ಗಣೇಶ ವಿಗ್ರಹಗಳಿಗೆ ಅಂತಿಮ ಸ್ಪರ್ಶ

ಸಿದ್ಧಗೊಳ್ಳುತ್ತಿದ್ದಾನೆ ಆವೆ ಮಣ್ಣಿನ ಗಣಪ

Team Udayavani, Aug 31, 2019, 5:28 AM IST

30KSDE6

ಗಣಪನ ಮೂರ್ತಿಗೆ ಅಂತಿಮ ಸ್ಪರ್ಶ ನೀಡುತ್ತಿರುವ ಕಲಾವಿದರು.

ಕಾಸರಗೋಡು: ದೇಶದಲ್ಲಿ ಐಕ್ಯತೆ, ಸಾಮರಸ್ಯವನ್ನು ಮೂಡಿಸುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ನಾಡು ಸಿದ್ಧಗೊಳ್ಳುತ್ತಿದ್ದು, ಗಣೇಶ ವಿಗ್ರಹ ತಯಾರಿ ಭರದಿಂದ ಸಾಗುತ್ತಿದೆ. ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸಹಿತ ಜಿಲ್ಲೆಯ 25 ಕ್ಕೂ ಅಧಿಕ ಪ್ರದೇಶಗಳಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗುತ್ತಿದೆ. ಹಲವು ಮನೆಗಳಲ್ಲೂ ಗಣೇಶ ವಿಗ್ರಹ ಇರಿಸಿ ಗಣೇಶನನ್ನು ಪೂಜಿಸುವ ರೂಢಿ ಹಲವು ವರ್ಷಗಳಿಂದ ಇಲ್ಲಿ ನಡೆದು ಬಂದಿದೆ. ಪೂಜೆಗೊಳ್ಳಲಿರುವ ಗಣೇಶ ವಿಗ್ರಹ ತಯಾರಿ ಎಲ್ಲೆಡೆ ಭರದಿಂದ ಸಾಗುತ್ತಿದೆ.

ದೇವಸ್ಥಾನ, ಮಂದಿರ ಮೊದಲಾದೆಡೆ ಗಳಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಗತ್ಯದ ಶ್ರೀ ಗಣೇಶ ವಿಗ್ರಹ ರಚನೆಯಲ್ಲಿ ಖ್ಯಾತ ಕಲಾವಿದ ಕಾಸರಗೋಡಿನ ನೆಲ್ಲಿಕುಂಜೆಯ ಲಕ್ಷ್ಮೀಶ ಆಚಾರ್ಯ ಅವರು ತೊಡಗಿದ್ದಾರೆ. ಬಹುತೇಕ ಗಣೇಶ ವಿಗ್ರಹ ಕೆಲಸ ಪೂರ್ತಿ ಗೊಂಡಿದ್ದು, ಅಂತಿಮ ಸ್ಪರ್ಶದಲ್ಲಿ ನಿರತರಾಗಿದ್ದಾರೆ.

