ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Jul 16, 2019, 5:43 AM IST

Crime-545

ದೇವಸ್ಥಾನದಿಂದ ಕಳವು:
ಇನ್ನೊಬ್ಬನ ಬಂಧನ
ಕಾಸರಗೋಡು: ನೀಲೇಶ್ವರ ನಾರಾನ್‌ಕುಳಂಗರ ಶ್ರೀ ಮಹಾವಿಷ್ಣು ದೇವಸ್ಥಾನದಿಂದ ಆರು ಪವನ್‌ ಚಿನ್ನಾಭರಣವನ್ನು ಕಳವು ಮಾಡಿದ ಸಂಬಂಧ ಇನ್ನೋರ್ವ ಆರೋಪಿಯನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಸುರತ್ಕಲ್‌ ಸಮೀಪದ ಕಾಟಿಪಳ್ಳದ ಹಮೀದ್‌(45)ನನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲಂ ನಿವಾಸಿ ದೀಪಕ್‌ ಸುರೇಂದ್ರನ್‌ (39), ನೀಲೇಶ್ವರ ಚೆರುಪುರಂನ ಪ್ರಭಾಕರನ್‌ ಎಂ.ಎಸ್‌. (48) ಮತ್ತು ಪ್ರಕಾಶನ್‌(38)ನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು.

ಬ್ಯಾಂಕ್‌ ಕಾರ್ಯದರ್ಶಿಗೆ ಇರಿದ
ಪ್ರಕರಣ: ಚಾಲಕನ ಬಂಧನ
ಮಂಜೇಶ್ವರ: ಮಂಜೇಶ್ವರ ಕೃಷಿ ಅಭಿವೃದ್ಧಿ ಬ್ಯಾಂಕ್‌ನ ಕಾರ್ಯದರ್ಶಿ ಮೈಲಾಟಿ ನಿವಾಸಿ ಟಿ. ವಿಜಯನ್‌ (56) ಅವರಿಗೆ ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕ್‌ನ ಜೀಪು ಚಾಲಕ ಶೇಣಿ ನಿವಾಸಿ ರಮೇಶನ್‌ (41)ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಲಯ ಎರಡು ವಾರಗಳ ರಿಮಾಂಡ್‌ ವಿಧಿಸಿದೆ.

ರಸ್ತೆ ಬದಿ ಕೋಣನ ಕೊಂಬು ಪತ್ತೆ
ಬದಿಯಡ್ಕ: ಇಲ್ಲಿಗೆ ಸಮೀಪದ ಕರಿಂಬಿಲದ ರಸ್ತೆ ಬದಿ ಗೋಣಿ ಚೀಲದಲ್ಲಿ ಕಟ್ಟಿ ಉಪೇಕ್ಷಿಸಿದ ಸ್ಥಿತಿಯಲ್ಲಿ ಕೋಣನ ಕೊಂಬುಗಳೆರಡು ಪತ್ತೆಯಾಗಿವೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ವಾಹನದಲ್ಲಿ ತಂದು ಇಲ್ಲಿ ಯಾರೋ ಉಪೇಕ್ಷಿಸಿರಬೇಕೆಂದು ಶಂಕಿಸಲಾಗಿದೆ.

ಮಟ್ಕಾ ದಂಧೆ : ಮೂವರ ಬಂಧನ
ಮಂಜೇಶ್ವರ: ತಲಪಾಡಿ ಬಸ್‌ ತಂಗುದಾಣದ ಪರಿಸರದಲ್ಲಿ ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಕಣ್ವತೀರ್ಥ ನಿವಾಸಿ ಅರುಣ್‌ ಕುಮಾರ್‌ (39), ಕೆ.ಸಿ. ರೋಡ್‌ ನಿವಾಸಿ ದಯಾನಂದ (49) ಮತ್ತು ತಲಪಾಡಿ ನಿವಾಸಿ ವಿನ್ಸೆಂಟ್‌ (61)ನನ್ನು ಬಂಧಿಸಿದ ಮಂಜೇಶ್ವರ ಪೊಲೀಸರು ಇವರಿಂದ 4,620 ರೂ. ವಶಪಡಿಸಿಕೊಂಡಿದ್ದಾರೆ.

ಶಂಕಿತ ಯುವಕನ ಬಂಧನ
ಕಾಸರಗೋಡು: ಕೂಡ್ಲು ಚೌಕಿ ಪರಿಸರದಲ್ಲಿ ಜು.14 ರಂದು ರಾತ್ರಿ ಶಂಕಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಎರ್ದುಂಕಡವಿನ ರಮೀಸ್‌ (28)ನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಅನುಚಿತ ವರ್ತನೆ: ಕೇಸು ದಾಖಲು
ಕಾಸರಗೋಡು: ನಗರದ ಕೆಎಸ್‌ಆರ್‌ಟಿಸಿ ಬಸ್‌ ತಂಗುದಾಣದ ಪರಿಸರದಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆರ್ಕಳ ಪಾಲಡ್ಕದ ಅಬ್ದುಲ್‌ ರಜಾಕ್‌ನ ವಿರುದ್ಧ ಕಾಸರಗೋಡು ಪೊಲೀಸರು ಕೇಸು ದಾಖಲಿಸಿದ್ದಾರೆ.

ಕೊಲೆ ಪ್ರಕರಣ :
ವಿಚಾರಣೆ ಪುನರಾರಂಭ
ಕಾಸರಗೋಡು: ಕುಂಬಳೆ ಶಾಂತಿಪಳ್ಳ ಶ್ರೀ ಗೋಪಾಲ ಕೃಷ್ಣ ಸಭಾಂಗಣ ಬಳಿಯ ರಾಮನ್‌ ಕುಟ್ಟಿ ಅವರ ಪುತ್ರ, ಸಿಪಿಎಂ ಕಾರ್ಯಕರ್ತ ಪಿ. ಮುರಳೀಧರನ್‌ (38) ಕೊಲೆ ಪ್ರಕರಣದ ವಿಚಾರಣೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (ದ್ವಿತೀಯ) ದಲ್ಲಿ ಆ. 1ರಿಂದ ಪುನರಾರಂಭಗೊಳ್ಳಲಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.