ಸಾಂಸ್ಕೃತಿಕ ಚಟುವಟಿಕೆಯಿಂದ ಕ್ರಿಯಾತ್ಮಕ ನಿರಂತರತೆ : ಯೋಗೀಶ ರಾವ್‌


Team Udayavani, Jan 23, 2020, 11:20 PM IST

yogish-rao

ಪೆರ್ಲ: ಸೃಜನಾತ್ಮಕ ಬೆಳವಣಿಗೆಗಳಿಗೆ ಪೂರಕವಾಗುವ ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಸಮಾಜದ ಕ್ರಿಯಾತ್ಮಕ ನಿರಂತರತೆಗೆ ಬೆನ್ನೆಲುಬಾಗಿವೆೆ. ಭಾಷೆ ಸಂಪರ್ಕ ಮಾಧ್ಯಮ ಮಾತ್ರವಾಗದೆ ವಿಭಿನ್ನ ನೆಲೆಗಳ ವೈವಿಧ್ಯ ಬಳಕೆಗಳಿಂದ ಶ್ರೀಮಂತಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಸಾಹಿತ್ಯಿಕ ಚಟುವಟಿಕೆಗಳು ಸದಾ ನಡೆಯುತ್ತಿರಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಯೋಗೀಶ ರಾವ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಹಿತ್ಯಿಕ-ಸಾಂಸ್ಕೃತಿಕ ಸಂಸ್ಥೆಯಾದ ಸವಿ ಹೃದಯದ ಕವಿ ಮಿತ್ರರು ವೇದಿಕೆ ಪೆರ್ಲ ಕಾಸರಗೋಡು ನೇತೃತ್ವದಲ್ಲಿ ಪೆರ್ಲದ ವ್ಯಾಪಾರಿ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಕರ ಸಂಕ್ರಾಂತಿ ಸಾಹಿತ್ಯ ಸಂಭ್ರಮ ಹಾಗೂ ಅಭಿನಂದನಾ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಗಡಿನಾಡು ಕಾಸರಗೋಡಿನ ಕನ್ನಡ ಭಾಷೆ, ಸಂಸ್ಕೃತಿಯ ಪೂರಕ ಬೆಳವಣಿಗೆ ಇಂದಿನ ಕಾಲಘಟ್ಟದಲ್ಲಿ ಬಲಯುತವಾಗಬೇಕು. ಹೊಸ ತಲೆಮಾರು ಸೃಜನಾತ್ಮಕ, ಗುಣಮಟ್ಟದ ಅಕ್ಷರಗಳನ್ನು ಕಡೆದು ನಿಲ್ಲಿಸುವಲ್ಲಿ ಸಾಹಿತ್ಯ ಚಟುವಟಿಕೆಗಳು ಪ್ರಾಥಮಿಕ ತರಗತಿಗಳಂತೆ ಪರಿಪೋಷಿಸುತ್ತವೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ, ಧಾರ್ಮಿಕ ಮುಂದಾಳು ಸದಾ ನಂದ ಶೆಟ್ಟಿ ಕುದ್ವ ಅವರು ಮಾತನಾಡಿ ಅಂತರಂಗದ ನೈಜತೆಗೆ ಧ್ವನಿ ಯಾಗುವ ಕಥೆ, ಕಾವ್ಯಗಳು ವ್ಯಕ್ತಿಯನ್ನು ಶಕ್ತಿಯಾಗಿ ರೂಪಿಸುತ್ತವೆ. ಕಲೆ, ಸಾಹಿತಿಗಳ ಸಮಾಜ ಕ್ಲೇಶ ರಹಿತವಾಗಿ ಒಗ್ಗಟ್ಟಿನಿಂದ ಮುನ್ನಡೆಸುತ್ತದೆ. ಜನರಲ್ಲಿ ಭಾಷಾಭಿ ಮಾನ, ಆತ್ಮಾಭಿಮಾನವನ್ನು ಸಾಹಿತ್ಯ ಪಡಿಮೂಡಿಸುತ್ತದೆ ಎಂದು ತಿಳಿಸಿದರು.

ಕಣ್ಣೂರು ವಿಶ್ವವಿದ್ಯಾನಿಲಯದಿಂದ ಡಾ| ಉಪ್ಪಂಗಳ ಶಂಕರನಾರಾಯಣ ಭಟ್‌ ಅವರ ಮಾರ್ಗದರ್ಶನದಲ್ಲಿ ಯಕ್ಷಗಾನ ಭಾಗವತಿಕೆಯ ತೆಂಕು ಬಡಗಿನ ತೌಲನಿಕ ಅಧ್ಯಯನ ವಿಷಯದಲ್ಲಿ ಡಾಕ್ಟರೇಟ್‌ ಪದವಿ ಗಳಿಸಿದ ಶಿಕ್ಷಕ, ಯಕ್ಷಗಾನ ಭಾಗವತ ಡಾ.ಸತೀಶ ಪುಣಿಂಚಿತ್ತಾಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ವೇದಿಕೆಯ ಸಂಚಾಲಕ ಸುಭಾಶ್‌ ಪೆರ್ಲ ಹಾಗೂ ಸಂಯೋಜಕ ಪುರುಷೊತ್ತಮ ಭಟ್‌ ಕೆ. ಅವರು ಶಾಲು ಹೊದೆಸಿ, ಅಭಿನಂದನಾ ಪತ್ರಗಳನ್ನಿತ್ತು ಗೌರವಿಸಿದರು.

