ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Jul 18, 2019, 5:26 AM IST

Crime-545

ತುಂಡಾಗಿ ಬಿದ್ದ ವಿದ್ಯುತ್‌ ತಂತಿ:
ಶಾಕ್‌ ತಗಲಿ ಮಹಿಳೆ ಸಾವು
ಕುಂಬಳೆ: ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಎಂದು ತಿಳಿಯದೆ ಹಿತ್ತಿಲಲ್ಲಿದ್ದ ತಂತಿಯನ್ನು ತೆಗೆಯುವ ವೇಳೆ ಮಹಿಳೆ ಶಾಕ್‌ ತಗಲಿ ಸಾವಿಗೀಡಾದರು. ತಂತಿಯನ್ನು ಕೈಯಲ್ಲಿ ಹಿಡಿದುಕೊಂಡ ಸ್ಥಿತಿಯಲ್ಲಿ ಹಿತ್ತಿಲಲ್ಲಿ ಬಿದ್ದಿದ್ದ ಮೃತದೇಹವನ್ನು ದೂರದ ಸಂಬಂಧಿಕರು ಬುಧವಾರ ಬೆಳಗ್ಗೆ ಪತ್ತೆಹಚ್ಚಿದ್ದಾರೆ.

ಶೇಡಿಕಾವು ನಿವಾಸಿ ದಿ| ರಾಧಾಕೃಷ್ಣ ಮಯ್ಯ ಅವರ ಪತ್ನಿ ಕಲಾವತಿ (52) ಅವರು ಸಾವಿಗೀಡಾದವರು. ಕಲಾವತಿ ಅವರು ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದರೂ ಅವರೆಲ್ಲ ವಿವಾಹವಾಗಿ ಪತಿಯೊಂದಿಗಿದ್ದಾರೆ. ಮನೆಯಿಂದ ಕೆಲವೇ ದೂರದಲ್ಲಿ ಸಂಗ್ರಹಿಸಿಡಲಾಗಿದ್ದ ಕಟ್ಟಿಗೆಯನ್ನು ತೆಗೆಯಲು ಹೋದಾಗ ದುರಂತ ಸಂಭವಿಸಿರಬೇಕೆಂದು ಶಂಕಿಸಲಾಗಿದೆ.

ಎಂಡೋ ಸಂತ್ರಸ್ತ ಕುಸಿದು ಬಿದ್ದು ಸಾವು
ಬದಿಯಡ್ಕ: ಎಂಡೋ ಸಂತ್ರಸ್ತ ಯಾದಿಯಲ್ಲಿ ಸೇರ್ಪಡೆಗೊಂಡಿದ್ದ ಕನ್ಯಪ್ಪಾಡಿ ಬಾಪೊಲಿ ಪೊನಂ ಕಂಬಾರ್‌ ಮನೆಯ ನಿವಾಸಿ ಮುಹಮ್ಮದ್‌ ಅವರ ಪುತ್ರ ಜುನೈದ್‌ (23) ಅವರು ಮನೆಯಲ್ಲಿ ಕುಸಿದು ಬಿದ್ದು ಸಾವಿಗೀಡಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

ಮದ್ಯ ಸಹಿತ ಬಂಧನ
ಕುಂಬಳೆ: ಸೀತಾಂಗೋಳಿಯಿಂದ 14 ಬಾಟಿÉ ವಿದೇಶಿ ಮದ್ಯ ಸಹಿತ ಬೇಳ ಕೊಲ್ಲಂಗಾನದ ರಫೇಲ್‌ ಡಿ’ಸೋಜಾ (45)ನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಿ.ಎಂ.ಎಸ್‌. ಕಾರ್ಯಕರ್ತನಿಗೆ

ಇರಿತ: ಇನ್ನೋರ್ವನ ಬಂಧನ
ಕಾಸರಗೋಡು: ವಿದ್ಯಾನಗರ ಬಳಿಯ ನೆಲ್ಕಳ ನಿವಾಸಿ, ಬಿಎಂಎಸ್‌ ಕಾರ್ಯಕರ್ತ ಪ್ರಶಾಂತ್‌ (33) ಅವರಿಗೆ ಇರಿದು ಹತ್ಯೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಚೆಂಗಳ ಎರ್ಮಾಳಂ ನಿವಾಸಿ ಅಬೂಬಕ್ಕರ್‌ ಸಿದ್ದಿಕ್‌ ಯಾನೆ ತಮ್ಮು (22)ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ. ಈ ಹಿಂದೆ ಐವರನ್ನು ಪೊಲೀಸರು ಬಂಧಿಸಿದ್ದರು.

ಗೋದಾಮಿನಿಂದ ಕಳವು
ಕಾಸರಗೋಡು: ವಿದ್ಯಾನಗರ ಸ್ಟೇಡಿಯಂ ಬಳಿಯ ಚಿಲ್ಡ್ರನ್ಸ್‌ ಪಾರ್ಕ್‌ ಗೋದಾಮಿಗೆ ನುಗ್ಗಿದ ಕಳ್ಳರು ಸುಮಾರು 3.5 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಕಾಸರಗೋಡು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 5,000 ವೋಲ್ಟ್ನ 4ಆ್ಯಂಪ್ಲಿಫಯರ್‌, 10 ಫೋಕಸ್‌ ಲೈಟ್‌ಗಳು, 6 ಕಲರ್‌ ಲೈಟ್‌ಗಳು ಮತ್ತು 1 ಟನ್‌ ನಟ್‌ ಮತ್ತು ಬೋಲ್ಟ್‌ಗಳನ್ನು ಕಳವು ಮಾಡಲಾಗಿದೆ.

ಯುವಕನಿಗೆ ಹಲ್ಲೆ
ಕಾಸರಗೋಡು: ಕೂಡ್ಲು ವೀವರ್ಸ್‌ ಕಾಲನಿಯ ಐಶ್ವರ್ಯ ನಿಲಯದ ಸೂರ್ಯ ಕುಮಾರ್‌ (25) ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶರತ್‌ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮನೆಗೆ ಬೆಂಕಿ
ಕಾಸರಗೋಡು: ಎರಿಯಾಲ್‌ ಬಳಿಯ ರಾ.ಹೆದ್ದಾರಿ ಪಕ್ಕದ ಅಬ್ದುಲ್‌ ರಜಾಕ್‌ ಅವರ ಮನೆಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಮನೆಯ ಮೇಲ್ಛಾವಣಿ ಮತ್ತು ವಿವಿಧ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸಿತು. ಯಾರಿಗೂ ಅಪಾಯ ಸಂಭವಿಸಲಿಲ್ಲ.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.