ಕಳ್ಳ ಮತದಾನ ಆರೋಪ: ಜಿಲ್ಲಾಧಿಕಾರಿಗಳಿಂದ ಆಯೋಗಕ್ಕೆ ವರದಿ ಸಲ್ಲಿಕೆ


Team Udayavani, Apr 29, 2019, 6:30 AM IST

voting

ಕಾಸರಗೋಡು: ಕಾಸರಗೋಡು ಲೋಕಸಭಾ ಕ್ಷೇತ್ರಕ್ಕೊಳಪಟ್ಟ ಕಣ್ಣೂರು ಜಿಲ್ಲೆಗೆ ಸೇರಿದ ಕಲ್ಯಾಶೆÏàರಿ ಮತ್ತು ಪಯ್ಯನ್ನೂರು ವಿಧಾನಸಭಾ ಕ್ಷೇತ್ರಗಳ ಹಲವು ಮತಗಟ್ಟೆಗಳಲ್ಲಿ ಎಪ್ರಿಲ್‌ 23 ರಂದು ನಡೆದ ಚುನಾವಣೆ ವೇಳೆ ವ್ಯಾಪಕ ಕಳ್ಳಮತ ಚಲಾಯಿಸಿರುವ ವೀಡಿಯೋ ದೃಶ್ಯಗಳು ಹೊರ ಬಂದಿರುವಂತೆಯೇ ಆ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಟೀಕಾರಾಮ್‌ ಮೀಣಾ ತಿಳಿಸಿದ್ದಾರೆ.

ಇದು ಗಂಭೀರ ವಿಷಯವಾಗಿದೆ. ಆ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಂದ ಸ್ಪಷ್ಟೀಕರಣ ಕೇಳಲಾಗಿದೆ. ಅದು ಲಭಿಸಿದ ಬಳಿಕ ಈ ವಿಷಯದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಇಂತಹ ದೂರುಗಳು ಇನ್ನೂ ಲಭಿಸದಲ್ಲಿ ಅದನ್ನು ಪರಿಶೀಲಿಸಲಾಗುವುದೆಂದು ಮೀಣಾ ತಿಳಿಸಿದ್ದಾರೆ. ಇದೇ ವೇಳೆ ಕಳ್ಳಮತ ನಡೆದಿದೆ ಎಂದು ಆರೋಪಿಸಿ ಎದ್ದ ದೂರುಗಳು ಕಣ್ಣೂರು ಜಿಲ್ಲೆಗೆ ಸೇರಿದ ಮತಗಟ್ಟೆಗಳಲ್ಲಾಗಿದೆ ಎಂದೂ, ಈ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿರುವುದು ಕಣ್ಣೂರು ಜಿಲ್ಲಾಧಿಕಾರಿಗೆ ಸೇರಿದ ವಿಚಾರವಾಗಿದೆ ಎಂದು ಸ್ಪಷ್ಟಪಡಿಸಿ ಕಾಸರಗೋಡು ಚುನಾವಣಾಧಿಕಾರಿಯೂ ಆಗಿರುವ ಕಾಸರಗೋಡು ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ಬಾಬು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ. ಕಣ್ಣೂರು ಜಿಲ್ಲೆಯ ವ್ಯಾಪ್ತಿಗೊಳಪಟ್ಟ ಪ್ರದೇಶಗಳ ಮತಗಟ್ಟೆಗಳಲ್ಲಿ ಚುನಾವಣಾ ಕರ್ತವ್ಯಕ್ಕಾಗಿ ಸಿಬ್ಬಂದಿಗಳನ್ನು ನೇಮಿಸುವುದು ಕಣ್ಣೂರು ಜಿಲ್ಲಾಧಿಕಾರಿಯಾಗಿದ್ದಾರೆ. ಮಾತ್ರವಲ್ಲ ಕಣ್ಣೂರು ಜಿಲ್ಲೆಯ ಚುನಾವಣಾಧಿಕಾರಿಯೂ ಅವರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ನಕಲಿ ಮತಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಬೇಕಾಗಿರುವುದು ಅಲ್ಲಿನ ಜಿಲ್ಲಾಧಿಕಾರಿಯವರೇ ಆಗಿದ್ದಾರೆಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಳ್ಳಮತ ನಡೆದಿರುವ ಆರೋಪ ಕಣ್ಣೂರು ಜಿಲ್ಲೆಗೆ ಸೇರಿದ ಮತಗಟ್ಟೆಗಳಲ್ಲಿ ಉಂಟಾಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಕಣ್ಣೂರು ಜಿಲ್ಲೆಯ ಚುನಾವಣಾಧಿಕಾರಿಯೂ ಆಗಿರುವ ಕಣ್ಣೂರು ಜಿಲ್ಲಾಧಿಕಾರಿ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ. ಕಳ್ಳಮತ ಚಲಾಯಿಸಲಾಗಿರುವುದಾಗಿ ತೋರಿಸಿ ಪ್ರಕಟಿಸಲಾಗಿರುವ ವೀಡಿಯೋ ದೃಶ್ಯಗಳು ಅಂತಹ ಮತಗಟ್ಟೆಗಳ ವೆಬ್‌ಕಾಸ್ಟ್‌ನಿಂದ ಲಭಿಸಿದ ಅಸಲಿ ದೃಶ್ಯಗಳಾಗಿವೆ ಎಂದುಅಧಿಕಾರಿಗಳೂ ಸ್ಪಷ್ಟಪಡಿಸಿದ್ದಾರೆ.

ವೀಡಿಯೋ ದೃಶ್ಯ
ಕಲ್ಯಾಶೆÏàರಿ ವಿಧಾನಸಭಾ ಕ್ಷೇತ್ರದ 19 ನೇ ನಂಬ್ರದ ಮತಗಟ್ಟೆ ಪಯ್ಯನ್ನೂರು ವಿಧಾನಸಭಾ ಕ್ಷೇತ್ರದ 136 ನೇ ನಂಬ್ರದ ಮತಗಟ್ಟೆಗಳಲ್ಲಿ ವ್ಯಾಪಕ ಕಳ್ಳಮತ ಚಲಾಯಿಸಿದ ವೆಬ್‌ಕಾಸ್ಟ್‌ ವೀಡಿಯೋ ದೃಶ್ಯಗಳನ್ನು ಕಾಂಗ್ರೆಸ್‌ ಹೊರ ತಂದಿದೆ.

ಕಲ್ಯಾಶೆÏàರಿಯ ಪಿಲಾತ್ತರ ಎಯುಪಿ ಶಾಲೆಯ 19 ನೇ ಮತಗಟ್ಟೆಯಲ್ಲಿ ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ದೃಶ್ಯಗಳು ಗೋಚರಿಸಿದೆ. ನೇತಾರರೂ ಚಲಾಯಿಸುವ ಇತರ ಓಟು ಹೊಂದಿರುವ ಮತಗಟ್ಟೆಯಲ್ಲಿ ಪಂಚಾಯತ್‌ ಸದಸ್ಯ ಮತ್ತು ಸಿಪಿಎಂ ನ ಸ್ಥಳೀಯ ನೇತಾರ ಮತ ಚಲಾಯಿಸುವ ದೃಶ್ಯವೂ ಗೋಚರಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.