ಕೇರಳ: ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ಹೆಚ್ಚಳ


Team Udayavani, Feb 22, 2017, 4:01 PM IST

herasment.jpg

ಕೇರಳ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ವಿರುದ್ಧ ಅಪರಾಧ ಕೃತ್ಯಗಳು ಹೆಚ್ಚುತ್ತಲೇ ಇವೆ. 2007ನಲ್ಲಿ 9,381 ಅಪರಾಧ ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 14,061 ಕ್ಕೇರಿದೆ. 2009ರ ವರೆಗೆ 10 ಸಾವಿರಕ್ಕಿಂತ ಕೆಳಗೆ ಅಪರಾಧ ಕೃತ್ಯಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಆ ಬಳಿಕ ಹತ್ತು ಸಾವಿರಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳು ನಡೆದಿದ್ದು, ಪೊಲೀಸರು ಈ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಹಲವು ಪ್ರಕರಣಗಳು ಪೊಲೀಸ್‌ ಠಾಣೆ ಮೆಟ್ಟಲೇರದೆ ಮುಚ್ಚಿ ಹೋದವುಗಳು ಸಾಕಷ್ಟಿದೆ. ಆ ವರದಿ ಈ ಅಂಕಿಅಂಶದಲ್ಲಿಲ್ಲ. 2010 ರಲ್ಲಿ 10,781 ಅಪರಾಧ ಕೃತ್ಯಗಳಿಗೇರಿತು. 2011 ರಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧ ಕೃತ್ಯಗಳು ಕಡಿಮೆಯಲ್ಲ. 13,279 ಕ್ಕೇರಿತು. ಆ ಬಳಿಕ ಮುಂದಿನ ಮೂರು ವರ್ಷಗಳಲ್ಲಿ ಗಮನಾರ್ಹ ಕುಸಿತ ಕಂಡು ಬಂದಿಲ್ಲ. ಆದರೆ 2015 ರಲ್ಲಿ ಕೇಸುಗಳ ಸಂಖ್ಯೆ 12,383 ಕ್ಕೆ ಕುಸಿದರೂ, 2016 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅಪರಾಧ ಕೃತ್ಯಗಳಲ್ಲಿ ಹೆಚ್ಚಳ ಉಂಟಾಗಿದೆ.

ಕಾಸರಗೋಡು: ಹೇಳಿಕೇಳಿ ಕೇರಳ “ದೇವರ ನಾಡು'(!). ಸಂಪೂರ್ಣ ಸಾಕ್ಷರತೆಯ ಕೋಡು ಬೇರೆ. ಬುದ್ಧಿಜೀವಿಗಳೆಂಬ (!) ಹಣೆಪಟ್ಟಿ. ಹೀಗೆ ಹಲವು ವಿಶೇಷಣಗಳಿಂದ ಕೂಡಿದ ಕೇರಳದ  ಅರಾಜಕತೆ ನೋಡಿದರೆ ಈ ರಾಜ್ಯಕ್ಕೆ ಈ ವಿಶೇಷಣಗಳು ಎಷ್ಟು ಸೂಕ್ತ  ಎಂಬ ಪ್ರಶ್ನೆ ಹಲವರನ್ನು ಕಾಡಿದ್ದರೆ ಅಚ್ಚರಿಯಿಲ್ಲ.

ಕೇರಳದಾದ್ಯಂತ ದಿನಾ ನಡೆಯುತ್ತಿರುವ ಹಿಂಸೆ, ಕೊಲೆ ಪ್ರಕರಣಗಳ ಬೆನ್ನಲ್ಲೇ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ ಇವುಗಳೆಲ್ಲ ಕೇರಳವನ್ನು ಎಲ್ಲಿಗೆ ಕೊಂಡೊಯುತ್ತಿವೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಗಳು. ದಿನಗಳ ಹಿಂದೆ ಚಿತ್ರ ನಟಿಯ ಮೇಲಿನ ಅತ್ಯಾಚಾರ ಕೇರಳೀಯರಿಗೆ ದೊಡ್ಡ “ಶಾಕ್‌’ ನೀಡಿದೆ. ಕೇರಳದಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಲೇ ಇದ್ದು ಕೇರಳೀಯರು ತಲೆತಗ್ಗಿಸುವಂತಾಗಿದೆ. ಪ್ರತೀ ವರ್ಷ ಕೇರಳದಲ್ಲಿ ಅತ್ಯಾಚಾರಕ್ಕೆ ಬಲಿಯಾಗುತ್ತಿರುವವರ ಮಹಿಳೆಯರ ಸಂಖ್ಯೆ ಬರೋಬರಿ 978. ಲೈಂಗಿಕ ಕಿರುಕುಳಕ್ಕೆ ತುತ್ತಾಗುವವರ ಸಂಖ್ಯೆ ಕಡಿಮೆಯಲ್ಲ. 3,510 ಮಹಿಳೆಯರು ಲೈಂಗಿಕ ಕಿರುಕುಳಕ್ಕೆ ಈಡಾಗುತ್ತಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ಮಹಿಳೆಯರ ಮೇಲೆ ಅತೀ ಹೆಚ್ಚು ಲೈಂಗಿಕ ದೌರ್ಜನ್ಯ ನಡೆದ ವರ್ಷ 2016. 1,644 ಅತ್ಯಾಚಾರ ಪ್ರಕರಣ ಮತ್ತು 4,035 ಲೈಂಗಿಕ ಕಿರುಕುಳ ನಡೆದು ದಾಖಲೆಯನ್ನೇ(!) ಸೃಷ್ಟಿಸಿದೆ. ರಾಜ್ಯದ ರಾಜಧಾನಿ ತಿರುವನಂತಪುರದಲ್ಲೇ ಅತ್ಯಂತ ಹೆಚ್ಚಿನ ಸಂಖ್ಯೆಯ ಮಹಿಳೆಯರು ದೌರ್ಜನಕ್ಕೆ ತುತ್ತಾಗುತ್ತಿದ್ದಾರೆ.

