ಕುಂಡಕೊಳಕೆ ಇಗರ್ಜಿಯಲ್ಲಿ ಕಿಡಿಗೇಡಿಗಳ‌ ದಾಂಧಲೆ: ಶೀಘ್ರ ಕ್ರಮ


Team Udayavani, Aug 22, 2019, 5:00 AM IST

g-12

ಕಾಸರಗೋಡು: ಡಿ.ಜಿ.ಪಿ. ಲೋಕ್‌ನಾಥ್‌ ಬೆಹ್ರಾ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೂರು ಅದಾಲತ್‌ ನಡೆಸಿದರು. ಒಟ್ಟು 81 ದೂರುಗಳನ್ನು ನೋಂದಣಿ ಮಾಡಲಾಗಿತ್ತು. 64 ದೂರುಗಳನ್ನು ಪರಿಶೀಲಿಸ ಲಾಗಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜೇಮ್ಸ್‌ ಜೋಸೆಫ್, ಸಹಾಯಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ. ಶಿಲ್ಪಾ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಬಿ. ಪ್ರಷೋಬ್‌, ಡಿ.ವೈ.ಎಸ್‌.ಪಿ. ಗಳಾದ ಪಿ.ಕೆ. ಸುಧಾಕರನ್‌, ಪಿ. ಬಾಲಕೃಷ್ಣನ್‌ ನಾಯರ್‌, ಎಂ. ಸುನಿಲ್‌ ಕುಮಾರ್‌, ಎಂ. ಅಸೀನಾರ್‌, ಜೈಸನ್‌ ಅಬ್ರಾಹಂ, ಎಂ. ಪ್ರದೀಪ್‌ ಕುಮಾರ್‌, ಇನ್‌ಸ್ಪೆಕ್ಟರ್‌ಗಳು, ಸಬ್‌ ಇನ್‌ಸ್ಪೆಕ್ಟರ್‌ಗಳು ಅದಾಲತ್‌ನಲ್ಲಿ ಉಪಸ್ಥಿತರಿದ್ದರು.

ಇಗರ್ಜಿ ಪ್ರಕರಣ
ಮಂಜೇಶ್ವರದ ಕುಂಡಕೊಳಕೆಯಲ್ಲಿ ಇಗರ್ಜಿ ಯೊಂದಕ್ಕೆ ಕಿಡಿಗೇಡಿಗಳು ನಡೆಸಿದ ದಾಂಧಲೆ ಪ್ರಕರಣದಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳು ವುದಾಗಿ ಡಿ.ಜಿ.ಪಿ. ಭರವಸೆ ನೀಡಿದರು. ಈ ಸಂಬಂಧ ಇಗರ್ಜಿಯ ಧರ್ಮಗುರು ರೆ|ಫಾ| ವಿನ್ಸಂಟ್‌ ಅವರ ನೇತೃತ್ವದ ತಂಡ ದೂರು ಸಲ್ಲಿಸಿದ್ದು, ಇದನ್ನು ಪರಿಶೀಲಿಸಿದ ವೇಳೆ ಡಿ.ಜಿ.ಪಿ. ಈ ಆಶ್ವಾಸನೆ ನೀಡಿದರು.

ನಿಧಿ ಮಂಜೂರಾಗುತ್ತಿಲ್ಲ: ದೂರು
ವಿದ್ಯಾರ್ಥಿ ಪೊಲೀಸ್‌ ಕೆಡೆಟ್‌ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಅನುದಾನಿತ ಶಾಲೆಗಳಿಗೆ ಈ ಸಂಬಂಧ ನಿಧಿ ಮಂಜೂರು ಮಾಡುತ್ತಿಲ್ಲ ಎಂಬ ಆರೋಪದಲ್ಲಿ ಪೆರಡಾಲ ನವಜೀವನ ಪ್ರೌಢಶಾಲೆಯ ಪದಾಧಿಕಾರಿಗಳು ದೂರು ಸಲ್ಲಿಸಿದರು.

ಠಾಣೆಗೆ ನೂತನ ಕಟ್ಟಡಕ್ಕೆ ಮನವಿ
ಬದಿಯಡ್ಕ ಪೊಲೀಸ್‌ ಠಾಣೆ 45 ವರ್ಷಗಳಷ್ಟು ಹಳತಾಗಿದ್ದು, ಇದನ್ನು ಕೆಡವಿ ನೂತನ ಜನಮೈತ್ರಿ, ವಿದ್ಯಾರ್ಥಿ ಪೊಲೀಸ್‌, ಜನಜಾಗೃತಿ ಇತ್ಯಾದಿ ಸೌಲಭ್ಯಗಳ ಸಹಿತದ ನೂತನ ಕಟ್ಟಡ ನಿರ್ಮಾಣ ನಡೆಸುವಂತೆ ನೀರ್ಚಾಲು ನಿವಾಸಿ, ಸಾರ್ವಜನಿಕ ಕಾರ್ಯಕರ್ತ ಎಂ.ಎಚ್‌. ಜನಾರ್ದನ ಮನವಿ ಸಲ್ಲಿಸಿದರು. ಈ ಸಂಬಂಧ ಕ್ರಮಕೈಗೊಳ್ಳುವಂತೆ ಎ.ಎಸ್‌.ಪಿ.ಗೆ ಡಿ.ಜಿ.ಪಿ. ಹೊಣೆ ನೀಡಿದರು.