ಲಕ್ಷ್ಮೀಶ ಆಚಾರ್ಯ ಅವರು ಕಳೆದ 26 ವರ್ಷಗಳಿಂದ ಗಣಪತಿ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಕಾಸರಗೋಡು, ಕಣ್ಣೂರು ಜಿಲ್ಲೆಯ ವಿವಿಧೆಡೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತಿಷ್ಠಾಪನೆಗೊಳ್ಳುತ್ತಿರುವ ಬಹುತೇಕ ಗಣೇಶ ವಿಗ್ರಹ ಲಕ್ಷ್ಮೀಶ ಆಚಾರ್ಯ ಅವರಿಂದಲೇ ತಯಾರಾ ಗುತ್ತಿದೆ. ತಮಿಳುನಾಡಿನ ಕೊಯಮತ್ತೂರಿ ನಲ್ಲೂ ಲಕ್ಷ್ಮೀಶ ಆಚಾರ್ಯ ಅವರ ತಯಾರಿಸಿದ ಗಣಪ ವಿಗ್ರಹ ಪೂಜೆ ಗೊಂಡದ್ದಿದೆ. ಕಾಸರಗೋಡು ಶ್ರೀ ಮಲ್ಲಿ ಕಾರ್ಜುನ ದೇವಸ್ಥಾನದಲ್ಲಿ ಪೂಜೆಗೊಳ್ಳುವ ಗಣಪ ಜಿಲ್ಲೆಯಲ್ಲೇ ಅತ್ಯಂತ ದೊಡ್ಡ ಗಣೇಶ ವಿಗ್ರಹವಾಗಿದೆ. ಬದಿಯಡ್ಕ, ಮುಳಿಂಜ, ಮೇಲ್ಪರಂಬ, ತೃಕ್ಕನ್ನಾಡ್‌, ಕಾಂಞಂಗಾಡ್‌, ಪಯ್ಯನ್ನೂರು, ಕಣ್ಣೂರು ಮೊದಲಾದೆಡೆಗಳಲ್ಲಿ ನಡೆಯುವ ಗಣೇಶೋತ್ಸವಗಳಲ್ಲಿ ಲಕ್ಷ್ಮೀಶ ಆಚಾರ್ಯ ಅವರ ಕರಗಳಲ್ಲಿ ಮೂಡಿಬಂದ ಗಣೇಶನೇ ಪೂಜೆಗೊಳ್ಳುತ್ತಿದ್ದಾನೆ. ಇದಲ್ಲದೆ ತರವಾಡು ಕ್ಷೇತ್ರಗಳಲ್ಲಿ, ಕುಟುಂಬ ಕ್ಷೇತ್ರಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ವಿಗ್ರಹಗಳೂ ಸಿದ್ಧವಾಗುತ್ತಿದ್ದು, ಅಂತಿಮ ಹಂತದಲ್ಲಿದೆ. ಲಕ್ಷ್ಮೀಶ ಆಚಾರ್ಯ ಅವರು ತಯಾರಿಸುವ ಗಣೇಶ ವಿಗ್ರಹಗಳಲ್ಲಿ ತನ್ನದೇ ಆದ ವೈವಿಧ್ಯತೆ ಇದೆ. ಕಲಾತ್ಮಕತೆ, ಆಲಂಕಾರಿಕ ಕುಸುರಿ ಕೆಲಸಗಳು ಅತ್ಯಂತ ಸೊಗಸು ನೀಡುತ್ತವೆ.

ಈ ವರ್ಷ 26 ಗಣೇಶ ವಿಗ್ರಹ ರಚನೆ
ಕಳೆದ 26 ವರ್ಷಗಳಿಂದ ಗಣೇಶ ವಿಗ್ರಹ ರಚನೆ ಕಾಯಕದಲ್ಲಿ ತೊಡಗಿರುವ ನೆಲ್ಲಿಕುಂಜೆಯ ಲಕ್ಷ್ಮೀಶ ಆಚಾರ್ಯ ಅವರು ಈ ವರ್ಷ 26 ಗಣೇಶ ವಿಗ್ರಹಗಳನ್ನು ರಚಿಸುತ್ತಿದ್ದಾರೆ.

ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಪೂಜೆಗೊಳ್ಳುತ್ತಿರುವ ಶ್ರೀ ಗಣೇಶ ವಿಗ್ರಹ ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಗಣೇಶ ವಿಗ್ರಹ. ಸುಮಾರು ಒಂದೂವರೆ ಅಡಿ ಎತ್ತರದಿಂದ ತೊಡಗಿ ಐದು ಅಡಿ ಎತ್ತರದ ವರೆಗಿನ ಗಣೇಶ ವಿಗ್ರಹವನ್ನು ರಚಿಸುತ್ತಿದ್ದಾರೆ.

