ಕೊಚ್ಚಿಯ ಬ್ಯೂಟಿ ಪಾರ್ಲರ್‌ ಶೂಟೌಟ್‌ ಪ್ರಕರಣ: ಪೈವಳಿಕೆಯ ಮನೆಗೆ ದಾಳಿ; ಮಾರಕಾಸ್ತ್ರ ವಶಕ್ಕೆ


Team Udayavani, Apr 20, 2019, 9:44 AM IST

Untitled-1

ಮಂಜೇಶ್ವರ: ಕೊಚ್ಚಿ ಪನಂಬಳ್ಳಿ ನಗರದಲ್ಲಿರುವ ನಟಿ ಲೀನಾ ಮರಿಯಾ ಪೋಲ್‌ ಅವರ ಮಾಲಕತ್ವದ ನೈಲ್‌ ಬ್ಯೂಟಿ ಪಾರ್ಲರ್‌ಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕ್ರೈಂ ಬ್ರಾಂಚ್‌ ಅಧಿಕಾರಿಗಳು ಮಂಜೇಶ್ವರ ಪೈವಳಿಕೆ ಸಮೀಪದ ಕಾಯರ್‌ಕಟ್ಟೆಯ ಮನೆ ಯೊಂದಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಮನೆಯಿಂದ ಪಿಸ್ತೂಲು, ತಲವಾರುಗಳು, ಸ್ಪ್ರಿಂಗ್‌ ಚಾಕು ಮತ್ತಿತರ ಆಯುಧಗಳು, ಹಲವು ಮೊಬೈಲ್‌ಗ‌ಳು ಮತ್ತು ವಾಹನಗಳ ನಂಬರ್‌ ಪ್ಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕ್ರೈಂಬ್ರಾಂಚ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ವಿವರ
ಬ್ಯೂಟಿ ಪಾರ್ಲರ್‌ಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಪಾರಿ ತಂಡಕ್ಕೆ ಸೇರಿದ ಪೆರುಂ ಬಾವೂರಿನ ಬಿಲಾಲ್‌ ಸಹಿತ ಇಬ್ಬರನ್ನು ಕ್ರೈಂಬ್ರಾಂಚ್‌ ಕೆಲವು ದಿನಗಳ ಹಿಂದೆ ಬಂಧಿಸಿತ್ತು. ಆ ಪೈಕಿ ಬಿಲಾಲ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸಿಕ್ಕಿದ ಮಾಹಿತಿಯಂತೆ ಪೈವಳಿಕೆಯ ಮನೆಗೆ ದಾಳಿ ನಡೆಸಲಾಗಿದೆ.

ಮೋನಾಯಿ ಎಂಬಾತ ಶೂಟೌಟ್‌ ಪ್ರಕರಣದ ಸೂತ್ರಧಾರನಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾನೆ. ಮೂಲತಃ ತೃಶೂರು ನಿವಾಸಿರುವ ಆತ ಮಲೇಶ್ಯಾಕ್ಕೆ ಪರಾರಿಯಾಗಿರಬೇಕು ಎಂದು ಶಂಕಿಸಲಾಗುತ್ತಿದೆ. ಕೆಲವು ವರ್ಷ ಕಾಸರಗೋಡಿನಲ್ಲೂ ನೆಲೆಸಿದ್ದ. ಬ್ಯೂಟಿ ಪಾರ್ಲರ್‌ಗೆ ಗುಂಡು ಹಾರಿಸಲು ಈತನೇ ಬಿಲಾಲ್‌ ಮತ್ತು ಇನ್ನೋರ್ವನಿಗೆ ಸುಪಾರಿ ನೀಡಿ ಬಂದೂಕು ಮತ್ತು ಬೈಕ್‌ ಒದಗಿಸಿದ್ದ ಎಂದು ಕ್ರೈಂಬ್ರಾಂಚ್‌ ತಿಳಿಸಿದೆ.

ಮೋನಾಯಿ ಕಾಸರಗೋಡಿನೊಂದಿಗೆ ಸಂಪರ್ಕ ಹೊಂದಿರುವ ಕಾರಣ ಆತನ ಪತ್ತೆಗಾಗಿ ತನಿಖೆಯನ್ನು ಕಾಸರಗೋಡಿಗೂ ವಿಸ್ತರಿಸಲಾಗಿದೆ. ಕೊಚ್ಚಿಯ ಕ್ರೈಂಬ್ರಾಂಚ್‌ ಡಿವೈಎಸ್‌ಪಿ ಜೋಸ್‌ ಚೆರಿಯನ್‌ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.

ಕ್ರಿಮಿನಲ್‌ಗಳ ಅಡ್ಡೆ ?
ಮಾರಕಾಯುಧಗಳು ಪತ್ತೆಯಾದ ಪೈವಳಿಕೆಯ ಮನೆ ಕ್ರಿಮಿನಲ್‌ ಪ್ರಕರಣ ತಂಡಗಳು ಕಾರ್ಯ ವೆಸಗುವ ರಹಸ್ಯ ತಾಣವಾಗಿದ್ದು, ದಾಳಿ ಸಂದರ್ಭ ಇಲ್ಲಿ ಹಾಸಿಗೆ ಹಿಡಿದಿದ್ದ ಅಸ್ವಸ್ಥ ವೃದ್ಧ ಮಾತ್ರ ಇದ್ದರು. ಆ ಮನೆಯಲ್ಲಿ ಹಲವು ಬಟ್ಟೆಗಳು ಪತ್ತೆಯಾಗಿದ್ದು, ಆ ಬಗ್ಗೆ ವೃದ್ಧನ ಹೇಳಿಕೆಯನ್ನು ಕ್ರೈಂಬ್ರಾಂಚ್‌ ದಾಖಲಿಸಿಕೊಂಡಿದೆ. ಆದರೆ ಈ ಹೇಳಿಕೆಯನ್ನು ಸಂಪೂರ್ಣವಾಗಿ ನಂಬುವಂತಿಲ್ಲವೆಂದು ಕ್ರೈಂಬ್ರಾಂಚ್‌ ತಿಳಿಸಿದೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.