ಕ್ರೈಸ್ತ ಬಾಂಧವರಿಂದ ಶುಭ ಶುಕ್ರವಾರ ಆಚರಣೆ 


Team Udayavani, Mar 31, 2018, 9:30 AM IST

Good-Friday-30-3.jpg

ಕಾಸರಗೋಡು: ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನದ ಸ್ಮರಣಾರ್ಥ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಿದರು. ಚರ್ಚ್‌ ಹಾಗೂ ಚರ್ಚ್‌ ಆವರಣದಲ್ಲಿ ಯೇಸುಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ತೊಡಗಿ ಅವರು ಶಿಲುಬೆಯಲ್ಲಿ ಮರಣಿಸಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿವರೆಗಿನ 14 ಪ್ರಮುಖ ಘಟನಾವಳಿಗೆ ಸಂಬಂಧಿಸಿದ ‘ಶಿಲುಬೆಯ ಹಾದಿ’ (ವೇ ಆಫ್‌ ಕ್ರಾಸ್‌) ಆಚರಣೆ ಮಾಡಲಾಯಿತು. ಈ ಮೂಲಕ ಯೇಸು ಕ್ರಿಸ್ತರು ಅನುಭವಿಸಿದ ಕಷ್ಟ – ಸಂಕಷ್ಟಗಳ ಸ್ಮರಣೆ ಮಾಡಿದರು. ಇದೇ ಸಂದರ್ಭ ಧ್ಯಾನ, ಶಿಲುಬೆಯ ಆರಾಧನೆ, ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶುಭ ಶುಕ್ರವಾರದಂದು ಚರ್ಚ್‌ಗಳಲ್ಲಿ ಘಂಟೆಗಳ ಶಬ್ದವಿರುವುದಿಲ್ಲ. ಬಲಿ ಪೂಜೆಯೂ ಇರಲಿಲ್ಲ. ಅತ್ಯಂತ ಭಕ್ತಿಯಿಂದ ನಿಶ್ಯಬ್ದ ಪರಿಸರದಲ್ಲಿ ಕ್ರೈಸ್ತರು ಪ್ರಾರ್ಥನೆ ಸಲ್ಲಿಸಿದರು. ಧ್ಯಾನ ಹಾಗೂ ಉಪವಾಸದಲ್ಲಿ ದಿನ ಕಳೆದರು. ಬೇಳ ಶೋಕಮಾತಾ ದೇವಾಲಯದಲ್ಲಿ ಕಾಸರಗೋಡು ಧರ್ಮವಲಯದ ಪ್ರಧಾನ ಧರ್ಮಗುರು  ಫಾ| ವಲೇರಿಯನ್‌ ಫ್ರ್ಯಾಂಕ್‌ ನೇತೃತ್ವ ನೀಡಿದರು.

