ಪಯಸ್ವಿನಿಗೆ ಚೆಕ್‌ ಡ್ಯಾಂ: ಕಾಮಗಾರಿ ಆರಂಭ


Team Udayavani, Mar 29, 2019, 6:06 AM IST

Payaswini-River

ಬದಿಯಡ್ಕ: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆಯಿಂದಾಗಿ ಜಲಮಟ್ಟವು ವೇಗವಾಗಿ ಕುಸಿಯುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಾರ್ಚ್‌ ಮಾಸದಲ್ಲೇ ನೀರಿನ ಸಮಸ್ಯೆ ಎದುರಾಗಿರುವುದರಿಂದ ಸೂಕ್ತ ಪರಿಹಾರಕ್ಕಾಗಿ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಬೆಳ್ಳೂರು ಪ್ರದೇಶದ ಜನರ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ.

ಪಯಸ್ವಿನಿ ನದಿಯ ನೀರನ್ನು ಕುಂಟಾರು ಪ್ರದೇಶ ದಿಂದ ಬೆಳ್ಳೂರು ಗ್ರಾಮ ಪಂಚಾಯಿತಿಯ ಪ್ರದೇಶ ಗಳಿಗೆ ಹಾಯಿಸುವ ಜಲ ನಿಧಿ ಯೋಜನೆಯ ಕಾಮಗಾರಿಗಳು ಪೂರ್ತಿಗೊಂಡಿದ್ದು, ಈಗ ಜನರ ಬೇಡಿಕೆಯಂತೆ ಪಯಸ್ವಿನಿ ನದಿಗೆ ಕುಂಟಾರಿನಲ್ಲಿ ಚೆಕ್‌ ಡಾಂ ನಿರ್ಮಾಣ ಕಾಮಗಾರಿ ಸಾಗುತ್ತಿದೆ.

ಜಲನಿಧಿಯು ಚೆಕ್‌ ಡಾಂ ನಿರ್ಮಾಣಕ್ಕಾಗಿ ಹಣ ಬಿಡುಗಡೆಗೊಳಿಸಿದರೂ ಟೆಂಡರ್‌ ಕಾರ್ಯಚಟು ವಟಿಕೆಗಳು ಪೂರ್ತಿಯಾಗದ ಕಾರಣ ಕಾಮಗಾರಿ ಒಂದು ವರ್ಷ ತಡವಾ ಗಿದೆ. ಚೆಕ್‌ ಡ್ಯಾಂ ನಿರ್ಮಿಸದೆ ಬೆಳ್ಳೂರಿಗೆ ಜಲ ವಿತರಣೆ ಆರಂಭಿಸಬಾರದು ಎಂಬ ತೀರ್ಮಾನದ ಹಿನ್ನೆಲೆಯಲ್ಲಿ ಬೆಳ್ಳೂರಿಗೆ ಜಲ ವಿತರಣೆ ಆರಂಭಗೊಂಡಿರಲಿಲ್ಲ. ಬೇಸಗೆಯಲ್ಲಿ ಪಯಸ್ವಿನಿಯು ಬತ್ತಿ ಕುಂಟಾರಿನ ಜನರೂ ನೀರಿಗಾಗಿ ಒದ್ದಾಡಬೇಕಾಗುತ್ತಿರುವುದು ನಿಜಸ್ಥಿತಿ.