ಆವೆ ಮಣ್ಣಿನ ಗಣಪ
ಲಕ್ಷ್ಮೀಶ ಆಚಾರ್ಯ ಅವರು ಕಳೆದ 26 ವರ್ಷಗಳಿಂದ ಆವೆ ಮಣ್ಣಿನಿಂದಲೇ ವಿಗ್ರಹವನ್ನು ರಚಿಸುತ್ತಿರುವುದು ವಿಶೇಷ. ಆವೆ ಮಣ್ಣು ಪರಿಸರ ಸ್ನೇಹಿಯಾಗಿರುವ ಕಾರಣದಿಂದ ನೀರಿನಲ್ಲಿ ವಿಷಕಾರಿ ಯಾಗದೇ ಕರಗಬಲ್ಲವು. ಆವೆ ಮಣ್ಣ ಗಣಪತಿಯಾಗಿರುವುದರಿಂದ ನೀರಿಗೂ, ಊರಿಗೂ, ಯಾರಿಗೂ ಹಾನಿಯಾಗುವುದಿಲ್ಲ. ಆರಾಧನಾ ರೂಪದಲ್ಲಿ ಗಣಪನ ವಿಗ್ರಹ ರಚಿಸುತ್ತಿರುವುದು ಲಕ್ಷ್ಮೀಶ ಆಚಾರ್ಯ ಅವರ ವಿಶೇಷತೆಯಾಗಿದೆ. ಗಣಪ ವಿಗ್ರಹ ರಚನೆಗೆ ಸಹೋದರ ಯೋಗೀಶ್‌ ಸಹಿತ ಸಹಕರಿಸುತ್ತಾರೆ.

ಶ್ರದ್ಧೆಯ ಕಲಾವಿದ
ನಾನು ಹಲವು ವರ್ಷಗಳಿಂದ ಲಕ್ಷ್ಮೀಶ ಆಚಾರ್ಯ ತಯಾರಿಸುವ ಗಣೇಶ ವಿಗ್ರಹವನ್ನು ನೋಡುತ್ತಿದ್ದೇನೆ. ಅವರು ತುಂಬ ಶ್ರದ್ಧೆಯಿಂದ ವಿಗ್ರಹ ರಚನೆ ಕಾಯಕವನ್ನು ನಡೆಸುತ್ತಿದ್ದಾರೆ. ಅವರು ರಚಿಸುತ್ತಿರುವ ವಿಗ್ರಹಗಳಲ್ಲಿ ಜೀವಂತಿಕೆಯನ್ನು ಕಾಣಬಹುದಾಗಿದೆ.
– ಶಿವರಾಮ ಕಾಸರಗೋಡು,
ಕಾರ್ಪೊರೇಶನ್‌ ಬ್ಯಾಂಕ್‌ ಸಿಬಂದಿ

ದೇವರ ಸೇವೆ
ವರ್ಷದಿಂದ ವರ್ಷಕ್ಕೆ ವಿಗ್ರಹ ತಯಾರಿಗೆ ಖರ್ಚು ಹೆಚ್ಚುತ್ತಿದೆ. ಗಣೇಶ ವಿಗ್ರಹ ರಚನೆಯನ್ನು ಲಾಭದ ದೃಷ್ಟಿಯಿಂದ ಮಾಡುತ್ತಿಲ್ಲ. ದೇವರ ಸೇವೆಯಾಗಿ ಭಯ, ಭಕ್ತಿ, ನಿಷ್ಠೆಯಿಂದ ಗಣೇಶ ವಿಗ್ರಹವನ್ನು ಕಳೆದ 26 ವರ್ಷಗಳಿಂದ ರಚಿಸುತ್ತಿದ್ದೇನೆ.
– ಲಕ್ಷ್ಮೀಶ ಆಚಾರ್ಯ,
ವಿಗ್ರಹ ರಚನೆಕಾರ, ಕಾಸರಗೋಡು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.