ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಭಾವ್ಯ ಅಭ್ಯರ್ಥಿ?


Team Udayavani, Sep 23, 2019, 5:03 AM IST

Election-Symbolic-600

ಕುಂಬಳೆ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಅಧಿಕಾರಿ ಕೊನೆಗೂ ಅ. 21 ಎಂಬುದಾಗಿ ಘೋಷಿಸಿರುವರು. ಇದರಿಂದ ರಾಜಕೀಯ ಪಕ್ಷಗಳು ಗರಿಗೆದರಿವೆ. ಐಕ್ಯರಂಗ, ಎಡರಂಗ ಮತ್ತು ಬಿಜೆಪಿ ಚುನಾವಣೆಯ ಅಖಾಡಕ್ಕೆ ಧುಮುಕಿವೆ.ಕಳೆದ 2016ರ ಮಂಜೇಶ್ವರ ವಿದಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕೇವಲ 89 ಮತಗಳಿಂದ ಹಾಲಿ ಶಾಸಕ ಪಿ.ಬಿ. ಅಬ್ದುಲ್‌ ರಜಾಕ್‌ ಅದೃಷ್ಟವಾಗಿ ಗೆದ್ದಿದ್ದರು. ಪ್ರಬಲ ಪ್ರತಿಸ್ಫರ್ಧೆ ನೀಡಿ ವಿಜಯದ ಬಾಗಿಲ ತನಕ ತಲಪಿ ಸೋತಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್‌ ಅವರು ರಾಜ್ಯ ಉತ್ಛನ್ಯಾಯಾಲಯದಲ್ಲಿ ನಕಲಿ ಮತ ಚಲಾವಣೆಯಾಗಿರುವುದಾಗಿ ಚುನಾÊಣ ತಕರಾರು ಅರ್ಜಿ ಸಲ್ಲಿಸಿದ್ದರು. ಶಾಸಕರ ನಿಧನದ ಬಳಿಕ ಬಿಜೆಪಿ ಪರಾಜಿತ ಅಭ್ಯರ್ಥಿಯವರು ಕೇಸನ್ನು ಹಿಂಪಡೆದ ಕಾರಣ ಇದೀಗ ಮರು ಚುನಾವಣೆ ಘೋಷಣೆಯಾಗಿದೆ.

ಐಕ್ಯರಂಗದಿಂದ ಮಾಜಿ ಸಚಿವ ಮುಸ್ಲಿಂ ಲೀಗ್‌ ಜಿಲ್ಲಾಧ್ಯಕ್ಷ ಎಂ.ಸಿ. ಕಮರುದೀನ್‌, ಜಿಲ್ಲಾ ಕಾರ್ಯದರ್ಶಿ ಮುನೀರ್‌ ಹಾಜಿ, ಯೂತ್‌ ಲೀಗ್‌ ರಾಜ್ಯ ಕಾರ್ಯದರ್ಶಿ ಎ.ಕೆ.ಎಂ. ಅಶ್ರಫ್‌ ಎಂಬುದಾಗಿ ಕೇಳಿಬರುತ್ತಿದೆ. ಎಡರಂಗದಿಂದ ಸಿಪಿಎಂ ನಾಯಕ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆ.ಪಿ. ಸತೀಶ್ಚಂದ್ರನ್‌, ಸಿಪಿಎಂ ಸೆಕ್ರೆಟರಿಯೇಟ್‌ ಸದಸ್ಯರಾದ ಕೆ.ಆರ್‌. ಜಯಾನಂದ ಮತ್ತು ಎಂ. ಶಂಕರ ರೈ ಎಂಬುದಾಗಿ ಕೇಳಿಬರುತ್ತಿದೆ.

ಬಿಜೆಪಿಯಿಂದ ಪಕ್ಷದ ರಾಜ್ಯ ಸಮಿತಿ ಸದಸ್ಯ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕುಂಟಾರು ರವೀಶ ತಂತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಶ್ರೀಕಾಂತ್‌ ಮತ್ತು ಮಂಜೇಶ್ವರ ಮಂಡಲ ಅಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ ಎಂಬ ಕನ್ನಡಿಗ ಅಭ್ಯರ್ಥಿಗಳ ಹೆಸರು ಅಂತಿಮ ಪಟ್ಟಿಯಲ್ಲಿದೆ. ಮೂರೂ ಪಕ್ಷಗಳ ಅಧಿಕೃತವಾಗಿ ಅಭ್ಯರ್ಥಿಗಳ ಆಯ್ಕೆ ಇನ್ನೂ ಆಗಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದು ಬೀಗುತ್ತಿರುವ ಐಕ್ಯರಂಗ ಹಿಂದಿನ ಫಲಿತಾಂಶದಂತೆ ಈ ವಿಧಾನ ಸಭಾ ಚುನಾವಣೆಯ ಫಲಿತಾಂಶವೆಂಬ ನಿರೀಕ್ಷೆಯಲ್ಲಿದ್ದರೆ, ಕೇಂದ್ರ ಸರಕಾರದ ಜನಪರ ಆಡಳಿತದಿಂದ ಮತದಾರರು ಬಿಜೆಪಿ ಪರ ಮತನೀಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಂದು ವರ್ಗದ ಮತ ಕ್ರೋàಢಿಕರಣವಾದಂತೆ ಈ ಚುನಾವಣೆಯಲ್ಲಿ ಇನ್ನೊಂದು ವರ್ಗದ ಮತ ಪಕ್ಷದತ್ತ ಹರಿಯಲಿರುವುದೆಂಬ ದೃಢ ವಿಶ್ವಾಸ ಬಿಜೆಪಿಯದು. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋರಿಕೆಯಾದ ಪಕ್ಷದ ಮತಗಳು ಮತ್ತೆ ದೊರ ಕುವ ಬಲವಾದ ವಿಶ್ವಾಸ ಎಡರಂಗಕ್ಕಿದೆ.

