ಇಕ್ಕೇರಿ ರಾಜರ ಕಾಸರಗೋಡು ಕೋಟೆ ಬರುಜು ಕುಸಿತ


Team Udayavani, Aug 25, 2019, 6:08 AM IST

kasargod

ಕಾಸರಗೋಡು : ಸುಮಾರು 600 ವರ್ಷಗಳ ಇತಿಹಾಸವುಳ್ಳ ಹಾಗು ಕನ್ನಡಿಗರ ಶೌರ್ಯ, ಸಾಹಸದ ಪ್ರತೀಕ ವಾಗಿರುವ, ಇಕ್ಕೇರಿ ರಾಜರು ನಿರ್ಮಿಸಿ ರುವ ಕಾಸರಗೋಡು ಕೋಟೆಯ ಬುರುಜು ಗಾಳಿ ಮಳೆಗೆ ಕುಸಿದು ಬಿದ್ದಿದೆ. ಕಾಡು ಪೊದೆ ಬೆಳೆದು ಕೋಟೆಯ ಬುರುಜು ಯಾರ ಗೋಚರಕ್ಕೂ ಬರುತ್ತಿರ ಲಿಲ್ಲ. ಗಾಳಿ ಮಳೆಯಿಂದಾಗಿ ಕೋಟೆ ಬುರು ಜಿನ ಕಲ್ಲು ಕುಸಿಯುತ್ತಿದ್ದಂತೆ ಕೋಟೆಗೆ ಹಾನಿ ಯಾಗಿರುವುದು ಕಂಡು ಬಂತು. ಇಕ್ಕೇರಿ ರಾಜರು ಕಾಸರಗೋಡು ಕೋಟೆಯನ್ನು ನಿರ್ಮಿಸಿದ್ದರು.

ವರ್ಷಗಳ ಹಿಂದೆ ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ವ್ಯಕ್ತಿಗಳು ಕೋಟೆಯನ್ನು ಯಾರ ಗಮನಕ್ಕೂ ಬಾರದಂತೆ ಮಾರಾಟ ಮಾಡಲು ಯತ್ನ ನಡೆದಿತ್ತು. ಕೋಟೆ ಮಾರಾಟ ಬಯಲಾಗುತ್ತಿದ್ದಂತೆ ಪ್ರತಿಭಟನೆ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಹಿಂದಿನ ಜಿಲ್ಲಾಧಿಕಾರಿಗಳ ಆದೇಶದಂತೆ ಕಂದಾಯ ಇಲಾಖೆ ಕೋಟೆಯನ್ನು ವಶಕ್ಕೆ ತೆಗೆದು ಕೊಂಡಿತ್ತು. ಕೋಟೆ ಮಾರಾಟ ಸಂಬಂಧ ಸರಕಾರಿ ಅಧಿಕಾರಿಗಳು ಸಹಿತ 15 ಮಂದಿ ವಿರುದ್ಧ ಕಾಸರಗೋಡು ವಿಜಿಲೆನ್ಸ್‌ ಕೇಸು ದಾಖಲಿಸಿತ್ತು. ಮಾರಾಟ ಪ್ರಕರಣ ತನಿಖೆ ಇನ್ನೂ ನಡೆಯುತ್ತಿದೆ.

ಕೋಟೆಯ ದುರಸ್ತಿ ಹಾಗು ನವೀಕರಿಸ ದಿರುವುದರಿಂದಾಗಿ ಕೋಟೆಯ ಒಂದು ಭಾಗ ಕುಸಿದು ಬೀಳಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕೋಟೆಯನ್ನು ಅಭಿವೃದಿ§ ಪಡಿಸಿದರೆ ಪ್ರವಾಸೋದ್ಯಮ ಕೇಂದ್ರವಾಗಿಯೂ ಅಭಿವೃದ್ಧಿ ಹೊಂದಲಿದೆ ಎಂದು ಸ್ಥಳೀಯರು ಅಭಿಪ್ರಾಯಪಡುತ್ತಿದ್ದಾರೆ.

ಕಾಡು ಪೊದೆ

ಕಾಸರಗೋಡು ನಗರದಿಂದ ಫೋರ್ಟ್‌ ರೋಡ್‌ ಮೂಲಕ ಕಾಸರಗೋಡು ಕೋಟೆಗೆ ರಸ್ತೆಯಿದ್ದರೂ ಕಾಸರಗೋಡು ಕೋಟೆ ಎಲ್ಲಿದೆ ಎಂಬುದು ಹಲವರಿಗೆ ತಿಳಿದಿಲ್ಲ ಎಂಬ ಪರಿಸ್ಥಿತಿಯೂ ಇದೆ. ಕಾಡು ಪೊದೆ ಬೆಳೆದು ಕೋಟೆ ಗೋಚರಿಸುತ್ತಿಲ್ಲ. ಕೋಟೆಯೊಳಗೆ ಬುರುಜುಗಳು, ಕೆರೆಗಳು, ವೀಕ್ಷಣ ಬತ್ತೇರಿಗಳಿವೆ. ಕೋಟೆಯೊಳಗೆ ಆಂಜನೇಯ ದೇವಸ್ಥಾನವೂ ಇದೆ. ಈ ದೇವಸ್ಥಾನವನ್ನು ಕೆಲವು ವರ್ಷಗಳ ಹಿಂದೆ ನವೀಕರಿಸಿ, ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದಿತ್ತು.

ನಕಲಿ ದಾಖಲೆ

ಕಾಸರಗೋಡು ಕೋಟೆಯನ್ನು ಪ್ರಾಚ್ಯ ವಸ್ತು ಇಲಾಖೆ ವಶಪಡಿಸಿಕೊಂಡಿದ್ದರೂ ಕೋಟೆಗೆ ಸೇರಿದ 4.80 ಎಕರೆ ಸ್ಧಳವನ್ನು ಕೆಲವು ಖಾಸಗಿ ವ್ಯಕ್ತಿಗಳು ನಕಲಿ ದಾಖಲೆ ಸೃಷ್ಟಿಸಿ ವಶಪಡಿಸಿಕೊಳ್ಳಲು ಯತ್ನಿಸಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು. ಕೆಲವು ದಿನಗಳ ಕಾಲ ಇದರ ವಿರುದ್ಧ ಪ್ರತಿಭಟನೆಯೂ ನಡೆದಿತ್ತು.

ಎರಡು ವಾರಗಳ ಹಿಂದೆ ಇತಿಹಾಸ ಪ್ರಸಿದ್ಧ ಬೇಕಲ ಕೋಟೆಯ ಬುರುಜು ಕುಸಿದು ಬಿದ್ದಿರುವುದು ನೆನಪಿಸಬಹುದು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.