ಕಯ್ಯಾರು ಕ್ರಿಸ್ತರಾಜ ದೇವಾಲಯದಲ್ಲಿ ಧರ್ಮಗುರು ಫಾ|  ವಿಕ್ಟರ್‌ ಡಿ’ಸೋಜಾ, ನಾರಂಪಾಡಿ ಜೋನ್‌ ದಿ ಬ್ರಿಟ್ಟೋ ದೇವಾಲಯದಲ್ಲಿ ಧರ್ಮಗುರು ಫಾ| ಜೋನ್‌ ಬ್ಯಾಪ್ಟಿಸ್ಟ್‌ ಡಿ’ಸೋಜಾ, ಕಾಸರಗೋಡು ಶೋಕಮಾತಾ ದೇವಾಲಯದಲ್ಲಿ ಧರ್ಮಗುರು ಫಾ| ಸಂತೋಷ್‌ ಲೋಬೋ, ಕುಂಬಳೆ ಸಂತ ಮೋನಿಕಾ ದೇವಾಲಯದಲ್ಲಿ ಧರ್ಮಗುರು ಫಾ| ಮಾರ್ಸೆಲ್‌ ಸಲ್ಡಾನ, ಪೆರ್ಮುದೆ ಸೈಂಟ್‌ ಲಾರೆನ್ಸ್‌ ಇಗರ್ಜಿಯಲ್ಲಿ ಧರ್ಮಗುರು ಫಾ| ಮೆಲ್ವಿನ್‌ ಫೆನಾಂìಡಿಸ್‌, ವರ್ಕಾಡಿ ಸೇಕ್ರೆಡ್‌ ಹಾರ್ಟ್‌ ಆಫ್‌ ಜೀಸಸ್‌ ಚರ್ಚ್‌ ಧರ್ಮಗುರು ಫಾ| ಫ್ರಾನ್ಸಿಸ್‌ ರೋಡ್ರಿಗಸ್‌, ಕೊಲ್ಲಂಗಾನ ಸೈಂಟ್‌ ಥೋಮಸ್‌ ದಿ ಅಪೋಸ್ತಲ್‌ ಚರ್ಚ್‌ ನಲ್ಲಿ ಧರ್ಮಗುರು ಫಾ| ಡೇನಿಯಲ್‌ ಡಿ’ಸೋಜಾ, ಮಣಿಯಂಪಾರೆ ಸಂತ ಲಾರೆನ್ಸ್‌ ಇಗರ್ಜಿಯಲ್ಲಿ ವಂ| ಫಾ| ಪೌಲ್‌ ಡಿ’ಸೋಜಾ,  ಮರಿಯಾಶ್ರಮ ಅಸುಂಪ್ಶನ್‌ ಆಫ್‌ ಅವರ್‌ ಲೇಡಿ ಇಗರ್ಜಿ ಯಲ್ಲಿ ಫಾ| ಎಡ್ವಿನ್‌ ಮಾಸ್ಕರೇನಸ್‌, ಪಾವೂರು ಹಾಲಿ ಕ್ರಾಸ್‌ ಇಗರ್ಜಿಯಲ್ಲಿ ಧರ್ಮಗುರು ಜೋಸೆಫ್‌ ಕಾರಪಳ್ಳಿಲ್‌, ಮಂಜೇಶ್ವರ ಅವರ್‌ ಲೇಡಿ ಆಫ್‌ ಮೆರ್ಸಿ ಇಗರ್ಜಿಯಲ್ಲಿ ಧರ್ಮಗುರು ಫಾ| ವಲೇರಿಯನ್‌ ಲೂವಿಸ್‌, ಮೀಯಪದವು ಅವರ್‌ ಲೇಡಿ ಆಫ್‌ ಫಾತಿಮಾ ಚರ್ಚ್‌ನಲ್ಲಿ ಧರ್ಮಗುರು ಫಾ| ಅನಿಲ್‌ ಜೋಯಲ್‌ ಡಿ’ಸೋಜಾ, ಉಕ್ಕಿನಡ್ಕ ಸೇಕ್ರೆಡ್‌ ಹಾರ್ಟ್‌ ಆಫ್‌ ಜೀಸಸ್‌ ಇಗರ್ಜಿಯಲ್ಲಿ ಧರ್ಮಗುರು ಫಾ| ಸ್ಟ್ಯಾನಿಲಸ್‌ ಡಿ’ಸೋಜಾ ನೇತೃತ್ವ ನೀಡಿದರು. 40 ದಿನಗಳ ವ್ರತಾಚರಣೆಯ ಅವಧಿಯ ಕೊನೆಯ 7 ದಿನಗಳನ್ನು ಪವಿತ್ರ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ.

ಗರಿಗಳ ರವಿವಾರದೊಂದಿಗೆ ಪ್ರಾರಂಭಗೊಳ್ಳುವ ಈ ಸಪ್ತಾಹ ಈಸ್ಟರ್‌ ರವಿವಾರದಂದು ಮುಕ್ತಾಯಗೊಳ್ಳುತ್ತದೆ. ಈ ಸಪ್ತಾಹದ ಗುರುವಾರ ಯೇಸುಕ್ರಿಸ್ತರ ಕೊನೆಯ ಭೋಜನದ   ದಿನವನ್ನು ಆಚರಿಸಲಾಗುತ್ತದೆ. ಅಂದು ಧರ್ಮಾಧ್ಯಕ್ಷರು ಹಾಗೂ ಧರ್ಮಗುರುಗಳಿಂದ 12 ಮಂದಿ ಕ್ರೈಸ್ತರ ಪಾದ ತೊಳೆಯುವ ಕಾರ್ಯಕ್ರಮದ ಜತೆಗೆ ಪರಮ ಪ್ರಸಾದದ ಸಂಸ್ಕಾರ ಮತ್ತು ಧರ್ಮಗುರುಗಳ ದೀಕ್ಷಾಸಂಸ್ಕಾರದ ಪ್ರತಿಷ್ಠಾಪನಾ ದಿನಾಚರಣೆ ನಡೆಯುತ್ತದೆ.

ಶುಕ್ರವಾರ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನದ ಸ್ಮರಣೆ. ಜನರ ಪಾಪಗಳಿಗಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ಯೇಸುಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದರು ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ದಿನವನ್ನು ಶುಭ ಶುಕ್ರವಾರವನ್ನಾಗಿ ಆಚರಿಸಲಾಗುತ್ತದೆ. ಯೇಸುಕ್ರಿಸ್ತರ ಪುನರುತ್ಥಾನ ದಿನವಾದ ಎಪ್ರಿಲ್‌ ಒಂದರಂದು ಈಸ್ಟರ್‌ ಹಬ್ಬವನ್ನು ಆಚರಿಸಲಾಗುತ್ತಿದೆ. ಮಾ.31ರಂದು ರಾತ್ರಿ ಚರ್ಚ್‌ಗಳಲ್ಲಿ ವಿಧಿವಿಧಾನ ದಿವ್ಯ ಬಲಿಪೂಜೆ ನಡೆಯಲಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.