ವಿಪತ್ತು ನಿರ್ವಹಣೆ ತರಬೇತಿ ಕೇಂದ್ರ ಸ್ಥಾಪನೆಗೆ ತೀರ್ಮಾನ

ಸೇವಾ ಭಾರತಿಯಿಂದ ಸಮಗ್ರ ಸೇವೆ ವಿಸ್ತರಣೆ

Team Udayavani, Sep 26, 2019, 5:06 AM IST

25KSDE9

ಕಾಸರಗೋಡು: ಸ್ವಯಂ ಸೇವಾ ಕಾರ್ಯದಲ್ಲಿ ಮುನ್ನುಗ್ಗುವ ಸೇವಾ ಭಾರತಿ ವತಿಯಿಂದ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ತರಬೇತಿ ಕೇಂದ್ರವನ್ನು ಆರಂಭಿಸಲು ತೀರ್ಮಾನಿಸಿದೆ.

ಅಲ್ಲದೆ ಕಾರ್ಯಕರ್ತರು ಇನ್ನು ಮುಂದೆ ರಾಜ್ಯದಲ್ಲಿ ಪಂಚಾಯತ್‌ ಮಟ್ಟದಲ್ಲೂ ತನ್ನ ಚಟುವಟಿಕೆಗಳನ್ನು ಆರಂಭಿಸಲು ತೀರ್ಮಾನಿಸಿದೆ. ಪ್ರಳಯದಿಂದಾಗಿ ನೊಂದ ಕುಟುಂಬಗಳಿಗೆ ಸಾಂತ್ವನವನ್ನುಂಟು ಮಾಡುವ ನಿಟ್ಟಿನಲ್ಲಿ ಸಮಾಜ ಸೇವೆಯ ಸಮಸ್ತ ವಲಯಗಳಲ್ಲಿಯೂ ಸೇವಾ ಭಾರತಿಯಿಂದ ಸಮಗ್ರ ಸೇವೆಯನ್ನು ವಿಸ್ತರಿಸಲಾಗಿದೆ.
ಕೊಚ್ಚಿಯಲ್ಲಿ ಜರಗಿದ ಸೇವಾ ಭಾರತಿ ಕಾರ್ಯಕರ್ತರ ರಾಜ್ಯ ಪ್ರತಿನಿಧಿ ಸಮ್ಮೇಳನದಲ್ಲಿ ಹೆಚ್ಚಿನ ಯೋಜನೆಗಳನ್ನು ತಯಾರಿಸಿ ಇನ್ನಷ್ಟು ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಯಿತು.

ಆಲಪ್ಪುಯ ಜಿಲ್ಲೆಯಲ್ಲಿ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ತರಬೇತಿ ಕೇಂದ್ರ ಆರಂಭಿಸಲಾಗುವುದು. ಎಲ್ಲ ಸೇವಾ ವಲಯಗಳ ಕಾರ್ಯಕರ್ತರಿಗೂ ತರಬೇತಿ ನೀಡಲಾಗುವುದು. ನೀರು, ಪರಿಸರ, ಜೈವಿಕ ಕೃಷಿ, ಶುಚೀಕರಣ ಸಹಿತ ಆಯಾ ಪಂಚಾಯತ್‌ ಮಟ್ಟದಲ್ಲಿ ಸಮಾಜಕ್ಕೆ ಅಗತ್ಯವಾದ ಚಟುವಟಿಕೆಗಳನ್ನು ವಹಿಸಿಕೊಂಡು ನಡೆಸುವುದಕ್ಕಾಗಿ ಯೋಜನೆಗಳನ್ನು ತಯಾರಿಸಿ ಕರ್ತವ್ಯ ನಿರ್ವಹಿಸಲಾಗುವುದು.
ರಾಜ್ಯದ ವಿವಿಧ ಭಾಗಗಳಿಂದಾಗಿ ರಾಷ್ಟ್ರೀಯ ಸೇವಾ ಭಾರತಿಯ ಪ್ರತಿನಿಧಿಗಳು, ಮಕ್ಕಳು, ಮಹಿಳೆಯರು ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ದುರಂತಕ್ಕೀಡಾದವರಿಗೆ ಸಹಾಯ ವನ್ನೊದಗಿಸುವ ನಿಟ್ಟಿನಲ್ಲಿ ಮಾತ್ರವಲ್ಲದೆ ಜನರ ಅಗತ್ಯದ ಚಟುವಟಿಕೆಗಳನ್ನು ನೆರವೇರಿಸುವುದು ಸೇವಾ ಭಾರತೀಯ ಮೂಲ ತತ್ವವಾಗಿದೆ ಎಂಬುದು ಸಮ್ಮೇಳನದ ಸಂದೇಶವಾಗಿದೆ. ತುರ್ತು ಸಮಯದಲ್ಲಿ ಸೇವೆ ನಡೆಸುವುದರ ಹೊರತು ಸೇವಾ ಭಾರತಿ ರಾಜ್ಯದಲ್ಲಿ 170 ಲಕ್ಷ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ವೈವಿಧ್ಯ ವಲಯವನ್ನು ರಾಜ್ಯದ ಪಂಚಾಯತ್‌ ಮಟ್ಟದಲ್ಲಿ ಪತ್ತೆಹಚ್ಚಿ ಜಾರಿಗೊಳಿಸುವುದಕ್ಕಾಗಿ ಯೋಜನೆ ತಯಾರಿಸಲು ಸಮ್ಮೇಳನದಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಾಯದಿಂದಾಗಿ ಅಲ್ಲದೆ ಉದಾರ ದಾನಿಗಳ ಸಹಾಯದೊಂದಿಗೆ ಸಾಮಾಜಿಕ ಕ್ಷೇಮ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಕಾನೂನು ಪ್ರಕಾರ ಎಲ್ಲ ಕ್ರಮಗಳನ್ನು ಪಾಲಿಸಿ ಕೊಂಡು ಹೆಚ್ಚು ವ್ಯಾಪಕವಾಗಿ ಸಂಘಟನಾ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಯೋಜನೆ ರೂಪಿಸಲಾಯಿತು.

