ಅಕ್ರಮ ಮತದಾನ ಶಿಕ್ಷಾರ್ಹ ಅಪರಾಧ


Team Udayavani, Apr 23, 2019, 6:00 AM IST

akrama-matadana

ಕಾಸರಗೋಡು: ಮಗದೊಬ್ಬನ ಮತದಾನವನ್ನು ಅಕ್ರಮವಾಗಿ ನಡೆಸಲು (ಅಕ್ರಮ ಮತದಾನ)ಯತ್ನಿಸಿದವರ ಮತ್ತು ಒಮ್ಮೆ ಮತದಾನ ನಡೆಸಿದ ವಿಚಾರವನ್ನು ಗುಟ್ಟಾಗಿರಿಸಿ ಮತ್ತೂಮ್ಮೆ ಮತ ಚಲಾಯಿಸಲು ಯತ್ನಿಸುವುದು ಜನಪ್ರಾತಿನಿಧ್ಯ ಕಾನೂನು ಪ್ರಕಾರ ಮತ್ತು ಭಾರತೀಯ ದಂಡ ಸಂಹಿತೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಅಂಥ ಆರೋಪಿಗಳಿಗೆ ಐ.ಪಿ.ಸಿ. 171 ಎಫ್‌. ಪ್ರಕಾರ ಒಂದು ವರ್ಷದ ವರೆಗೆ ಸಜೆ ಮತ್ತು ದಂಡ ವಿಧಿಸಲಾಗುವುದು.

ಯಾರದ್ದಾದರೂ ಪ್ರೇರಣೆ ಯಿಂದ ಅಕ್ರಮ ಮತದಾನ ನಡೆಸಿದರೂ ಅದು ಶಿûಾರ್ಹ ವಾಗಿದ್ದು, ಶಿಕ್ಷೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಇನ್ನೊಬ್ಬರ ಗುರುತು ಚೀಟಿಯನ್ನು ಅಕ್ರಮವಾಗಿ ಸಿದ್ಧಪಡಿಸಿ ಅಕ್ರಮ ಮತದಾನ ನಡೆಸಲು ಯತ್ನಿಸಿದರೆ ಅಕ್ರಮ ದಾಖಲೆ ನಿರ್ಮಾಣ ನಡೆಸಿದ ಮತ್ತು ಇನ್ನೊಬ್ಬರ ಮತವನ್ನು ಅಕ್ರಮವಾಗಿ ಚಲಾಯಿಸಿದ ಆರೋಪದಲ್ಲಿ ಕೇಸು ದಾಖಲಿಸಲಾಗುವುದು. ನೆರೆ ರಾಜ್ಯಗಳಲ್ಲಿ ಈಗಾಗಲೇ ಮತದಾನ ನಡೆಸಿ, ಜಿಲ್ಲೆಯ ಗಡಿಪ್ರದೇಶದಲ್ಲಿ ವಾಸವಾಗಿರುವ ಮಂದಿ ಮತ್ತೆ ಕಾಸರಗೋಡಿನಲ್ಲಿ ಮತದಾನ ನಡೆಸಲು ಯತ್ನಿಸಿದರೆ ಅಂಥವರ ಬಗ್ಗೆ ನಿಗಾ ಇರಿಸಲು ಪ್ರತ್ಯೇಕ ನಿರೀಕ್ಷಕರನ್ನು ನೇಮಿಸಲಾಗಿದೆ. ಇಂಥಾ ಯತ್ನವನ್ನು ಯಾರಾದರೂ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ ಬಾಬು ತಿಳಿಸಿದರು.

ವಿದೇಶದಲ್ಲಿರುವ, ಬೇರೆ ರಾಜ್ಯದಲ್ಲಿರುವ ವ್ಯಕ್ತಿಗಳ ಮತದಾತರ, ಮತದಾತರ ಪಟ್ಟಿಯಲ್ಲಿ ಹೆಸರು ಹೊಂದಿರುವ, ಆದರೆ ನಿಧನರಾಗಿರುವ ವ್ಯಕ್ತಿಗಳ ಹೆಸರಲ್ಲಿ ಅಕ್ರಮವಾಗಿ ದಾಖಲೆ ನಿರ್ಮಿಸಿ, ಮತದಾನ ನಡೆಸಲು ಯತ್ನಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ನಿಜವಾದ ಮತದಾತರನ್ನು ಗುರುತಿಸಲು ಕರ್ತವ್ಯದಲ್ಲಿರುವ ಸಿಬಂದಿ ಯತ್ನಿಸಬೇಕು. ಮತದಾತರ ಗುರುತು ಸಂಬಂಧ ದೂರುಗಳಿದ್ದಲ್ಲಿ ಕಾನೂನು ರೀತ್ಯಾ ಕ್ರಮಗಳು ಪೂರ್ಣಗೊಂಡ ನಂತರವಷ್ಟೇ ಮತದಾನ ನಡೆಸಲು ಅನುಮತಿ ನೀಡಬೇಕು. ಟೆಂಡರ್‌ ಮತ ಚಲಾಯಿಸುವುದಿದ್ದರೆ, ಮತಯಂತ್ರದಲ್ಲಿ ನಡೆಸಲು ಅನುಮತಿ ನೀಡಕೂಡದು.

ಯಾವುದೇ ಅಭ್ಯರ್ಥಿಗೆ ಮತದಾನ ನಡೆಸುವ ನಿಟ್ಟಿನಲ್ಲಿ ಹಣ ಯಾ ಇನ್ನಿತರ ಕೊಡುಗೆ ನೀಡಿಕೆ, ಬೆದರಿಕೆ ಇನ್ನಿತರ ರೂಪದಲ್ಲಿ ಪ್ರೇರೇಪಣೆ ನೀಡಿದರೆ, ಯಾವುದಾದರೂ ರೂಪದಲ್ಲಿ ಮತದಾನ ನಡೆಸುವುದಕ್ಕೆ ತಡೆಮಾಡಿದರೆ, ಮತಗಟ್ಟೆ ಬಳಿ ತಡೆಮಾಡುವುದು, ಸಂಘರ್ಷಕ್ಕೆ ಯತ್ನಿಸಿದರೆ ಕ್ರಮ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.