ಕಾಡಾನೆ ಹಾವಳಿ: ಕೃಷಿಕರ ರಕ್ಷಣೆ ಆಗ್ರಹಿಸಿ ಕಾರಡ್ಕ ಅರಣ್ಯ ಕಚೇರಿ ಮುಂಭಾಗ ಧರಣಿ
Team Udayavani, Feb 18, 2020, 7:41 AM IST
ಮುಳ್ಳೇರಿಯ: ಕಾಡಾನೆ ಹಾವಳಿಯಿಂದ ಕೃಷಿಕರನ್ನು ರಕ್ಷಿಸಬೇಕೆಂದು ಆಗ್ರಹಿಸಿ ಕಾರಡ್ಕ ಅರಣ್ಯ ಕಚೇರಿಯ ಮುಂದೆ ಬಿಜೆಪಿ ಕರ್ಷಕ ಮೋರ್ಚಾ ಕಾಸರ ಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
ಧರಣಿಯನ್ನು ಉದ್ಘಾಟಿಸಿದ ಕರ್ಷಕ ಮೋರ್ಚಾ ಜಿಲ್ಲಾ ಅಧ್ಯಕ್ಷ ಇ. ಕೃಷ್ಣನ್ ಅವರು ಮಾತನಾಡಿ ಕಾಡಾನೆ ಹಾವಳಿ ಯಿಂದ ಕೃಷಿ ನಾಶನಷ್ಟ ಸಂಭವಿಸಿದವರಿಗೆ ತುರ್ತು ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ ಗಡಿಗೆ ತಾಗಿಕೊಂಡಿರುವ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಕಾಡಾನೆ ಹಾವಳಿ ಅಧಿಕವಾಗುತ್ತಿದೆ. ಗಡಿಪ್ರದೇಶದ ಕೃಷಿ ತೋಟಗಳಿಗೆ ನುಗ್ಗುವ ಕಾಡಾನೆಗಳು ಕೃಷಿ ನಾಶಗೊಳಿಸುತ್ತಿವೆ. ಇದರಿಂದಾಗಿ ಕೃಷಿಕರು ಬೆಳೆದ ಬೆಳೆ ನಷ್ಟವಾಗಿ ಕಂಗಾಲಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ನಾಶ ಸಂಭವಿಸಿದ ಕೃಷಿಕರಿಗೆ ನಷ್ಟ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.
ನೇತಾರರಾದ ಕೆ.ಕೆ.ವೇಣು ಗೋಪಾ ಲನ್, ರಾಧಾಕೃಷ್ಣನ್, ಎಡಪಣಿ ಬಾಲ ಕೃಷ್ಣನ್, ಕೊರಗ ನಾಯ್ಕ ಮೊದಲಾದವರು ಮಾತನಾಡಿದರು. ಕೃಷ್ಣ ಭಟ್ ಸ್ವಾಗತಿಸಿದರು. ಗೋಪಾಲಕೃಷ್ಣ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