ಮೂರು ಪಕ್ಷಗಳಲ್ಲೂ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ನಡೆಯು ತ್ತಿದ್ದು ಕೊನೆ ಕ್ಷಣದಲ್ಲಿ ಅನಿರೀಕ್ಷಿತ ಬದಲಾವಣೆಯಗುವ ಸಾಧ್ಯತೆಯೂ ಇಲ್ಲದಿಲ್ಲ. ಅ. 21ರಂದಿನ ಮಂಜೇಶ್ವರ ಮಂಡಲ ಉಪ ಚುನಾವಣೆಯಲ್ಲಿ ಜಿದ್ದಾ ಜಿದ್ದಿನ ತ್ರಿಕೋನ ಸ್ಫರ್ಧೆಯ ಬಳಿಕ ಅ. 24ರಂದಿನ ಫಲಿತಾಂಶದಲ್ಲಿ ಅಂತಿಮ ಗೆಲುವು ಯಾರದೆಂಬುದಾಗಿ ತಿಳಿಯಲು ಮಾತ್ರ ಸಾಧ್ಯ.

ಸಂಭಾವ್ಯ ಅಭ್ಯರ್ಥಿಗಳು
ಈ ತನಕ ಅಳೆದು ತೂಗಿದರೂ ಮೂರು ಪಕ್ಷಗಳಿಗೂ ಅಧಿಕೃತ ಅಭ್ಯರ್ಥಿಗಳನ್ನು ಚುನಾವಣೆ ಘೋಷಣೆಯ ತನಕ ಕ್ಷೇತ್ರಕ್ಕೆ ಇಳಿಸಲಾಗಲಿಲ್ಲ. ಆದರೆ ಎಲ್ಲ ಪಕ್ಷಗಳೂ ಜಿಲ್ಲೆಯ ಒಳಗಿನ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿವೆೆ. ಅದರಲ್ಲೂ ಬಿಜೆಪಿ ಮತ್ತು ಎಡರಂಗ ಕನ್ನಡಿಗ ಅಭ್ಯರ್ಥಿಗಳಿಗೆ ಮಣೆ ಹಾಕುವ ಮಾತು ಕೇಳಿ ಬರುತ್ತಿದೆ.

ಎಲ್ಲರಲ್ಲೂ ಗೆಲುವಿನ ವಿಶ್ವಾಸ
ಇದು ಐಕ್ಯರಂಗ ಮತ್ತು ಬಿಜೆಪಿಗೆ ಅತ್ಯಂತ ಪ್ರತಿಷ್ಠೆಯ ಚುನಾವಣೆಯ ಕಣವಾಗಿದೆ. ಕೇವಲ 89 ಮತದಿಂದ ಗೆದ್ದ ಕ್ಷೇತ್ರವನ್ನು ಮತ್ತೆ ಗೆಲ್ಲಲೇಬೇಕು. ಎ. 23ಕ್ಕೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಂತರದಿಂದ ಗೆದ್ದ ವಿಶ್ವಾಸ ಐಕ್ಯರಂಗದ್ದು. ಲೋಕಸಭಾ ಚುನಾವಣೆಯಲ್ಲಿ ಒಂದು ವಿಭಾಗದ ಮತ ಕ್ರೋಡೀಕರಣವಾದಂತೆ ಈ ಚುನಾವಣೆಯಲ್ಲಿ ಆಗಲು ಸಾಧ್ಯವಿಲ್ಲ. ಉಭಯ ರಂಗಗಳಿಂದ ಧಾರಾಳ ಮತಗಳು ದೊರಕಿ ಗೆಲ್ಲುವ ವಿಶ್ವಾಸ ಬಿಜೆಪಿ ಪಕ್ಷದ್ದು. ರಾಜ್ಯವನ್ನಾಳುವ ಎಡರಂಗ ಸರಕಾರದ ಜನಪರ ಯೋಜನೆಗೆ ಮತದಾರರು ತಲೆಬಾಗಿ ಎಡರಂಗವನ್ನು ಗೆಲ್ಲಿಸಿಯಾರೆಂಬ ವಿಶ್ವಾಸ ಎಡರಂಗದ್ದಾಗಿದೆ.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.