ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಹಾಳಿ ರೋಗ: ಅಡಿ‌ಕೆ ಕೃಷಿಕರಿಗೆ ಆತಂಕ


Team Udayavani, Sep 13, 2019, 5:45 AM IST

kole-roga

ಕಾಸರಗೋಡು: ಬಿರುಸಿನ ಬಿರುಗಾಳಿ ಮಳೆಯಿಂದಾಗಿ ಕಾಸರಗೋಡು ಜಿಲ್ಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಮಹಾಳಿರೋಗ ವ್ಯಾಪಕವಾಗಿ ಹರಡುತ್ತಿದೆ. ಇದು ಜಿಲ್ಲೆಯ ಅಡಕೆ ಬೆಳೆಗಾರರ ಆತಂಕಕ್ಕೆ ಕಾರಣವಾಗಿದ್ದು, ತೀವ್ರ ಸಂಕಷ್ಟಕ್ಕೆ ಗುರಿಪಡಿಸಿದೆ. ಮಹಾಳಿ ರೋಗದಿಂದಾಗಿ ಅಡಿಕೆ ಕೃಷಿಕರ ಆರ್ಥಿಕ ಬೆನ್ನೆಲುಬನ್ನು ಮುರಿಯುವಂತೆ ಮಾಡಿದೆ.

ಭಾರೀ ಮಳೆಯಿಂದಾಗಿ ಅಡಕೆ ತೋಟಗಳಲ್ಲಿ ನೀರು ತುಂಬಿಕೊಂಡು ತೇವಾಂಶ ಹೆಚ್ಚಾಗುತ್ತಿರುವುದೇ ಮಹಾಳಿ ರೋಗ ಹರಡಲು ಪ್ರಮುಖ ಕಾರಣ ಎನ್ನಲಾಗಿದೆ. ಸಾಮಾನ್ಯವಾಗಿ ಆಗಸ್ಟ್‌ ತಿಂಗಳ ಕೊನೆಯಲ್ಲಿ ಮಳೆಯ ಬಿರುಸು ಕ್ಷೀಣಿಸಿ ಆಕಾಶ ಶುಭ್ರಗೊಳ್ಳುತ್ತದೆ. ಆದರೆ ಈ ವರ್ಷ ಸಿಂಹಮಾಸ ಆರಂಭಗೊಂಡು ಅಧ್ರರ್ ತಿಂಗಳು ಕಳೆದರೂ ಧಾರಾಕಾರ ಮಳೆ ಸುರಿಯುವಿಕೆ ಇನ್ನೂ ಮುಂದುವರಿ ಯುತ್ತದೆ. ಈ ಕಾರಣದಿಂದ ಮಹಾಳಿ ರೋಗ ಹೆಚ್ಚಾಗಲು ಕಾರಣ ಎಂದು ಹಿರಿಯ ಅನುಭವಿ ಅಡಿಕೆ ಬೆಳಗಾರರು ಸಂಕಷ್ಟ ವ್ಯಕ್ತಪಡಿಸುತ್ತಾರೆ.

ಕಳೆದ ವರ್ಷ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಗೊಂಡು ಉರಿ ಬಿಸಿಲಿಗೆ ಎಕ್ರೆಗಟ್ಟಲೆ ಅಡಿಕೆ ತೋಟಗಳು ಕರಟಿ ಹೋಗಿ ಅದೂ ಅಡಿಕೆ ಬೆಳೆಗಾರರನ್ನು ಭಾರೀ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತ್ತು. ಆದರೂ ಅದನ್ನೆಲ್ಲಾ ಸಹಿಸಿ ಅತ್ಯಂತ ಶ್ರಮಪಟ್ಟು ಕೃಷಿಕರು ತಮ್ಮ ಅಡಿಕೆ ತೋಟಗಳನು ್ನ ಸಂರಕ್ಷಿಸುತ್ತಾ ಬಂದಿದ್ದಾರೆ. ಆದರೆ ಕಳೆದ ವರ್ಷಕ್ಕಿಂತ ಭಿನ್ನವಾಗಿ ಈ ವರ್ಷ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮಹಾಳಿ ರೋಗ ಹರಡಲು ದಾರಿ ಮಾಡಿಕೊಟ್ಟಿದೆ.

