ಲೈಫ್‌ ಮಿಷನ್‌ ಯೋಜನೆ: ದೈನಬಿ ಅವರ ಸ್ವಂತ ಮನೆ ಕನಸು ನನಸು


Team Udayavani, Jan 19, 2020, 12:34 AM IST

meg-30

ಕಾಸರಗೋಡು: ಸ್ವಂತದ್ದಾದ ಒಂದು ಮನೆಗಾಗಿ ದೈನಬಿ ಅವರು ಪಟ್ಟ ಸಂಕಷ್ಟ ಕೊನೆಗೂ ಪರಿಹಾರವಾಗಿದೆ. ಅನೇಕ ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು, ದುರಿತ ಅನುಭವಿಸುತ್ತಿದ್ದ ಅವರೀಗ ಸ್ವಂತ ಮನೆಯಲ್ಲಿ ನೆಮ್ಮದಿಯ ಉಸಿರಿನೊಂದಿಗೆ ಬದುಕುತ್ತಿದ್ದಾರೆ. ರಾಜ್ಯ ಸರಕಾರದ ಲೈಫ್‌ ಮಿಷನ್‌ ಯೋಜನೆ ಇವರ ಅನೇಕ ವರ್ಷಗಳ ಬಯಕೆಯನ್ನು ನನಸಾಗಿಸಿದೆ.

ರಾಜ್ಯ ಸರಕಾರದಿಂದ ಅನೇಕ ವರ್ಷಗಳ ಹಿಂದೆಯೇ ಜಾಗ ಲಭಿಸಿದ್ದರೂ, ಸ್ವಂತ ಮನೆ ಕಟ್ಟಿಕೊಳ್ಳಲಾರದೆ ದೈನಬಿ ಬಸವಳಿಯುತ್ತಿದ್ದರು. ಕೂಲಿ ಕಾರ್ಮಿಕನಾದ ಪತಿ, 4 ಮಕ್ಕಳನ್ನು ಹೊಂದಿದ್ದ ಈ ಬಡಕುಟುಂಬದ ಮಹಿಳೆ ಮೊಗ್ರಾಲ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೂಲತ: ಕರ್ನಾಟಕ ನಿವಾಸಿಯಾದ ಇವರು ತಮ್ಮ ಹಿರಿಯರೊಂದಿಗೆ ಅನೇಕ ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಗೆ ಆಗಮಿಸಿ ಚೆರ್ಕಳದಲ್ಲಿ ವಾಸ ಆರಂಭಿಸಿದ್ದರು. 25 ವರ್ಷಗಳ ಹಿಂದೆ ಮಂಜೇಶ್ವರ ನಿವಾಸಿ ಇಸ್ಮಾಯಿಲ್‌ ಆಲಿಯಾಸ್‌ ಹಸನಬ್ಬ ಅವರನ್ನು ವಿವಾಹವಾಗಿದ್ದರು. ಅಂದಿನಿಂದ ಸ್ವಂತದೊಂದು ಪುಟ್ಟ ಮನೆ ಕಟ್ಟಿಕೊಳ್ಳಬೇಕು ಎಂಬ ಬಯಕೆ ಹಾಗೆಯೇ ಉಳಿದಿತ್ತು.

ಇಂದು ಲೈಫ್‌ ಮಿಷನ್‌ ಯೋಜನೆಯ ಮೂಲಕ ಕುಂಬಳೆ ಗ್ರಾಮ ಪಂಚಾಯತ್‌ನ ಕಿದೂರಿನ 4 ಸೆಂಟ್ಸ್‌ ಜಾಗದಲ್ಲಿ ಎರಡು ಕೋಣೆಗಳು, ಒಂದು ಹಾಲ್‌, ಅಡುಗೆ ಮನೆ ಹೊಂದಿರುವ ಸುಂದರ ನಿವಾಸ ಇವರಿಗೆ ಸ್ವಂತವಾಗಿದೆ. ಕೊಡುಗೈ ದಾನಿಯಾಗಿರುವ ವ್ಯಕ್ತಿಯೊಬ್ಬರು ಈ ಪ್ರದೇಶದಲ್ಲಿ ಸಾರ್ವಜನಿಕರಿಗಾಗಿ ಕೊಳವೆ ಬಾವಿ ನಿರ್ಮಿಸಿದ್ದು, ದೈನಬಿ ಅವರ ಕುಟುಂಬವೂ ಈ ನೀರನ್ನೇ ಆಶ್ರಯಿಸುತ್ತಿದೆ. ತಮ್ಮ ಬದುಕಿನ ದೊಡ್ಡ ನಿರೀಕ್ಷೆಯಾಗಿದ್ದ ಮನೆ ಲಭಿಸಿದ್ದು, ಜೀವನಕ್ಕೆ ಹೊಸ ಉತ್ಸಾಹ ತಂದಿದೆ. ರಾಜ್ಯ ಸರಕಾರಕ್ಕೆ, ಗ್ರಾಮ ಪಂಚಾಯತ್‌ ಪದಾಧಿ ಕಾರಿಗಳಿಗೆ, ಸರಕಾರಿ ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ತಾವು ಕೃತಜ್ಞರು ಎಂದು ದೈನಬಿ ಅವರು ಕಣ್ಣು ನೀರು ತುಂಬಿ ತಿಳಿಸುತ್ತಾರೆ.

ಇವರ ಇಬ್ಬರು ಗಂಡು ಮಕ್ಕಳು ಶಿಕ್ಷಣ ನಿಲುಗಡೆ ಮಾಡಿ ದುಡಿಮೆ ನಡೆಸುತ್ತಿದ್ದಾರೆ. ಒಬ್ಬ ಮಗಳು ವಿವಾಹಿತರಾಗಿದ್ದಾರೆ. ಕೊನೆಯ ಪುತ್ರಿ ಪ್ಲಸ್‌ವನ್‌ ವಿದ್ಯಾರ್ಥಿನಿಯಾಗಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.