ಶಿಕ್ಷಣ ಸಂಸ್ಕಾರದೊಂದಿಗೆ ದೇಶಪ್ರೇಮಿ, ಸತ್ಪ್ರಜೆಗಳಾಗಿ
Team Udayavani, Apr 13, 2018, 9:10 AM IST
ಕುಂಬಳೆ: ಉತ್ತಮ ಶಿಕ್ಷಣ ಸಂಸ್ಕಾರ ಮತ್ತು ದೇಶಪ್ರೇಮದೊಂದಿಗೆ ವಿದ್ಯಾರ್ಥಿಗಳು ಮುಂದಿನ ಸತ್ಪ್ರಜೆಗಳಾಗಬೇಕು. ವಿಶ್ವವಿದ್ಯಾಲಯಗಳ ಸದುಪಯೋಗದ ಮೂಲಕ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ತಮ್ಮ ಸುಪ್ತ ಪ್ರತಿಭೆಯನ್ನು ಪ್ರಕಟಿಸಬೇಕೆಂಬುದಾಗಿ ಕೇಂದ್ರ ಪ್ರವಾಸೋದ್ಯಮ ಸಹಾಯಕ ಸಚಿವ ಅಲ್ಫಾನ್ಸೊ ಕಣ್ಣತ್ತಾನಂ ಹೇಳಿದರು. ಕೇಂದ್ರೀಯ ವಿಶ್ವವಿದ್ಯಾಲಯ ಕೇರಳ ಕಾಸರಗೋಡು ಪೆರಿಯಾದಲ್ಲಿ ನೂತನವಾಗಿ ನಿರ್ಮಿಸಲಿರುವ ವಿದ್ಯಾರ್ಥಿಗಳ ವಸತಿ ನಿಲಯದ ಕಟ್ಟಡಕ್ಕೆ ಶಿಲಾನ್ಯಾಸಗೈದ ಬಳಿಕ ಜರಗಿದ ಸಮಾರಂಭದಲ್ಲಿ ಸಚಿವರು ಮಾತನಾಡಿದರು.
ವಿ.ವಿ. ಉಪಕುಲಪತಿ ಡಾ| ಜಿ. ಗೋಪಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದರು. ವಿ.ವಿ.ಅಧಿಕಾರಿಗಳಾದ ಡಾ| ಜಯಪ್ರಸಾದ್, ಎ.ಕೆ. ದಾಸ್, ಜೇಸುದಾಸ್ ಉಪಸ್ಥಿತರಿದ್ದರು. ಕೆ.ಜಿ. ರಾಜಗೋಪಾಲ್ ವರದಿ ಮಂಡಿಸಿದರು.ಡಾ| ರಾಧಾಕೃಷ್ಣನ್ ನಾಯರ್ ಸ್ವಾಗತಿಸಿದರು.ಮಾಣಿಕ್ಯವೇಲು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