ಮಹಾಳಿರೋಗ ಬಾಧಿಸಿ ಅಡಿಕೆ ಮರದಿಂದ ಎಳತು ಅಡಕೆಗಳು ಉದುರುತ್ತಿವೆ. ಇದರಿಂದ ಅಡಕೆ ಬೆಳಗಾರರು ಏನು ಮಾಡಬೇಕೆಂದು ದಾರಿ ತೋಚದೆ ಕಂಗಾಲಾಗಿದ್ದಾರೆ. ಇದೇ ಸಂದರ್ಭದಲ್ಲಿ ಬೆಳೆನಾಶಗೊಂಡ ತಮಗೆ ನಷ್ಟ ಪರಿಹಾರ ಒದಗಿಸಬೇಕೆಂಬ ಬೇಡಿಕೆಯನ್ನು ಅಡಿಕೆ ಬೆಳೆಗಾರರು ಮುಂದಿಟ್ಟಿದ್ದಾರೆ.

ಈ ವರ್ಷದ ವಿಪರೀತ ಗಾಳಿ ಮಳೆಯು ಅಡಿಕೆ ಬೆಳೆಗಾರರ ಪಾಲಿಗೆ ಹೆಚ್ಚಿನ ನಷ್ಟವನ್ನುಂಟು ಮಾಡಿದೆ.

ಕಳೆದ ಒಂದು ದಶಕದಿಂದ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ವಿವಿಧ ಕಾರಣಗಳಿಂದ ಅಡಿಕೆ ಇಳುವರಿ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಹಲವು ಕಾರಣಗಳಿಂದ ಅಡಿಕೆ ಬೆಳೆ ನಾಶದತ್ತ ಸಾಗುತ್ತಿದೆ. ಇದರಿಂದ ಅಡಿಕೆ ಬೆಳೆಯನ್ನೇ ನಂಬಿ ಬದುಕುತ್ತಿರುವ ಸಾವಿರಾರು ಕೃಷಿಕ ಕುಟುಂಬಗಳು ಬೀದಿ ಪಾಲಾಗುವ ಸ್ಥಿತಿಗೆ ತಲುಪಿದ್ದಾರೆ. ಇದೀಗ ಅಡಿಕೆ ಧಾರಣೆ ಚೆನ್ನಾಗಿದ್ದರೂ, ವಿವಿಧ ರೋಗಗಳಿಂದ ಅಡಿಕೆ ಇಳುವರಿ ಕುಸಿದಿದ್ದು. ಉತ್ತಮ ಧಾರಣೆಯಿದ್ದರೂ ಪ್ರಯೋಜನವಿಲ್ಲದಂತಾಗಿದೆ.

ಕಾಸರಗೋಡು ಜಿಲ್ಲೆಯ ಅಡಿಕೆ ಬೆಳೆಗಾರರ ಬಗ್ಗೆ ಕೇರಳ ಸರಕಾರವು ಗಮನಹರಿಸದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿವೆ. ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಕೂಡ ಈ ಕುರಿತು ಗಾಢ ಮೌನಕ್ಕೆ ಶರಣಾಗಿರುವುದು ಅಡಿಕೆ ಕೃಷಿಕರನ್ನು ರೊಚ್ಚಿಗೇಳುವಂತೆ ಮಾಡಿದೆ. ಅತ್ಯಂತ ಕಷ್ಟಪಟ್ಟು ತಾಳ್ಮೆ ವಹಿಸಿ ವರ್ಷದ 12 ತಿಂಗಳುಗಳ ಕಾಲ ಶ್ರಮದಿಂದ ದುಡಿದು ಸಲಹಿದ ಅಡಿಕೆ ಫಸಲಿಗೆ ಮಹಾಳಿ ರೋಗ ಹರಡಿ ಕೃಷಿಕರ ಇಡೀ ವಾರ್ಷಿಕ ಆದಾಯಕ್ಕೆ ಬಹುದೊಡ್ಡ ಪೆಟ್ಟು ಬೀಳುವಂತೆ ಮಾಡಿದೆ. ಇನ್ನಾದರೂ ಸರಕಾರವು ಈ ಬಗ್ಗೆ ಗಮನಹರಿಸಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಲಾಗಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.