷೆಯಲ್ಲಿ ಕಲಿಯುವ ಸಾಂವಿಧಾನಿಕ ಅವಕಾಶಕ್ಕೆ ಹಾಗೂ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಲಿದೆ. ಸಾರ್ವಜನಿಕ ಶಿಕ್ಷಣ ರಂಗವನ್ನು ಉಳಿಸುತ್ತಿರುವವರೆಂದು ಹೇಳಿ ಕೊಳ್ಳುತ್ತಿರುವ ಸಿ.ಪಿ.ಎಂ. ಪಕ್ಷದ ನೇತೃತ್ವದ ಎಡರಂಗ ಸರಕಾರ ಕಲಿಸುವ ಮಾಧ್ಯಮದ ಭಾಷೆಯನ್ನೇ ತಿಳಿಯದ ಶಿಕ್ಷಕರನ್ನು ನೇಮಿಸುವ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿರುವ ಸರಕಾರಿ ಶಾಲೆಗಳ ಕನ್ನಡ ಮಾಧ್ಯಮ ವಿಭಾಗವನ್ನು ಮುಚ್ಚಿಸಿ ಖಾಸಗಿ ಶಾಲೆಗಳಿಗೆ ನೆರವಾಗಲು ಹೊರಟಿದೆಯೇ ಎಂಬ ಗುಮಾನಿ ಮೂಡುತ್ತಿದೆ.

ಕನ್ನಡ ತಿಳಿಯದಿದ್ದರೂ ಕೇರಳ ಲೋಕಸೇವಾ ಆಯೋಗದಿಂದ ಅಕ್ರಮವಾಗಿ ಆಯ್ಕೆಯಾದ ಈ ಅನರ್ಹ ಶಿಕ್ಷಕರಿಗೆ ಕನ್ನಡದಲ್ಲಿ ಮೂರು ಗಂಟೆಗಳ ವಿವರಣಾತ್ಮಕ ಲಿಖೀತ ಪರೀಕ್ಷೆ ನಡೆಸಿ ಅದರಲ್ಲಿ ತೇರ್ಗಡೆಯಾದರೆ ಮಾತ್ರ ಕನ್ನಡ ಮಾಧ್ಯಮ ತರಗತಿಗಳಿಗೆ ಪಾಠ ಮಾಡಲು ಅನುಮತಿ ನೀಡಬೇಕೆಂದೂ ಇಲ್ಲವಾದರೆ ಅವರನ್ನು ಮಲಯಾಳ ಮಾಧ್ಯಮಕ್ಕೆ ಅಥವಾ ತತ್ಸಮಾನ ಹುದ್ದೆಗಳಿಗೆ ವರ್ಗಾಯಿಸಿ ಕನ್ನಡ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂಬುದು ಕನ್ನಡಿಗರ ಒತ್ತಾಯವಾಗಿದೆ. ಆದರೆ ಇದಕ್ಕೆ ಕಿವಿಗೊಡದ ಸರಕಾರ ಮತ್ತೆ ಇಬ್ಬರು ಕನ್ನಡ ಬಾರದ ಸಮಾಜ ವಿಜ್ಞಾನ ಅಧ್ಯಾಪಕರ ನೇಮಕಕ್ಕೆ ಸಿದ್ಧತೆ ನಡೆಸಿದೆ. ಬೇಕಲ, ಉದುಮ ಶಾಲೆಗಳಿಗೆ ಇವರಿಗೆ ನೇಮಕಾತಿ ನೀಡಲಾಗಿದೆ.

ಮಕ್ಕಳ ಉಪವಾಸಕ್ಕೂ ಮಣಿಯದ ಸರಕಾರ
ಮಂಗಲ್ಪಾಡಿ, ಪೈವಳಿಕೆ, ಬೇಕೂರು, ಪೆರಡಾಲ, ಬಂದಡ್ಕ ಮೊದಲಾದ ಶಾಲೆಗಳಿಗೆ ಈಗಾಗಲೇ ಕನ್ನಡ ತಿಳಿಯದ ಶಿಕ್ಷಕರನ್ನು ನೇಮಿಸಲಾಗಿತ್ತು. ಇದರ ವಿರುದ್ಧ ಧರಣಿ, ತರಗತಿ ಬಹಿಷ್ಕಾರ, ಉಪವಾಸ ಸತ್ಯಾಗ್ರಹ, ದೂರು ಮನವಿಗಳ ಸಮರ್ಪಣೆ, ನ್ಯಾಯಾಂಗ ಹೋರಾಟ ಮೊದಲಾದ ಎಲ್ಲ ಹೋರಾಟಗಳನ್ನೂ ಕನ್ನಡಿಗ ವಿದ್ಯಾರ್ಥಿಗಳು ಪೋಷಕರು ಕೈಗೊಂಡಿದ್ದರು. ಇದರ ಫಲವಾಗಿ ಇಬ್ಬರು ಶಿಕ್ಷಕರನ್ನು ವೇತನ ಸಹಿತ ರಜೆಯಲ್ಲಿ ಕನ್ನಡ ಕಲಿಯಲು ಮೈಸೂರಿನ ಪ್ರಾದೇಶಿಕ ಭಾಷಾ ಅಧ್ಯಯನ ಕೇಂದ್ರಕ್ಕೆ ಕಳುಹಿಸಿ ಸರಕಾರ ಆದೇಶ ಹೊರಡಿಸಿತ್ತು. ಆದರೆ ಹಿಂದಿನ ಅನುಭವಗಳ ಆಧಾರದಲ್ಲಿ ಇವರು ಕನ್ನಡ ಕಲಿತು ಕನ್ನಡದಲ್ಲಿ ಪಾಠ ಮಾಡಲು ಸಮರ್ಥರಾಗುವರೆಂಬ ವಿಶ್ವಾಸ ಕನ್ನಡಿಗರಿಗಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.