ಕೇರಳದಲ್ಲಿ ಪೊಲೀಸರ ಆತ್ಮಹತ್ಯೆ ಪ್ರಕರಣ ಹೆಚ್ಚಳ

4 ವರ್ಷಗಳ‌ಲ್ಲಿ 54 ಮಂದಿ ಪೊಲೀಸರ ಆತ್ಮಹತ್ಯೆ ; ಕೌನ್ಸೆಲಿಂಗ್‌ ಎಸ್‌.ಐ.ಯೇ ಆತ್ಮಹತ್ಯೆ

Team Udayavani, Jan 13, 2020, 5:48 AM IST

12KSDE15

ಕಾಸರಗೋಡು: ವಿವಿಧ ಕಾರಣಗಳಿಂದಾಗಿ ಕೇರಳದಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸಹಿತ ಪೊಲೀಸರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಕೇರಳದ 54 ಮಂದಿ ಪೊಲೀಸರು ಆತ್ಮಹತ್ಯೆಗೆ ಶರಣಾಗಿದ್ದರು.

ಕಳೆದ ಶುಕ್ರವಾರ ಅಂದರೆ ಜ. 10ರಂದು ಕೇರಳದ ಕೊಲ್ಲಂನಲ್ಲಿ ಇತ್ತೀಚೆಗಿನ ಪೊಲೀಸ್‌ ಆತ್ಮಹತ್ಯೆಯಾಗಿದೆ. ಕೊಲ್ಲಂ ಜಿಲ್ಲೆಯ ಎಳ್‌ಕೋನ್‌ ಪೊಲೀಸ್‌ ಠಾಣೆ ಹೆಡ್‌ ಕಾನ್‌ಸ್ಟೆàಬಲ್‌ ಸ್ಟಾಲಿನ್‌ (52) ಸೇವಾ ಅವಧಿಯಲ್ಲಿ ಜನರೇಟರ್‌ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ನಿರಂತರವಾಗಿ ಪೊಲೀಸರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕೃತ್ಯವನ್ನು ತಡೆಗಟ್ಟಲು ಅವರನ್ನು ಮಾನಸಿಕವಾಗಿ ದೃಢಗೊಳಿಸಲು ಪ್ರತ್ಯೇಕ ತರಬೇತಿಯನ್ನು ಕಳೆದ ಸೆಪ್ಟಂಬರ್‌ ತಿಂಗಳಲ್ಲಿ ಆರಂಭಿಸ ಲಾಗಿತ್ತು. ಪೊಲೀಸರನ್ನು ಮಾನಸಿಕವಾಗಿ ಗಟ್ಟಿಗೊಳಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹಿರಿಯ ಅಧಿಕಾರಿ ಗಳ ಸಭೆ ಕರೆದು ನಿರ್ದೇಶಿಸಿ ದಂತೆ ಪೊಲೀಸರ ಮಾನಸಿಕ ಹಾಗೂ ಕುಟುಂಬ ಸಮಸ್ಯೆಗಳಿಗೆ ಪರಿಹಾರ ಕಾಣಲು ಸೈಕಾಲಜಿಸ್ಟ್‌ ಸಹಿತ ಸಮಿತಿಯನ್ನು ರಚಿಸಲಾಗಿತ್ತು.

ಮಾನಸಿಕ ಸಮಸ್ಯೆಗಳನ್ನು ಎದುರಿಸು ತ್ತಿರುವ ಪೊಲೀಸರನ್ನು ಕೌನ್ಸೆಲಿಂಗ್‌ಗೆ ಕಳುಹಿಸಲು ಮತ್ತು ಈ ಕಾಲಾವಧಿಯನ್ನು ಡ್ನೂಟಿ ಯಲ್ಲಿದ್ದುದಾಗಿ ದಾಖಲಿಸಲು ಡಿ.ಜಿ.ಪಿ. ಲೋಕನಾಥ್‌ ಬೆಹ್ರಾ ಆದೇಶ ಹೊರಡಿಸಿದ್ದರು. ಇದೇ ಸಂದರ್ಭದಲ್ಲಿ ದುಃಖದ ಘಟನೆಯೊಂದು ನಡೆಯಿತು. ಪೊಲೀಸ್‌ ಅಕಾಡೆಮಿಯಲ್ಲಿ ಕೌನ್ಸಿಲಿಂಗ್‌ ನಡೆಸುತ್ತಿದ್ದ ಎಸ್‌.ಐ. ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಜ. 10 ರಂದು ಪೊಲೀಸ್‌ ಹೆಡ್‌ ಕಾನ್‌ಸ್ಟೆàಬಲ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣಗಳು
ಅಮಿತ ಕೆಲಸದ ಒತ್ತಡ, ಸಾಕಷ್ಟು ರಜೆ ಲಭಿಸದಿರುವುದು, ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಹಿಂಸೆ, ಸಣ್ಣ ಅಪರಾಧಕ್ಕೂ ಶಿಕ್ಷಿಸುವ ಸನ್ನಿವೇಶ, ಕುಟುಂಬ ಸಮಸ್ಯೆಗಳು.

ಸಮಸ್ಯೆಯತ್ತ ಗಮನ ಅಗತ್ಯ
ಪೊಲೀಸ್‌ ಇಲಾಖೆಯಲ್ಲಿ ನಡೆಯುತ್ತಿರುವ ಪೊಲೀಸ್‌ ಅಧಿಕಾರಿಗಳ ಸಹಿತ ಪೊಲೀಸರ ಆತ್ಮಹತ್ಯೆಯನ್ನು ತಡೆಗಟ್ಟಲು ಹಿರಿಯ ಅಧಿಕಾರಿಗಳ ಮತ್ತು ಸಾಮಾನ್ಯ ಪೊಲೀಸ್‌ ಸಿಬಂದಿ ಮಧ್ಯೆ ಆರೋಗ್ಯ ಪೂರ್ಣ ಸಂಬಂಧ ಬೆಳೆಯಬೇಕು. ವಿಶ್ರಾಂತಿಗೆ ಅವಕಾಶ ನೀಡಬೇಕು. ವೆÂಯಕ್ತಿಕ ಹಾಗೂ ಕುಟುಂಬ ಸಂಬಂಧ ಸಮಸ್ಯೆಗಳ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕು.
– ಪಿಣರಾಯಿ ವಿಜಯನ್‌,
ಮುಖ್ಯಮಂತ್ರಿ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.