ಕುಟುಂಬಶ್ರೀ ಸ್ವಸಹಾಯ ಸಂಘ ಇತರ ರಾಜ್ಯಗಳಿಗೆ ಮಾದರಿ: ಚಂದ್ರಶೇಖರನ್‌


Team Udayavani, Nov 17, 2019, 5:55 AM IST

16KSDE1

ಕಾಸರಗೋಡು: ಸಮಾಜದಲ್ಲಿ ಏಕಾಂಗಿಯಾಗಿ ಬದುಕುತ್ತಿದ್ದು, ಅನೇಕ ಸಂಕಷ್ಟ ಅನುಭವಿಸುತ್ತಿರುವವರಿಗೆ ಬೆಂಬಲ ನೀಡಿ, ಸಹಾಯ ಒದಗಿಸುವ ನಿಟ್ಟಿನಲ್ಲಿ ರಚಿಸಿರುವ ಯೋಜನೆ “ಸ್ನೇಹಿತೆ ಕಾಲಿಂಗ್‌ ಬೆಲ್‌’ನ ಸಪ್ತಾಹ ಆರಂಭಗೊಂಡಿತು.

ನ.21 ವರೆಗೆ ಈ ಸಪ್ತಾಹ ನಡೆಯಲಿದೆ. ಈ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನೆ ಚೆಮ್ನಾಡ್‌ ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಜರುಗಿತು. ಕುಟುಂಬಶ್ರೀ ಜಿಲ್ಲಾ ಮಿಷನ್‌ ವತಿಯಿಂದ, ಚೆಮ್ನಾಡ್‌ ಗ್ರಾಮ ಪಂಚಾಯತ್‌, ಕುಟುಂಬಶ್ರೀ ಸಿ.ಡಿ.ಎಸ್‌. ಸಹಕಾರೊಂದಿಗೆ ಕಾರ್ಯಕ್ರಮ ನಡೆಯಿತು. ಕಂದಾಯ ಸಚಿವ ಇ.ಚಂದ್ರಶೇಖರನ್‌ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು ರಾಜ್ಯ ಸಾಮಾಜಿಕ-ಆರ್ಥಿಕ ವಲಯಗಳಲ್ಲಿ ಕುಟುಂಬಶ್ರೀ ಸ್ವಸಹಾಯ ಸಂಘ ವಹಿಸುತ್ತಿರುವ ಪಾಲುದಾರಿಕೆ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

ಶಾಸಕ ಕೆ.ಕುಂಞಿರಾಮನ್‌ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್‌ ಮಟ್ಟದ ನೆರೆಕೂಟಗಳ ವ್ಯಾಪ್ತಿಯಲ್ಲಿ ಏಕಾಂಗಿಯಾಗಿ ಬದುಕು ಸವೆಸುತ್ತಿರುವವರನ್ನು ಪತ್ತೆಮಾಡಲಾಗಿದ್ದು, ಅವರಿಗೆ ಪೋಷಕಾಹಾರಗಳ ಕಿಟ್‌ ವಿತರಣೆ ನಡೆಸಲಾಗುತ್ತಿದೆ. ಈ ಕಿಟ್‌ ವಿತರಣೆ ಯೋಜನೆಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್‌ ಅಧ್ಯಕ್ಷ ಕಲ್ಲಟ್ರ ಅಬ್ದುಲ್‌ ಖಾದರ್‌ ನಡೆಸಿದರು. ಕುಟುಂಬಶ್ರೀ ಜಿಲ್ಲಾ ಯೋಜನೆ ಪ್ರಬಂಧಕ ಆರತಿ ಮೆನನ್‌ ಯೋಜನೆ ಸಂಬಂಧ ಪ್ರತಿಜ್ಞೆ ಸ್ವೀಕಾರಕ್ಕೆ ನೇತೃತ್ವ ನೀಡಿದರು. ಜಿಲ್ಲಾ ಪಂಚಾಯತ್‌ ಸದಸ್ಯೆ ಸುಫೈಝಾ ಅಬೂಬಕ್ಕರ್‌, ಬ್ಲಾಕ್‌ ಪಂಚಾಯತ್‌ ಸದಸ್ಯ ಟಿ.ಡಿ.ಕಬೀರ್‌, ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಶಕುಂತಲಾ ಕೃಷ್ಣನ್‌, ಸ್ಥಾಯೀ ಸಮಿತಿ ಅಧ್ಯಕ್ಷರಾದ ಶಂಸುದ್ದೀನ್‌ ತೆಕ್ಕಿಲ್‌, ಸಿ.ಎಂ.ಷಾಸಿಯಾ, ಗೀತಾ ಬಾಲಕೃಷ್ಣನ್‌, ಸದಸ್ಯರಾದ ರೇಣುಕಾ ಭಾಸ್ಕರನ್‌, ಕೆ.ಮಾಧವನ್‌ ನಾಯರ್‌, ಕುಟುಂಬಶ್ರೀ ಎ.ಡಿ.ಎಂ.ಸಿ. ಡಿ.ಹರಿದಾಸ್‌, ಗ್ರಾಮಪಂಚಾಯತ್‌ ಕಾರ್ಯದರ್ಶಿ ಪಿ.ರವಿದಾಸ್‌, ಸಿ.ಡಿ.ಎಸ್‌. ಸದಸ್ಯ ಕಾರ್ಯದರ್ಶಿ ಬಿ.ವಿ.ವಿಜಯಕುಮಾರ್‌, ಸಿ.ಡಿ.ಎಸ್‌. ಅಧ್ಯಕ್ಷೆ ಮುಂತಾಝ್ ಅಬೂಬಕ್ಕರ್‌, ಕುಟುಂಬಶ್ರೀ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಬಡವರ ಪರ
ದುರ್ಬಲ ಜನತೆಗೆ ಬೆಂಬಲ ನೀಡುವ ಮೂಲಕ ಪರಸ್ಪರ ಸೌಹಾರ್ದ, ಸಹಕಾರ ಪೂರ್ಣರೂಪದಲ್ಲಿ ಒದಗಿಸುವಲ್ಲಿ ಕುಟುಂಬಶ್ರೀಗೆ ಸಾಧ್ಯವಾಗಿದೆ
-ಇ.ಚಂದ್ರಶೇಖರನ್‌
ಕಂದಾಯ ಸಚಿವ

ದುರ್ಬಲರಿಗೆ ಸಹಾಯ
ಗ್ರಾಮ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಒಂಟಿ ಜೀವನ ನಡೆಸುವವರನ್ನು ಗುರುತಿಸಿ ಅಂಥವರಿಗೆ ಪೌಷ್ಟಿಕ ಆಹಾರ ನೀಡುವ ಸಲುವಾಗಿ ಕಿಟ್‌ ವಿತರಿಸಲು ನಿರ್ಧಸಲಾಗಿದೆ.
-ಕೆ.ಕುಂಞಿರಾಮನ್‌
ಶಾಸಕರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.