ಕಾಸರಗೋಡು ಲೋಕಸಭಾ ಕ್ಷೇತ್ರ: ಶಾಂತಿಯುತ ಮರುಮತದಾನ

ಬೋಗಸ್‌ ಮತದಾನದಿಂದಾಗಿ ರದ್ದುಗೊಂಡಿತ್ತು

Team Udayavani, May 20, 2019, 6:07 AM IST

Untitled-1

ಕಾಸರಗೋಡು: ಬೋಗಸ್‌ ಮತದಾನದ ಹಿನ್ನೆಲೆಯಲ್ಲಿ ಮತದಾನ ರದ್ದುಪಡಿಸಿದ ಕಾಸರಗೋಡು ಲೋಕಸಭಾ ಕ್ಷೇತ್ರದ ನಾಲ್ಕು ಮತ್ತು ಕಣ್ಣೂರು ಲೋಕಸಭಾ ಕ್ಷೇತ್ರದ ಮೂರು ಬೂತ್‌ಗಳಲ್ಲಿ ರವಿವಾರ ಶಾಂತಿಯುತ ಮರುಮತದಾನ ನಡೆಯಿತು.

ಮುಂಜಾನೆ 5 ಗಂಟೆಗೆ ಮತಗಟ್ಟೆಯಲ್ಲಿ ಮತದಾರರು ಸರದಿಯಲ್ಲಿ ನಿಂತಿದ್ದರು. ಮರುಮತದಾನದ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತು ಏರ್ಪಡಿಸಲಾಗಿತ್ತು. ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌, ವೀಡಿಯೋ ಕವರೇಜ್‌ ಏರ್ಪಡಿಸಲಾಗಿತ್ತು.

ತಹಶೀಲ್ದಾರ್‌ ರ್‍ಯಾಂಕ್‌ನಲ್ಲಿರುವ ಅಧಿಕಾರಿಗಳು ಪ್ರಿಸೈಡಿಂಗ್‌ ಆಫೀಸರ್‌ಗಳಾಗಿ ಕರ್ತವ್ಯ ನಿರ್ವಹಿಸಿ ದ್ದರು. ಪ್ರತಿ ಬೂತ್‌ಗೆ ಹೆಚ್ಚುವರಿಯಾಗಿ ತಲಾ ಒಬ್ಬರಂತೆ ನೇಮಿಸಲಾಗಿತ್ತು.
ಯುಡಿಎಫ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಮತದಾನ ಚಲಾಯಿಸಲು ಸರದಿಯಲ್ಲಿ ನಿಂತಿದ್ದ ಮತದಾರರಲ್ಲಿ ಮತ ಯಾಚಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಪಿಲಾತ್ತರ ಯು.ಪಿ. ಶಾಲೆಯಲ್ಲಿ ಕೆಲಹೊತ್ತು ವಿವಾದಕ್ಕೆ ಕಾರಣವಾಗಿತ್ತು.

ಕಾಸರಗೋಡು ಎಸ್‌. ಪಿ. ಜೇಮ್ಸ್‌ ಜೋಸೆಫ್‌ ಸಹಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿವಾದವನ್ನು ಪರಿಹರಿಸಿದರು. ಕಣ್ಣೂರು ಲೋಕಸಭಾ ಕ್ಷೇತ್ರದ ಕುನ್ನುರಿಕ ಬೂತ್‌ನಲ್ಲಿ ದೃಷ್ಟಿಯಿಲ್ಲದ ಮಹಿಳೆಯ ಜತೆಯಲ್ಲಿ ಮತ ಚಲಾಯಿಸಲು ಬಂದ ವ್ಯಕ್ತಿಯನ್ನು ವಾಪಸು ಕಳುಹಿಸಿದ್ದರಿಂದ ಕೆಲ ಹೊತ್ತು ಮತದಾನ ಸ್ಥಗಿತಗೊಂಡಿತ್ತು. ಮಹಿಳೆಯ ಜತೆಗೆ ಬಂದ ವ್ಯಕ್ತಿಯಲ್ಲಿ ಗುರುತು ಚೀಟಿ ಇಲ್ಲದಿದ್ದುದರಿಂದಾಗಿ ವಾಪಸು ಕಳುಹಿಸಲಾಗಿತ್ತು. ಮತದಾರರಿಗೆ ಮಾತ್ರವೇ ಗುರುತು ಚೀಟಿ ಇದ್ದರೆ ಸಾಕು ಎಂಬುದು ಅರಿವಾದಾಗ ಮತದಾನ ಮಾಡಲು ಅವಕಾಶ ನೀಡಲಾಯಿತು.

