“ಸ್ಕೌಟಿಂಗ್‌ ಚಳವಳಿಯ ಅನುಭವ ಸಮಾಜಕ್ಕೆ ದಾರಿದೀಪವಾಗಲಿ’​​​​​​​


Team Udayavani, Oct 6, 2018, 6:55 AM IST

05ksde10a.jpg

ಕಾಸರಗೋಡು: ಕಾಸರಗೋಡು ಸಾವಿರಾರು ಮಕ್ಕಳಿಗೆ ಸ್ಕೌಟಿಂಗ್‌ ಎಂಬ ಪಾವನವಾದ ಚಳವಳಿಯ ಅನುಭವವನ್ನು ನೀಡಿ ಸಮಾಜಕ್ಕೆ ದಾರಿದೀಪವಾಗಲಿ ಎಂದು ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್‌ ಹೇಳಿದರು.

ಅವರು ಪೇರಾಲು ಸರಕಾರಿ ಕಿರಿಯ ಬುನಾದಿ ಶಾಲೆಯಲ್ಲಿ ನಡೆಯುತ್ತಿರುವ ಏಳು ದಿನಗಳ ಸ್ಕೌಟ್‌ ಅಧ್ಯಾಪಕರ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ತರಬೇತಿಯಲ್ಲಿ ಪಾಲ್ಗೊಳ್ಳುತ್ತಿರುವ ಅಧ್ಯಾಪಕರ ತ್ಯಾಗವನ್ನು ಎಷ್ಟು ಕೊಂಡಾಡಿದರೂ ಸಾಲದು. ಯಾವು ದೇ ಪ್ರತಿಫಲ ಸಿಗದ ಚಳವಳಿ ಎಂದು ಸ್ಪಷ್ಟ ಗೊತ್ತಿದ್ದರೂ ಮುಂದಿನ ಪ್ರಜೆಗಳಾಗಲಿರುವ ಮಕ್ಕಳಿಗೆ ಜೀವನ ಪಾಠವನ್ನು ನೈಜ ಚಟುವಟಿಕೆಗಳ ಮೂಲಕ ನೀಡುವುದರ ಬಗ್ಗೆ ಹೊಸ ಅರಿವನ್ನು ಪಡೆಯಲು ಬಂದಿರುವುದು ಹೆಮ್ಮೆಯಾಗಿದೆ. ಡೇರೆಯಲ್ಲಿ ಮಲಗಿ ಮುಂಜಾವದಿಂದ ತಡರಾತ್ರಿಯ ವರೆಗೆ ನಿರಂತರ ಚಟುವಟಿಕೆಗಳಲ್ಲಿ ನಿರತರಾಗಿ ನೀಡಲಾಗುವ ತರಬೇತಿ ವಿಚಾರಗಳನ್ನು ಸ್ವತ: ಅನುಭವಸಿ ಕಲಿಯುವ ವೈಶಿಷ್ಟÂಪೂರ್ಣವಾದ ತರಬೇತಿಯಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದರು.

ಶಿಬಿರವನ್ನು ಶಾಲಾ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್‌ ಬಿ.ಎ. ಪೇರಾಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ ಉದ್ಘಾಟಿಸಿದರು. 

ಪಟಾಲಂ ಎಂದು ಕರೆಯಲಾಗುವ ಆರರಿಂದ ಎಂಟು ಮಂದಿಯ ಗುಂಪುಗಳಲ್ಲಿ ಡೇರೆಯಲ್ಲಿ ವಾಸ ಮಾಡಿಕೊಂಡು ಸ್ಕೌಟು ಅಧ್ಯಾಪಕರ ಪ್ರಾಥಮಿಕ ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಗಂಟುಗಳು, ಪ್ರಥಮ ಚಿಕಿತ್ಸೆ, ಬ್ಯಾಂಡೇಜು ಕಟ್ಟುವುದು, ತೆರವಾದ ಸ್ಥಳದಲ್ಲಿ ಬೆಂಕಿ ಮಾಡುವುದು ಮತ್ತು ಅಗ್ನಿ ಬಾಧೆಯ ಶಮನ, ದಿಕ್ಚಕ್ರದ  ಉಪಯೋಗ, ಅಂದಾಜು ಮಾಡುವುದು, ಸಿಗ್ನಲಿಂಗ್‌, ಟ್ರೂಪ್‌ ಮೀಟಿಂಗ್‌ , ಪಥಸಂಚಲನ, ಬಿಪಿಯವರ ಆರು ವ್ಯಾಯಾಮಗಳು ಮೊದಲಾದ ವಿಷಯಗಳನ್ನು ಸ್ವತ: ಮಾಡಿ ಕಲಿಯುತ್ತಿದ್ದಾರೆ.

