ಬಂಟ್ವಾಳದಲ್ಲಿ ನೀರುಪಾಲು: ಕುಂಬಳೆಯಲ್ಲಿ ಶೋಕಸಾಗರ

ಶನಿವಾರ ಮದುವೆ ಮನೆಯಲ್ಲಿ ನಡೆದಿದ್ದ ದುರಂತ

Team Udayavani, May 27, 2019, 6:10 AM IST

shokasagara

ಕುಂಬಳೆ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಮೇ 25ರಂದು ಸಂಜೆ ಮುಳುಗಿ ಕುಂಬಳೆಯ ಇಬ್ಬರು ಸಾವಿಗೀಡಾದ ಕಾರಣ ನಗರ ಶೋಕಸಾಗರದಲ್ಲಿ ಮುಳುಗಿದೆ.

ಕುಂಬಳೆ ಮುಜಂಗಾವು ಬಳಿಯ ಬಲ್ಲಂಪಾಡಿ ಮುಳಿಯಡ್ಕ ಮಣಿಕಂಠ – ಜಯಂತಿ ದಂಪತಿಯ ದ್ವಿತೀಯ ಪುತ್ರ, ಕುಂಬಳೆ ಸರಕಾರಿ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಮನೀಶ್‌ ಕುಮಾರ್‌ ಇತರ ನಾಲ್ವರು ವಿದ್ಯಾರ್ಥಿಗಳೊಂದಿಗೆ ಕಡಪ್ಪುರ ತಳಕದ‌ ರಿಕ್ಷಾ ಚಾಲಕ ಅಜಿತ್‌ ಕುಮಾರ್‌ ಜತೆಯಲ್ಲಿ ಬಂಟ್ವಾಳದ ಬರಿಮಾರಿಗೆ ವಿವಾಹ ಸಮಾರಂಭವೊಂದಕ್ಕೆ ತೆರಳಿದ್ದರು. ಅಲ್ಲಿ ಸಂಜೆ ತಂಡವು ಮೋಜಿಗಾಗಿ ನೇತ್ರಾವತಿ ಹೊಳೆಯಲ್ಲಿ ಈಜಾಡಲು ಇಳಿದು ಇಬ್ಬರು ಸಾವಿಗೀಡಾಗಿದ್ದರು. ಓರ್ವನನ್ನು ಸ್ಥಳೀಯರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಬಾಲ ಸಂಘದ ತಂಡದ ಸದಸ್ಯರಾಗಿದ್ದ ಕುಂಬಳೆಯ ಬಾಲಕರು ಮದುವೆಯ ಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಿಕ್ಷಾ ಚಾಲಕ ಅಜಿತ್‌ ಕುಮಾರ್‌ ಜತೆಯಲ್ಲಿ ತೆರಳಿದ್ದರು.

ಮೃತ ಮನೀಶ್‌ನ ಅಣ್ಣ ಮನೋಜ್‌ ಕುಮಾರ್‌ ಕುಂಬಳೆಯಲ್ಲಿ ಪ. ಪೂ. ವಿದ್ಯಾರ್ಥಿಯಾಗಿದ್ದು, ತಂದೆ ಕೂಲಿ ಕಾರ್ಮಿಕರಾಗಿದ್ದಾರೆ.

ಅಜಿತ್‌ ಕುಮಾರ್‌ ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದು ಪತ್ನಿ ವನಿತಾ ಹಾಗೂ ಅನ್ವೇಶ್‌ ಮತ್ತು ಶಾಂತಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಸಿ.ಪಿ.ಎಂ. ನಾಯಕರಾಗಿದ್ದರು. ಡಿ.ವೈ.ಎಫ್‌.ಐ. ಕುಂಬಳೆ ವಲಯ ಕಾರ್ಯದರ್ಶಿ ಆಗಿದ್ದರಲ್ಲದೆ ಸಮಾಜ ಸೇವಕರಾಗಿದ್ದರು. ಕಲಾವಿದರಾಗಿದ್ದು “ನಾಟ್‌ಪೊಲಿಮಾ’ ಎಂಬ ಕಲಾಸಂಘದ ಕಾರ್ಯದರ್ಶಿಯಾಗಿದ್ದರು.

ಇವರ ತಂಡದಲ್ಲಿ ಈ ಬಾಲಕರು ಕಲಾವಿದರಾಗಿದ್ದರು. ಮದುವೆ ಮನೆಯವರು ಅಜಿತ್‌ನ ಸಂಬಂಧಿಕರಾಗಿದ್ದರು.

“ಆಯತಪ್ಪಿ ಬಿದ್ದೆವು ‘
ನಾವು ಈಜಾಡಲು ಹೊಳೆಗಿಳಿದಾಗ ನಮ್ಮ ಕಾಲಿನ ಅಡಿಭಾಗದಿಂದ ಮರಳು ಕೊಚ್ಚಿ ಹೋದಾಗ ನಾವು ಆಯತಪ್ಪಿ ನೀರಲ್ಲಿ ಮುಳುಗಿದೆವು. ನಮ್ಮನ್ನು ಅಲ್ಲಿನ ಆಪದಾºಂಧವರು ರಕ್ಷಿಸಿದರು. ನಮ್ಮ ತಂಡದ ಇಬ್ಬರನ್ನು ನಾವು ಕಳೆದುಕೊಂಡೆವು ಎಂದು ಪಾರಾಗಿ ಬಂದಿರುವ ತೇಜಸೂರ್ಯ ಉದಯವಾಣಿಗೆ ತಿಳಿಸಿದರು. ಇವರು ಇನ್ನೂ ಘಟನೆಯ ಭಯದಿಂದ ಹೊರಬಂದಿಲ್ಲ.

ಸಾರ್ವಜನಿಕ ನಮನ
ಮೃತದೇಹಗಳನ್ನು ಕುಂಬಳೆಯಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಾಯಿತು. ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕರ್ತರು ಮತ್ತು ಸಂಘಸಂಸ್ಥೆಗಳ ಪದಾಧಿಕಾರಿಗಳು ಅಂತಿಮ ದರ್ಶನ ಪಡೆದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.