ಈ ಹಿನ್ನೆಲೆಯಲ್ಲಿ ಜಲ ವಿತರಣಾ ಯೋಜನೆಯ ಬಾವಿ ತೋಡಿದ ಸ್ಥಳಕ್ಕಿಂತ ಕೆಳ ಭಾಗದಲ್ಲಿ, ಅಂದರೆ ಕುಂಟಾರು ತೂಗು ಸೇತುವೆಗಿಂತ 75 ಮೀಟರ್‌ನಷ್ಟು ದೂರದಲ್ಲಿ ಚೆಕ್‌ ಡಾಂ ನಿರ್ಮಿಸಲಾಗುತ್ತಿದೆ. ಕಳೆದ ಮೂರು ತಿಂಗಳ ಹಿಂದೆಯೇ ಚೆಕ್‌ ಡಾಂ ನಿರ್ಮಿಸಲು ಅಗತ್ಯವಾದ ಕಾಮಗಾರಿ ಆರಂಭಗೊಂಡಿತ್ತು. ಆದರೆ ನದಿಯಲ್ಲಿ ನೀರಿನ ಹರಿವು ಇದ್ದ ಕಾರಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿತ್ತು. ಈಗ ಪಯಸ್ವಿನಿಯು ಬತ್ತಿದ ಸ್ಥಿತಿಗೆ ತಲಪಿದ್ದು ಚೆಕ್‌ ಡ್ಯಾಂ ನಿರ್ಮಿಸಲು ಅಗತ್ಯವಾದ ಫೌಂಡೇಶನ್‌ ಹಾಕುವ ಕೆಲಸ ನಡೆಯುತ್ತಿದೆ. ಪಯಸ್ವಿನಿ ನದಿಯ ನೀರನ್ನು ತಡೆ ಹಿಡಿಯಲು ಕಾಮಗಾರಿ ಮಾತ್ರವಲ್ಲದೆ ಎರಡು ಮೀಟರ್‌ ಎತ್ತರದ ನೀರನ್ನು ತಡೆದು ನಿಲ್ಲಿಸುವ ಕಾಂಕ್ರೀಟ್‌ ತಡೆಗೋಡೆಯನ್ನು ನಿರ್ಮಿಸಲಾಗುತ್ತಿದೆ. ಸುಮಾರು 93 ಮೀಟರ್‌ನಷ್ಟು ಉದ್ದದ ಈ ತಡೆಗೋಡೆ ನಿರ್ಮಾಣ ನಡೆಯಲಿದೆ.

ಸಮಸ್ಯೆ ಕಟಿಟ್ಟ ಬುತ್ತಿ
ಫೆ„ಬರ್‌ ಹಲಗೆಗಳನ್ನು ಉಪಯೋಗಿಸಿ ಇದರ ಕಾರ್ಯನಿರ್ವಹಣೆ ನಡೆಯಲಿದ್ದು ಮಳೆಗಾಲದಲ್ಲಿ ನೀರನ್ನು ತೆರೆದು ಬಿಡುವ ವ್ಯವಸ್ಥೆ ಮಾಡಲಾಗಿದೆ. ಕಾಮಗಾರಿಯು ಆಮೆನಡಿಗೆಯಲ್ಲಿ ನಡೆಯುತ್ತಿದ್ದು ಮಳೆಗಾಲ ಆರಂಭವಾಗುವ ಮೊದಲೇ ಕಾಮಗಾರಿ ಪೂರ್ತಿಗೊಳಿಸದಿದ್ದರೆ ಸಮಸ್ಯೆ ಕಟಿಟ್ಟ ಬುತ್ತಿ. ಇನ್ನೂ ಸಾಕಷ್ಟು ಕೆಲಸ ಬಾಕಿ ಇದ್ದು ಚೆಕ್‌ ಡಾಮ್‌ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದರೂ ಬೇಸಗೆಯ ಮಳೆಯು ಇದ್ದಕ್ಕಿದ್ದಂತೆ ಸುರಿದರೆ ಪಯಸ್ವಿನಿಯಲ್ಲಿ ನೀರಿನ ಹರಿವು ಆರಂಭವಾಗಿ ಕಾಮಗಾರಿ ಸ್ಥಗಿತಗೊಳ್ಳಬಹುದು. ಕಳೆದ ವರ್ಷ ಮಾರ್ಚ್‌ ತಿಂಗಳಲ್ಲಿ ಭಾರೀ ಮಳೆ ಸುರಿದಿತ್ತು. ಅಷ್ಟೇ ಅಲ್ಲದೆ ಈಗಾಗಲೇ ನೀರನ್ನು ತಡೆ ಹಿಡಿಯಲು ದೇಗುಲ ಪರಿಸರದಿಂದ ತಂದು ನದಿಯಲ್ಲಿ ರಾಶಿ ಹಾಕಿದ ಮಣ್ಣು ಸಮುದ್ರ ಪಾಲಾಗಬಹುದು. ಕಾಮಗಾರಿಯನ್ನು ಈ ವರ್ಷ ಮುಂದುವರಿಸಲು ಅಸಾಧ್ಯವಾಗದಿದ್ದಲ್ಲಿ ಭಾರೀ ನಷ್ಟಕ್ಕೂ ಎಡೆಯಾಗಬಹುದು.