ಮಸೀದಿಗೆ ಬೆಂಕಿಯಿಕ್ಕಿದ ಪ್ರಕರಣ
ನೀಲೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯ ಏರಿಕುಳಂ ಮಸೀದಿಗೆ ಜ.23ರಂದು ಬೆಂಕಿಯಿಕ್ಕಿದ ಪ್ರಕರಣದಲ್ಲಿ ಆರೋಪಿಗಳನ್ನು ಇನ್ನೂ ಪತ್ತೆ ಮಾಡದಿರುವ ಪ್ರಕರಣದಲ್ಲಿ ಕಾಂಞಂಗಾಡ್‌ ಸಂಯುಕ್ತ ಜಮಾ ಅತ್‌ ಜನರಲ್‌ ಸೆಕ್ರೆಟರಿ ಬಶೀರ್‌ ವೆಳ್ಳಿಕೋತ್‌ ಅವರ ನೇತೃತ್ವದ ತಂಡ ದೂರು ಸಲ್ಲಿಸಿದೆ. ಜಿಲ್ಲಾ ಅಪರಾಧ ಪತ್ತೆದಳದ ಡಿ.ವೈ.ಎಸ್‌.ಪಿ. ಪರಿಶೀಲನೆ ನಡೆಸುವಂತೆ ಡಿ.ಜಿ.ಪಿ. ಆದೇಶಿಸಿದರು.

ಪೈವಳಿಕೆ ಅಟ್ಟೆಗೋಳಿಯಲ್ಲಿ ಪಂಚಾಯತ್‌ ರಸ್ತೆಯನ್ನು ಖಾಸಗಿ ವ್ಯಕ್ತಿಯೊಬ್ಬರು ಅತಿಕ್ರಮಣ ನಡೆಸಿದ ಪ್ರಕರಣದಲ್ಲಿ ಸಂಬಂಧಪಟ್ಟವರು ಕ್ರಮಕೈಗೊಂಡಿಲ್ಲ ಎಂಬ ಆರೋಪದಲ್ಲಿ ಸ್ಥಳೀಯ ನಿವಾಸಿ ಸುಲೈಖಾ ಮತ್ತು ಪುತ್ರ ಪಿ.ಜಿ. ಮುಸ್ತಫಾ ದೂರು ಸಲ್ಲಿಸಿದರು. ವಿವಾದಿತ ಪ್ರದೇಶದಲ್ಲಿ ನಿರ್ಮಿಸಲಾದ ಬೇಲಿ ತೆರವುಗೊಳಿಸುವ ಕ್ರಮ ಕೈಗೊಳ್ಳುವಂತೆ ಡಿ.ಜಿ.ಪಿ. ಅವರು ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

ಸೂರ್ಲಿನಲ್ಲಿ ಪೊಲೀಸ್‌ ಭದ್ರತೆ ಬೇಕು
ರಿಯಾಜ್‌ ಮೌಲವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡಿನ ಸೂರ್ಲು ವಲಯದಲ್ಲಿ ತಲೆದೋರಿರುವ ಸೂಕ್ಷ್ಮ ವಾತಾವರಣದ ಹಿನ್ನೆಲೆಯಲ್ಲಿ ಪೊಲೀಸರು ಸಕ್ರಿಯವಾಗಿ ರಂಗಕ್ಕಿಳಿಯಬೇಕು. ಇಲ್ಲವಾದಲ್ಲಿ ನಿಜವಾದ ಆರೋಪಿಗಳು ತಲೆಮರೆಸಿ ಕೊಳ್ಳುವ ಭೀತಿಯಿದೆ ಎಂದು ಚೂರಿ ಓಲ್ಡ್‌ ಜುಮಾ ಮಸ್ಜಿದ್‌ ಸಮಿತಿ ಪದಾಧಿಕಾರಿಗಳು ದೂರು ಸಲ್ಲಿಸಿದರು. ಈ ಸಂಬಂಧ ಸೂಕ್ತ ಕ್ರಮಕೈಗೊಳ್ಳುವಂತೆ ಎ.ಎಸ್‌.ಪಿ. ಮತ್ತು ಸಿ.ಐ.ಅವರಿಗೆ ಡಿ.ಜಿ.ಪಿ. ಹೊಣೆ ವಹಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.