“ಬಾಲಗೋಕುಲದಿಂದ ಸಂಸ್ಕಾರಯುತ ವ್ಯಕ್ತಿತ್ವ ನಿರ್ಮಾಣ’


Team Udayavani, Jan 23, 2020, 11:27 PM IST

balagokula

ಮಂಜೇಶ್ವರ: ಸೇವಾಭಾರತಿಯಿಂದ ಮಂಜೇಶ್ವರ ತಾಲೂಕು ಬಾಲಗೋಕುಲಗಳ “ಗೋಕುಲೋತ್ಸವ’ ಕುಬಣೂರು ಶ್ರೀ ರಾಮ ಎ.ಯು.ಪಿ ಶಾಲೆಯಲ್ಲಿ ನಡೆಯಿತು.

ಬಾಲಗೋಕುಲಗಳ ಮಕ್ಕಳಿಂದ ಶ್ರೀ ಸತ್ಯನಾರಾಯಣ ಭಜನ ಮಂದಿರದಿಂದ ಶ್ರೀ ರಾಮ ಎಯುಪಿ ಶಾಲೆ ಕುಬಣೂರು ತನಕ ಶೋಭಾಯಾತ್ರೆ ನಡೆಯಿತು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ “ಗೋಕುಲೋತ್ಸವ’ದ ಉದ್ಘಾಟನೆಯನ್ನು ಕುಬಣೂರು ಶ್ರೀ ರಾಮ ಎ.ಯು.ಪಿ. ಶಾಲೆಯ ಮುಖ್ಯೋಪಾಧ್ಯಾಯಿನಿ ಅರುಣಾ ಕೆ. ದೀಪ ಪ್ರಜ್ವಲನದ ಮೂಲಕ ನಡೆಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಶೆಟ್ಟಿ, ಬಾಲಗೋಕುಲ ತಾಲೂಕು ಪ್ರಮುಖ್‌ ರಾಮಚಂದ್ರ ಭಟ್‌ ಹಳೆಮನೆ ಉಪಸ್ಥಿತರಿದ್ದರು.

ಉದ್ಘಾಟನೆ ಸಂದರ್ಭದಲ್ಲಿ ಪ್ರಾಸ್ತಾವಿಕ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾಲೇಜು ವಿದ್ಯಾರ್ಥಿ ಪ್ರಮುಖ ಪುರುಷೋ ತ್ತಮ ಪ್ರತಾಪನಗರ ಮಾತನಾಡುತ್ತಾ ಧರ್ಮದ ರಕ್ಷಣೆ ಸಂಸ್ಕಾರಯುತ ವ್ಯಕ್ತಿಗಳಿಂದ ಆಗಬೇಕಿದೆ. ಅಂತಹ ಸಂಸ್ಕಾರಯುತ ವ್ಯಕ್ತಿ ಸಮಾಜ ನಿರ್ಮಾಣದ ಕೆಲಸ ಬಾಲಗೋಕುಲ ಗಳಿಂದ ಆಗುತ್ತಿದೆ. ಇಂದು ನಾವು ಒಬ್ಬ ವ್ಯಕ್ತಿಯ ಕುಟುಂಬದಿಂದ ಹಿಡಿದು ಇಡೀ ರಾಷ್ಟ್ರಕ್ಕೆ ಸಂಬಂ ಧಿಸಿದಂತೆ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈ ಎಲ್ಲ ಸಮಸ್ಯೆಗಳಿಗೆ ವ್ಯಕ್ತಿಯೇ ಕಾರಣ. ಆದರೆ ವ್ಯಕ್ತಿ ಸಂಸ್ಕಾರವಂತನಾಗಿ ಆತ್ಮಕ್ಕೆ ಪೂರಕವಾಗಿ ಬದುಕಿದಾಗ ವ್ಯಕ್ತಿಯ ಜೀವನಕ್ಕೆ ಸರಿಯಾದ ದಿಕ್ಕು ಸಿಗಲು ಸಾಧ್ಯ. ಈ ಬಾಲಗೋಕುಲಗಳ ಮೂಲಕ ಬಾಲ್ಯದಿಂದಲೇ ಹಿಂದೂ ಸಂಸ್ಕಾರ ಕಲಿಸಿ ಕೊಡುವ ಕೆಲಸ ಆಗುತ್ತಿದೆ ಎಂದು ಹೇಳಿದರು.

ಬಳಿಕ ಬಾಲಗೋಕುಲಗಳ ಮಕ್ಕಳಿಗೆ ದೇಶ ಭಕ್ತಿಗೀತೆ, ವಂದೇ ಮಾತರಂ ಹಾಡುವ ಸ್ಪರ್ಧೆ, ಕುಣಿತ ಭಜನೆ ಹಾಗೂ ವಿವಿಧ ಆಟಗಳ ಸ್ಪರ್ಧೆಗಳು ನಡೆದವು. ಗೋಕುಲೋತ್ಸವದಲ್ಲಿ ಮಂಜೇಶ್ವರ ತಾಲೂಕಿನ 27 ಬಾಲಗೋಕುಲಗಳ ಒಟ್ಟು 436 ಮಕ್ಕಳು ಭಾಗವಹಿಸಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಮ ಎಯುಪಿ ಶಾಲೆಯ ಸಂಚಾಲಕಿ ಮೋಕ್ಷದಾ ಬಿ. ಶೆಟ್ಟಿ ವಹಿಸಿದ್ದರು. ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಅವರು ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಆರೆಸ್ಸೆಸ್‌ನ ಪ್ರಾಂತ ಸೇವಾ ಪ್ರಮುಖ್‌ ಸುಬ್ರಾಯ ನಂದೋಡಿ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಬಾಲಗೋಕುಲಗಳ ಮಕ್ಕಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.