ಕೊಡಗು: ಕಾವೇರಿ ಮಟ್ಟ ಹೆಚ್ಚಳ, ಅಲ್ಲಲ್ಲಿ ರಸ್ತೆ ಬಿರುಕು
Team Udayavani, Jul 7, 2019, 12:05 PM IST
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಕಾವೇರಿ ನದಿ ನೀರಿನ ಮಟ್ಟ ಹೆಚ್ಚಾಗಿದೆ. ಮಡಿಕೇರಿಯ ವಿವಿಧೆಡೆ ಬರೆ ಕುಸಿತ ಮತ್ತು ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.
ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜೀವನದಿ ಕಾವೇರಿ ನದಿ ಪಾತ್ರದಲ್ಲಿ ಹರ್ಷ ಮೂಡಿದೆ. ಹೆಚ್ಚೇನೂ ಗಾಳಿ ಇಲ್ಲದಿದ್ದರೂ ಕೆಲವೆಡೆಗಳಲ್ಲಿ ಮರಗಳು ಧರೆಗುರುಳಿರುವ ಘಟನೆಗಳು ನಡೆದಿವೆ. ನದಿ, ಕಿರುತೊರೆ, ಹೊಳೆಗಳಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.
ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಇಳಿಯುವ ಮೆಟ್ಟಿಲುಗಳು ಜಲಾವೃತವಾಗಿದ್ದು, ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಎರಡು- ಮೂರು ದಿನಗಳಲ್ಲಿ ಪ್ರವಾಹವೇರ್ಪಡುವ ಸಾಧ್ಯತೆಗಳಿದೆ. ಕಾವೇರಿ ನದಿ ಪಾತ್ರದ ಮೂರ್ನಾಡು ಬಲಮುರಿ, ಸಿದ್ದಾಪುರ, ಕುಶಾಲನಗರ ವಿಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿಯ ಅವಧಿಯಲ್ಲಿ ಭಾರೀ ಮಳೆೆಯಾಗಿದ್ದು, ಹಗಲಿನ ವೇಳೆ ಸಾಧಾರಣ ಮಳೆಯಾಗಿದೆ.
ರಸ್ತೆಯಲ್ಲಿ ಬಿರುಕು
ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ರಸ್ತೆಯಲ್ಲಿ ಕಾಣಿಸಿಕೊಂಡಂತೆಯೇ ಸೋಮವಾರಪೇಟೆ ರಸ್ತೆಯ ಅಂಚಿನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಜನ ಆತಂಕಗೊಂಡಿದ್ದಾರೆ. ಮುಂಜಾಗ್ರತೆಯಾಗಿ ಜಿಲ್ಲಾಡಳಿತ ಬ್ಯಾರಿಕೇಡ್ಗಳನ್ನು ಅಳವಡಿಸಿ, ರಸ್ತೆಯ ಒಂದು ಭಾಗದಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್