ಸಂಘಟನೆ ಮುಂದಿರಿಸಿದ ಸಂದೇಶವನ್ನು ಸಮಾಜವು ಮನದಟ್ಟು ಮಾಡಿ ಜಾರಿಗೊಳಿಸುವ ವೇಳೆಯಲ್ಲಿ ಸೇವಾ ಭಾರತಿಯ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ರಾಜ್ಯ ಸೇವಾ ಪ್ರಮುಖ್‌ ಎ.ವಿನೋದ್‌ ಹೇಳಿದ್ದಾರೆ.

ಸರಕಾರದ ಸಹಾಯಗಳಿಗೆ ಕಾದು ನಿಲ್ಲದೆ ಜನಸೇವೆಗೆ ಮಾರ್ಗ ಕಂಡು ಹಿಡಿಯಬೇಕೆಂದು ಮತ್ತು ಸರಕಾರಗಳ ಯೋಜನೆಗಳು ಎಲ್ಲ ಜನರಿಗೂ ಲಭಿಸುವಂತೆ ಮಾಡಲು ಸೇವಾ ಭಾರತಿ ಜನರಿಗೆ ಸಹಾಯ ನೀಡಬೇಕೆಂದು ಸೇವಾ ವಲಯದ ಕುರಿತು ಮಾತನಾಡಿದ ಡಾ| ಟಿ.ಪಿ.ಸೆನ್‌ಕುಮಾರ್‌ ತಿಳಿಸಿದ್ದಾರೆ.

ಪಂಚಾಯತ್‌ ಮಟ್ಟದ ಸೇವಾಕಾರ್ಯ
ಸೇವಾ ಭಾರತಿಯ ಆಶ್ರಯದಲ್ಲಿ ಕೇರಳದಲ್ಲಿ ಪ್ರತಿ ಪಂಚಾಯತ್‌ ಮಟ್ಟದಲ್ಲಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸೇವಾ ಭಾರತಿಯ ನೂತನ ಸಮಿತಿಗಳನ್ನು ರೂಪಿಸಿ ಜವಾಬ್ದಾರಿಗಳನ್ನು ನೀಡಲಾಗುವುದು. ಈ ಸಮಿತಿಯ ನೇತೃತ್ವದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಸೇವಾ ಚಟುವಟಿಕೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಕಾಸರಗೋಡು ಜಿಲ್ಲೆ ಯಲ್ಲೂ ಈ ಹಿನ್ನೆಲೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದ್ದು, ಜಿಲ್ಲೆಯ ಎಲ್ಲ ಪಂಚಾಯತ್‌ಗಳಲ್ಲೂ ಜನಸೇವೆ ನಡೆಸುವ ನಿಟ್ಟಿನಲ್ಲಿ ಯೋಜನೆಗಳನ್ನು ತಯಾರಿಸಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.