ಶಿಬಿರದ ಅಂಗವಾಗಿ ಸ್ವತ: ತೆರವಾದ ಸ್ಥಳದಲ್ಲಿ ಅಡುಗೆ ಮಾಡಿ ಆಹಾರ ಸೇವನೆ, ಶಿಬಿರಾಗ್ನಿ ಇತ್ಯಾದಿ ಕಾರ್ಯಕ್ರಮಗಳಿರುತ್ತವೆ.
ಕುಂಬಳೆ ಗ್ರಾಮ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಕೆ.ಆರಿಫ್‌, ಹಮೀದಾಲಿ, ಕುಂಬಳೆ ಗ್ರಾಮ ಪಂಚಾಯತ್‌ ಸದಸ್ಯ  ವಿ.ಪಿ. ಅಬ್ದುಲ್‌ ಖಾದರ್‌ ಹಾಜಿ, ಕಾಸರಗೋಡು ಉಪಜಿಲ್ಲಾ ವಿದ್ಯಾಧಿ ಕಾರಿ ಅಗಸ್ಟಿನ್‌ ಬರ್ನಾಡ್‌, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ಕೆ. ಮೊದಲಾದವರು ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಶುಭಹಾರೈಸಿರುವರು. ಸರ್ವ ಧರ್ಮ ಪ್ರಾರ್ಥನೆ ಹಾಗೂ ಧ್ವಜಾವರೋಹಣದೊಂದಿಗೆ ಶಿಬಿರ ಸಮಾರೋಪಗೊಂಡಿತು.

ಶಿಬಿರದಲ್ಲಿ 32 ಅಧ್ಯಾಪಕ-ಅಧ್ಯಾಪಕಿಯರು
ಕಾಸರಗೋಡು ಮತ್ತು ಕಾಂಞಂಗಾಡು ಶಿಕ್ಷಣ ಜಿಲ್ಲೆಗಳ ವಿವಿಧ ಶಾಲೆಗಳಿಂದ ಆಗಮಿಸಿದ 32 ಮಂದಿ ಅಧ್ಯಾಪಕರು ಮತ್ತು ಅಧ್ಯಾಪಕಿಯರು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿ ವೈವಿಧ್ಯಮಯ ವಿಚಾರಗಳನ್ನು ಮನನ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲಾ ಸ್ಕೌಟು ವಿಭಾಗದ ಆಯುಕ್ತ ಗುರುಮೂರ್ತಿ ನಾಯ್ಕಪು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಏಳು  ದಿನಗಳ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯುವುದಕ್ಕಾಗಿ ಕೂಡ್ಲು ಗೋಪಾಲಕೃಷ್ಣ ಪ್ರೌಢಶಾಲಾ ಸ್ಕೌಟು ಅಧ್ಯಾಪಕ ಕಿರಣ್‌ ಪ್ರಸಾದ್‌ ಪಿ.ಜಿ., ಮಧೂರು ಸರಕಾರಿ ಶಾಲಾ ಮುಖ್ಯ ಶಿಕ್ಷಕ ವಿನೋದ್‌ ಕುಮಾರ್‌, ಕಾಟುಕುಕ್ಕೆ ಶಾಲಾ ಅಧ್ಯಾಪಕ ವಿಜಯಕುಮಾರ್‌, ಕುಂಟಿಕಾನ ಶಾಲಾ ಅಧ್ಯಾಪಕ ಪ್ರಶಾಂತ್‌ ಕುಮಾರ್‌ ಕಾಲಿಚ್ಚಾನಡ್ಕ ಶಾಲಾ ಅಧ್ಯಾಪಕ ವಿ.ಕೆ ಭಾಸ್ಕರನ್‌ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.