ಮತಯಂತ್ರ ಕಿರಿಕ್‌; ಮತದಾನ ತಡ
ಇದೇ ಮತಗಟ್ಟೆಯಲ್ಲಿ ಮತಯಂತ್ರ ಕೆಟ್ಟು ಹೋದುದರಿಂದ ಕೆಲವು ಹೊತ್ತು ಮತದಾನ ಸ್ಥಗಿತಗೊಂಡಿತ್ತು. ದುರಸ್ತಿಯ ಬಳಿಕ ಮತದಾನ ಮುಂದುವರಿಯಿತು.

ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಪಿಲಾತ್ತರ ಯು.ಪಿ. ಸ್ಕೂಲ್‌, ಪುದಿಯಂಗಾಡಿ ಜಮಾಅತ್‌ ಹೈಸ್ಕೂಲ್‌ನಲ್ಲಿ ಎರಡು ಬೂತ್‌ಗಳು, ಕಳಿಯಾಡ್‌ ಸರಕಾರಿ ಹೈಯರ್‌ ಸೆಕೆಂಡರಿ ಸ್ಕೂಲ್‌ಗ‌ಳಲ್ಲಿ ಮರುಮತದಾನ ನಡೆಯಿತು.

ಉಣ್ಣಿತ್ತಾನ್‌ ವಿರುದ್ಧ ದೂರು
ಮರುಮತದಾನ ನಡೆಯುತ್ತಿರುವ ಪಿಲಾತ್ತ‌ರ ಸ್ಕೂಲ್‌ಗೆ ತಲುಪಿದ ಯುಡಿಎಫ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ 19ನೇ ನಂಬ್ರ ಬೂತ್‌ನಲ್ಲಿ ಸರದಿಯಲ್ಲಿ ನಿಂತಿದ್ದ ಮತದಾರರಲ್ಲಿ ಮತ ಯಾಚಿಸಿದ್ದಾಗಿ ಎಲ್‌ಡಿಎಫ್‌ ಸಂಚಾಲಕ ಎ.ವಿ. ರವೀಂದ್ರನ್‌ ದೂರು ನೀಡಿದ್ದಾರೆ.

ಬೆಳಗ್ಗೆ 6.30ಕ್ಕೆ ಉಣ್ಣಿತ್ತಾನ್‌ ಮತ ಯಾಚಿಸಿದ್ದು ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಯಾಗಿದೆಯೆಂದೂ ಈ ಬಗ್ಗೆ ಕ್ರಮ ತೆಗೆದುಕೊಳ್ಳ ಬೇಕೆಂದೂ ದೂರಿನಲ್ಲಿ ಮನವಿ ಮಾಡಿದ್ದಾರೆ. ಬೋಗಸ್‌ ಮತದಾನದ ಹಿನ್ನೆಲೆಯಲ್ಲಿ ಪಿಲಾತ್ತ‌ರ ಬೂತ್‌ನಲ್ಲಿ ಮರುಮತದಾನ ನಡೆಸಲಾಗಿತ್ತು.

ಮಹಿಳಾ ಸಿಬಂದಿ ನೇಮಕ
ಮುಖವನ್ನು ಮುಚ್ಚುವಂಥ ಉಡುಪು ಧರಿಸಿರುವ (ಬುರ್ಖಾಧಾರಿ) ಮಹಿಳೆಯರನ್ನು ಮುಸುಕು ಸರಿಸಿ ಮುಖ ನೋಡಿ ಗುರುತಿಸುವ ನಿಟ್ಟಿನಲ್ಲಿ ಮಹಿಳಾ ಸಿಬಂದಿಯನ್ನು ಈ ನಿಟ್ಟಿನಲ್ಲಿ ನೇಮಕಗೊಳಿಸಲಾಗಿತ್ತು.

ಪೊಲೀಸ್‌ ಬಿಗಿ ಭದ್ರತೆ
ಅಕ್ರಮ ಮತದಾನ ನಡೆದಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡು ಲೋಕಸಭೆ ಕ್ಷೇತ್ರದ ತೃಕ್ಕರಿಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 48ನೇ ನಂಬ್ರ ಮತಗಟ್ಟೆ ಯಾಗಿರುವ ಕುಳಿಯಾಟ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು. 133 ಪೊಲೀಸರನ್ನು ಸುರಕ್ಷೆ ಅಂಗವಾಗಿ ನೇಮಿಸಲಾಗಿದೆ. ವೆಬ್‌ ಕಾಸ್ಟಿಂಗ್‌ ಮೂಲಕ ಮತದಾನದ ಪ್ರಕ್ರಿಯೆಗಳನ್ನು ಜಿಲ್ಲಾ ಧಿಕಾರಿ ಡಾ| ಡಿ| ಸಜಿತ್‌ ಬಾಬು ವೀಕ್ಷಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.