ಬೆಳ್ಳೂರಿಗೆ ನೀರು
ಬೆಳ್ಳೂರು ಗ್ರಾಮ ಪಂಚಾಯತಿನ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಮಗ್ರವಾಗಿ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ವಿಶ್ವ ಬ್ಯಾಂಕಿನ ನೆರವಿನೊಂದಿಗೆ ರಾಜ್ಯ ಸರಕಾರ, ಗ್ರಾಮ ಪಂಚಾಯತ್‌ನ ಆರ್ಥಿಕ ಸಹಾಯದೊಂದಿಗೆ ಬೆಳ್ಳೂರು ಗ್ರಾಮ ಪಂಚಾಯತಿನ 13 ವಾರ್ಡುಗಳ 1126 ಕುಟುಂಬಗಳಿಗೆ ಸಹಾಯಕವಾಗುವಂತೆ 7.37 ಕೋಟಿ ರೂಪಾಯಿ ವೆಚ್ಚದ ಬೃಹತ್‌ ಕುಡಿಯುವ ನೀರಿನ ಯೋಜನೆ ಇದಾಗಿದೆ. ಯೋಜನೆಯಂತೆ ಕಾರಡ್ಕ ಗ್ರಾಮ ಪಂಚಾಯತಿಗೆ ಸೇರಿದ ಕುಂಟಾರು ಶ್ರೀ ಕ್ಷೇತ್ರ ಸಮೀಪದಲ್ಲಿ ಹರಿಯುವ ಪಯಸ್ವಿನಿ ನದಿಯಿಂದ ನೀರನ್ನು, ನದಿಗೆ ಹೊಂದಿಕೊಂಡು ಬೃಹತ್‌ ಬಾವಿಯನ್ನು ಕೊರೆದು, ಇದಕ್ಕೆ 50 ಅಶ್ವಶಕ್ತಿಯ ನೀರೆತ್ತುವ ಪಂಪನ್ನು ಜೋಡಿಸಿ, ಕುಂಟಾರು-ಮಾಯಿಲಂಕೋಟೆ ಮೂಲಕ ಮಿಂಚಿಪದವಿನಲ್ಲಿ ನಿರ್ಮಿಸುವ ಸಂಗ್ರಹಣಾ ಟ್ಯಾಂಕಿಯಲ್ಲಿ ಶೇಖರಿಸಿ ಅಲ್ಲಿಂದ ಬೆಳ್ಳೂರನ್ನು ತಲಪಿಸುವ ಯೋಜನೆ ಇದಾಗಿದೆ. ಇದಕ್ಕಾಗಿ ಸುಮಾರು 10ಕಿ.ಮೀ. ಉದ್ದಕ್ಕೆ ಕೊಳವೆಯನ್ನು ಜೋಡಿಸಬೇಕಾಗಿದೆ.

ಮಳೆಗಾಲ ಪ್ರಾರಂಭವಾಗುವುದರೊಂದಿಗೆ ಕಾಮಗಾರಿ ಪೂರ್ತಿಯಾಗಿ ಮುಂದಿನ ದಿನಗಳಲ್ಲಿ ಜನರ ಬಹುದೊಡ್ಡ ಸಮಸ್ಯೆಗೆ ಇದು ಪರಿಹಾರ ನೀಡಬಹುದೆಂಬ ನಿರೀಕ್ಷೆ ಇಲ್ಲಿನ ಜನರ ಕಣ್ಣಲ್ಲಿ.

ಕಲಕಿದ ನೀರಿನ ಸಮಸ್ಯೆ
ಚೆಕ್‌ ಡ್ಯಾಮ್‌ ನಿರ್ಮಾಣದ ಸಂದರ್ಭದಲ್ಲಿ ಸುರಿದ ಮಣ್ಣು ಮತ್ತು ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಸಂಗ್ರಹವಾಗುತ್ತಿರುವ ನೀರನ್ನು ಹಲವು ಮೋಟಾರುಗಳ ಮೂಲಕ ಕಟ್ಟಿ ನಿಂತ ನೀರಿಗೆ ಹಾಯಿಸುವ ಕಾರಣ ಈ ಪ್ರದೇಶದಲ್ಲಿರುವ ನೀರು ಸಂಪೂರ್ಣ ಕಲಕಿದೆ. ಹೀಗಾಗಿ ಕುಂಟಾರು ಕ್ಷೇತ್ರ ಮತ್ತು ಇಲ್ಲಿನ ಪರಿಸರ ನಿವಾಸಿಗಳು ಸಮಸ್ಯೆಯನ್ನು ಎದುರಿಸಬೇಕಾಗುತ್ತಿದೆ.