ಕರ್ನಾಟಕ ಪುಸ್ತಕ ಪ್ರಾಧಿಕಾರದ ಸದಸ್ಯ, ಪ್ರಾಧ್ಯಾಪಕ ಟಿ.ಎ.ಎನ್‌.ಖಂಡಿಗೆ ಅವರು ಅಭಿನಂದನಾ ಭಾಷಣಗೈದರು. ಶಿವಪಡ್ರೆ ಅಭಿನಂದನಾ ಸ್ವರಚಿತ ಗೀತೆ ಹಾಡಿದರು. ವೇದಿಕೆಯ ನಿರ್ದೇಶಕರಾದ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ವೆಂಕಟ್‌ ಭಟ್‌ ಎಡನೀರು, ಹರೀಶ್‌ ಪೆರ್ಲ, ಪ್ರೊ|ಎ.ಶ್ರೀನಾಥ್‌ ಕಾಸರಗೋಡು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಕಥಾಗೋಷ್ಠಿಯ ಅಧ್ಯಕ್ಷತೆಯನ್ನು ಯುವ ಸಾಹಿತಿ ಸೀತಾಲಕ್ಷಿ$¾à ವರ್ಮ ವಿಟ್ಲ ವಹಿಸಿದ್ದರು. ವಿಶೇಷ ಆಕರ್ಷಣೆಯಾಗಿ ವ್ಯಂಗ್ಯಚಿತ್ರ ಕಲಾವಿದ ವೆಂಕಟ್‌ ಭಟ್‌ ಎಡನೀರು ಅವರ ವೈವಿಧ್ಯಮಯ ವ್ಯಂಗ್ಯಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ವೇದಿಕೆಯ ಸಂಚಾಲಕ ಸುಭಾಶ್‌ ಪೆರ್ಲ ಸ್ವಾಗತಿಸಿದರು.. ಪರಮೇಶ್ವರ ನಾಯ್ಕ ಬಾಳೆಗುಳಿ ವಂದಿಸಿದರು. ಪುರುಷೋತ್ತಮ ಭಟ್‌ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಯನ ಹೊಸತನದತ್ತ ಸಾಗಲಿ
ಜಗತ್ತು ಇಂದು ಏಕಸೂತ್ರದಡಿಯಲ್ಲಿ ಒಗ್ಗೂಡಬೇಕು ಎಂಬ ಜಾಗತೀ ಕರಣ ಚಿಂತನೆ ಸಾಧುವಾದರೂ, ಪ್ರಾದೇಶಿಕತೆಯಲ್ಲೂ ನಾವು ಸಾಗಿಬಂದ ಬದುಕು ಇದೆ ಎನ್ನುವುದನ್ನು ಮರೆಮಾಚಲಾ ಗದು. ಈ ಹಿನ್ನೆಲೆಯಲ್ಲಿ ಜನಾಂಗೀಯ ಅಧ್ಯಯನಗಳು ಹೆಚ್ಚು ನಡೆದಂತೆ ಅದರೊಳಗಿನ ಸಂಕೀರ್ಣತೆ ಮತ್ತು ಇತರ ಭಿನ್ನತೆಗಳನ್ನು ಮೀರಿ ನಿಲ್ಲಲು ಸಾಧ್ಯವಾಗುತ್ತದೆ. ಸಾಹಿತ್ಯ, ಅಧ್ಯಯನಗಳು ಈ ನಿಟ್ಟಿನಲ್ಲಿ ಹೊಸತನದತ್ತ ತೆರೆದುಕೊಳ್ಳಬೇಕು. ಮಾಧ್ಯಮ ಎಂದಿಗೂ ವಸ್ತುವಿನ ಪ್ರಸ್ತುತಿಗೆ ಇರುವ ಸಾಧನವಾಗಿದ್ದು, ವಿಷಯದ ಮೇಲೆ ಗರಿಗೆದರಿ ಮೀರಿ ಗೆಲುವಿನ ಲಕ್ಷ Âದತ್ತ ಸಾಗಬಲ್ಲವರಾಗುತ್ತೇವೆ.
-ಡಾ| ಸುಂದರ ಕೇನಾಜೆ ಹಿರಿಯ ಜಾನಪದ ವಿದ್ವಾಂಸ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.