ತಿರುವನಂತಪುರದಲ್ಲಿ ಪ್ರತೀ ವರ್ಷ ಸರಾಸರಿ 136.5 ಮಂದಿ ಮಹಿಳೆಯರು ಅತ್ಯಾಚಾರಕ್ಕೆ ಗುರಿಯಾಗುತ್ತಿದ್ದಾರೆ. ಕೈಗಾರಿಕಾ ಕೇಂದ್ರವಾದ ಎರ್ನಾಕುಳಂನಲ್ಲಿ ಸರಾಸರಿ 91.3 ಮಂದಿ ಮಹಿಳೆಯರು ಪ್ರತೀ ವರ್ಷ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ.

ತಿರುವನಂತಪುರ ಜಿಲ್ಲೆಯಲ್ಲಿ ಕಳೆದ ವರ್ಷ 204 ಮಂದಿ ಮಹಿಳೆಯರು ಅತ್ಯಾಚಾರಕ್ಕೀಡಾಗಿದ್ದಾರೆ. ಕೊಲ್ಲಂ ಜಿಲ್ಲೆಯಲ್ಲಿ ಈ ಸಂಖ್ಯೆ 148. ಎರ್ನಾಕುಲಂ ಜಿಲ್ಲೆಯಲ್ಲಿ 148, ತೃಶ್ಶೂರು ಜಿಲ್ಲೆಯಲ್ಲಿ 174, ಕಲ್ಲಿಕೋಟೆ ಜಿಲ್ಲೆಯಲ್ಲಿ 113 ಎಂಬಂತೆ ಮಹಿಳೆಯರು ಅತ್ಯಾಚಾರಕ್ಕೆ ತುತ್ತಾಗಿದ್ದಾರೆ. ಅತ್ಯಂತ ಹೆಚ್ಚಿನ ದೌರ್ಜನ್ಯ ನಡೆದ ಜಿಲ್ಲೆ ತಿರುವನಂತಪುರ. ಈ ಜಿಲ್ಲೆಯಲ್ಲಿ 797 ದೌರ್ಜನ್ಯ ಪ್ರಕರಣ ನಡೆದಿವೆ. ಕೊಲ್ಲಂ ಜಿಲ್ಲೆಯಲ್ಲಿ 439 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ದಿನಗಳ ಹಿಂದೆಯಷ್ಟೇ ಮಲಯಾಳ ಚಿತ್ರರಂಗದ ಹಾಗು ಕನ್ನಡ ಚಿತ್ರರಂಗದ ಖ್ಯಾತ ನಟಿಯಾಗಿರುವ ಭಾವನ ಅವರನ್ನು ಅಪಹರಿಸಿ ಕಿರುಕುಳ ನೀಡಿದ ಘಟನೆ ಕೇರಳದ ಜನತೆಗೆ ಶಾಕ್‌ ನೀಡಿದ್ದು, ಮಾತ್ರವಲ್ಲ ಈ ಘಟನೆ ಚಾನೆಲ್‌ಗ‌ಳಲ್ಲಿ ಭಾರೀ ಚರ್ಚೆಗೆ ಆಸ್ಪದವಾಗಿದೆ. ಚಿತ್ರರಂಗ ಈ ಘಟನೆಯನ್ನು ತೀವ್ರವಾಗಿ ಖಂಡಿಸಿತು. ಇಂತಹ ಘಟನೆ ಪ್ರಥಮ ಅಲ್ಲ ಎಂಬ ಮಾತೂ ಕೇಳಿ ಬಂತು. ಆದರೆ ಹಿಂದೆ ನಡೆದ ಇಂತಹ ಹಲವು ಘಟನೆಗಳು ಪೊಲೀಸ್‌ ಠಾಣೆ ಮೆಟ್ಟಲೇರದೆ ಮುಚ್ಚಿ ಹೋದವು ಇವೆ. ಇಂತಹ ಘಟನೆ ಪೊಲೀಸ್‌ ಠಾಣೆಗೇರಿದರೆ ವ್ಯಾಪಕ ಸುದ್ದಿಯಾಗುವುದಲ್ಲದೇ ಮಾನಹಾನಿಗೂ ಕಾರಣವಾಗುತ್ತದೆ. ಈ ಕಾರಣದಿಂದ ಇಂತಹ ಘಟನೆಗಳು ಪರಸ್ಪರ ಮಾತುಕತೆಯಿಂದ ನಿವಾರಿಸಿಕೊಂಡವೂ ಇವೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.