ವರದಾನವಾಗಬಲ್ಲ ಯೋಜನೆ
ಗ್ರಾಮೀಣ ಪ್ರದೇಶವಾಗಿರುವ ಬೆಳ್ಳೂರು ಗ್ರಾಮ ಪಂಚಾಯತಿಗೆ ಈ ಕುಡಿಯುವ ನೀರಿನ ಯೋಜನೆ ವರದಾನವಾಗಬಹುದು. ಇಲ್ಲಿ ಬೇಸಗೆ ಬಂತೆಂದರೆ ನೀರಿಗಾಗಿ ಒದ್ದಾಟ ಅರಂಭವಾಗುತ್ತದೆ. ಪರ್ಲಾಂಗುಗಳ ತನಕ ನೀರಿಗಾಗಿ ಸಾಗ ಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ಕಾಲನಿ ನಿವಾಸಿಗಳು ಸಹ ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಮಿಂಚಿ ಪದವಿನಲ್ಲಿ ಎರಡೂವರೆ ಲಕ್ಷ ಲೀಟರ್‌ ಸಾಮಾರ್ಥ್ಯದ ನೀರು ಸಂಗ್ರಹಣಾ ಟ್ಯಾಂಕಿ ನಿರ್ಮಾಣ ನಡೆಯಲಿದೆ. ಇಲ್ಲಿಂದ ಕಿರು ನೀರು ಸಂಗ್ರಾಹಕಗಳಿಗೆ ವಿತರಿಸಿ, ಅಲ್ಲಿಂದ ಮನೆ ಮನೆಗೂ ನೀರು ಒದಗಿಸುವ ಯೋಜನೆ ಇದಾಗಿದೆ. ಕೊಳವೆ ಜೋಡಿಸುವ ಕಾಮಗಾರಿಯೂ ನಡೆಯಬೇಕಿದೆ. 7.37 ಕೋಟಿ ರೂಪಾಯಿಯ ಈ ಯೋಜನೆಯಂತೆ 15 ಶೇಕಡಾ ಖರ್ಚನ್ನು ಗ್ರಾಮ ಪಂಚಾಯತ್‌, 10 ಶೇಕಡಾ ಖರ್ಚನ್ನು ಫಲಾನುಭವಿಗಳು ಭರಿಸುತ್ತಿದ್ದಾರೆ. ಕುಂಟಾರು ಪ್ರದೇಶದಲ್ಲಿ ಪಯಸ್ವಿನಿ ನದಿಗೆ ಹೊಂದಿಕೊಂಡು ಬƒಹತ್‌ ಪಂಪಿಂಗ್‌ ಕೇಂದ್ರ ತಯಾರಾಗಿದೆ. ಇದರಲ್ಲಿ ಅಗತ್ಯವಾದ ಯೋಜನೆಗೆ ನೀರು ಹಾಯಿಸುವ ಮೋಟಾರನ್ನು ಜೋಡಿಸಲಾಗಿದೆ.

ವಿದ್ಯುತ್‌ಸಂಪರ್ಕವೂ ಲಭಿಸಿದ ಹಿನ್ನೆಲೆಯಲ್ಲಿ ಪ್ರಾಯೋಗಿಕ ನೀರು ಹಾಯಿಸುವಿಕೆಯೂ ನಡೆಯುತ್ತಿದೆ. ಈ ಯೋಜನೆಯ ಕಾಮಗಾರಿಯನ್ನು 2014, ಎಪ್ರಿಲ್‌ ತಿಂಗಳಲ್ಲಿಯೇ ಆರಂಭಿಸಲಾಗಿತ್ತು. ಕುಂಟಾರಿನ ಜನರ ವಿರೋಧದ ಕಾರಣದಿಂದಾಗಿ ಬಾವಿಕೊರೆಯುವ ಕಾಮಗಾರಿಯನ್ನು ನಿಲ್ಲಿಸಬೇಕಾಯಿತು. ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಯೋಜನೆ ಬಗ್ಗೆ ಅಧಿಕೃತರು ಭೇಟಿ ನೀಡಿ ಸ್ಥಳೀಯ ಜನರೊಂದಿಗೆ ಮಾತುಕತೆ ನಡೆಸಿದ್ದರು. ಸ್ಥಳೀಯರ ಒತ್ತಾಯದ ಹಿನ್ನೆಲೆಯಲ್ಲಿ ಪಯಸ್ವಿನಿ ನದಿಗೆ ಕುಂಟಾರು ಪ್ರದೇಶದಲ್ಲಿ ನಬಾರ್ಡ್‌ ನೇತƒತ್ವದಲ್ಲಿ ಚೆಕ್‌ ಡ್ಯಾಮ್‌ ನಿರ್ಮಿಸಲು ನಿರ್ಧರಿಸಿದುದರ ಪರಿಣಾಮವೇ ಈ ಡ್ಯಾಮ್‌.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.