ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ನಲ್ಲಿ ದಂತರೋಗ ನಿರ್ಣಯ ಮೊಟಕು: ರೋಗಿಗಳ ಪರದಾಟ


Team Udayavani, May 8, 2019, 7:40 PM IST

health

ಬದಿಯಡ್ಕ: ಸರಕಾರದ ಅನಾಸ್ತೆಗೆ ಹೆಸರಾದ ಪ್ರದೇಶಗಳಲ್ಲಿ ಬದಿಯಡ್ಕವೂ ಒಂದು. ಈ ಪ್ರದೇಶದ ಜನರಿಗಾಗಿ ರೂಪೀಕರಿಸುವ ಯೋಜನೆಗಳು ಕಡತಗಳಲ್ಲೇ ಉಳಿಯುವುದು, ಅರ್ಧದಲ್ಲೇ ಕಟ್ಟಡಗಳ ಕೆಲಸ ಸ್ಥಗಿತಗೊಳ್ಳುವುದು ಇಲ್ಲವೇ ಸುಸಜ್ಜಿತ, ವ್ಯವಸ್ಥಿತ ಕಚೇರಿಗಳು, ಆರೋಗ್ಯ ಕೇಂದ್ರಗಳು ಉಪಯೋಗ ಶೂನ್ಯವಾಗಿ ಅಣಕಿಸುವಂತೆ ಗೋಚರಿಸುವುದು ಇಲ್ಲಿ ಸರ್ವೇ ಸಾಮಾನ್ಯ. ಇಲ್ಲಿನ ಸಾರ್ವಜನಿಕ ಆರೋಗ್ಯ ಕೇಂದ್ರವೂ ಇದಕ್ಕೆ ಹೊರತಾಗಿಲ್ಲ.

ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ನಲ್ಲಿರುವ ದಂತ ರೋಗ ನಿರ್ಣಯ ವಿಭಾಗ ನಾಶದತ್ತ ಸಾಗಿದೆ. ಈ ಕೊಠಡಿಯಲ್ಲಿರುವ ದಂತ ರೋಗ ನಿರ್ಣಯ ಅತ್ಯಾಧುನಿಕ ಯಂತ್ರಗಳು, ರೋಗಿಗಳಿಗೆ ಕುಳಿತುಕೊಳ್ಳುಲು ಸಿದ್ಧಪಡಿಸಿರುವ ಸೀಟು ಎಲ್ಲವೂ ತುಕ್ಕು ಹಿಡಿದು ನಾಶಗೊಳ್ಳುತ್ತಿದೆ. ದಂತರೋಗ ವಿಭಾಗಕ್ಕೆ ವೈದ್ಯರ ನೇಮಕ ನಡೆಯದಿರುವುದೇ ಇದಕ್ಕೆ ಕಾರಣವಾಯಿತು. ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ ಒಂದು ಕೊಠಡಿಯನ್ನು ದಂತ ರೋಗ ವಿಭಾಗಕ್ಕಾಗಿ ಮೂರು ವರ್ಷಗಳ ಹಿಂದೆ ಮೀಸಲಿಡಲಾಗಿತ್ತು. ದಂತ ರೋಗ ತಪಾಸಣೆಗೆ ಬಳಸುವ ಅತ್ಯಾಧುನಿಕ ಉಪಕರಣಗಳು, ರೋಗಿಗಳನ್ನು ತಪಾಸಣೆ ಮಾಡಲು ಸಹಾಯಕವಾಗುವ ಆಧುನಿಕ ಆಸನ, ಇನ್ನಿತರ ವಸ್ತುಗಳನ್ನು ನೀಡಲಾಗಿತ್ತು. ಆದರೆ ಲಕ್ಷಾಂತರ ರೂ. ವ್ಯಯಿಸಿ ಇಷ್ಟೆಲ್ಲ ಸಾಮಾಗ್ರಿಗಳನ್ನು ಒದಗಿಸಿದ ಸರಕಾರ, ಈ ವಿಭಾಗಕ್ಕೆ ವೈದ್ಯರ ಹಾಗೂ ಸಹಾಯಕರ ನೇಮಕ ನಡೆಸಿರಲಿಲ್ಲ. ಹಲವು ರೋಗಿಗಳು ದಂತ ರೋಗ ನಿರ್ಣಯ ತಪಾಸಣೆಗೆ ಬಂದಿದ್ದರೂ ಅವರಿಗೆ ಚಿಕಿತ್ಸೆ ನೀಡದೆ ಮರಳಿ ಕಳುಹಿಸಲಾಗಿದೆ.

ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ನಲ್ಲಿ 30 ಹಾಸಿಗೆಗಳಿದ್ದು ಒಳರೋಗಿ ಚಿಕಿತ್ಸಾ ವ್ಯವಸ್ಥೆ ಸೌಲಭ್ಯವಿದೆ. ಆದರೆ ಯಾರನ್ನೂ ಅಡ್ಮಿಟ್‌ ಮಾಡಲು ಅಧಿಕೃತರು ಮುಂದಾಗುತ್ತಿಲ್ಲ. ರಾತ್ರಿ ವೇಳೆ ವೈದ್ಯರುಗಳ ಸೇವೆ ಇಲ್ಲದಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ. ತಿಂಗಳುಗಳ ಹಿಂದೆ ಕಮ್ಯೂನಿಟಿ ಹೆಲ್ತ್‌ ಸೆಂಟರನ್ನು ತಾಲೂಕು ಆಸ್ಪತ್ರೆಯಾಗಿ ಭಡ್ತಿಗೊಳಿಸಲಾಯಿತು. ಆದರೆ ಎರಡೇ ದಿನಗಳಲ್ಲಿ ಅದು ರದ್ದುಗೊಂಡಿತು. ಇದರ ವಿರುದ್ಧ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಸೊಲ್ಲೆತ್ತಲು ಸಿದ್ಧರಿರಲಿಲ್ಲ. ಸರಕಾರ ಹಾಗೂ ಅಧಿಕೃತರು ಬದಿಯಡ್ಕ ಪ್ರದೇಶದ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿರುವ ಪ್ರತ್ಯಕ್ಷ ಉದಾಹರಣೆಯಾಗಿದೆ ಇಲ್ಲಿನ ಕಮ್ಯೂನಿಟಿ ಹೆಲ್ತ್‌ ಸೆಂಟರ್‌. ಮಳೆಗಾಲದಲ್ಲಿ ನೂರಾರು ರೋಗಿಗಳು ಇಲ್ಲಿಗಾಗಮಿಸುತ್ತಿದ್ದಾರೆ. ಇದೀಗ ಬಾಗಿಲು ಮುಚ್ಚಿರುವ ದಂತ ರೋಗ ವಿಭಾಗವನ್ನು ಮತ್ತೆ ತೆರೆದು ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಜನರ ಬೇಡಿಕೆಗಳು ಈಡೇರುವ ಯಾವುದೇ ಸೂಚನೆಗಳು ಇದುವರೆಗೆ ಗೋಚರಿಸಲಿಲ್ಲ.

– ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.