“ಮಂಜೇಶ್ವರ ಬಂದರು ನಿರ್ಮಾಣ ಅವೈಜ್ಞಾನಿಕ’


Team Udayavani, Sep 23, 2019, 5:55 AM IST

22KSDE10

ಮಂಜೇಶ್ವರ: ಮಂಜೇಶ್ವರ ಮೀನುಗಾರಿಕಾ ಬಂದರು ಕಾಮಗಾರಿ ಅವೈಜ್ಞಾನಿಕ ರೀತಿಯಲ್ಲಿ ನಡೆದಿದೆಯೆಂದೂ ಇದರ ಪರಿಣಾಮವಾಗಿ ಇಲ್ಲಿನ ಕಾರ್ಮಿಕರು ಸಂಕಷ್ಟವನ್ನು ಎದುರಿಸುವಂತಾಗಿದೆಯೆಂದೂ ಮಂಜೇಶ್ವರ ಫಿಶ್‌ ಹಾರ್ಬರ್‌ ಮತ್ಸ Â ತೊಝಿಳಾಲಿ ಸಂಘದ ಪದಾಧಿಕಾರಿಗಳು ಮಂಜೇಶ್ವರ ಪ್ರಸ್‌ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ದೋಣಿಗಳು ಹಾದು ಹೋಗುವ ಸ್ಥಳಗಳಲ್ಲಿ ಮರಳು ರಾಶಿ ಬೀಳುವುದರಿಂದ ಮೀನುಗಾರಿಕೆಗೆ ತೆರಳಿ ಹಿಂದಿರುಗುವವರು ದಡ ಸೇರಲು ಹರಸಾಹಸ ಪಡುತ್ತಿದ್ದಾರೆ ಹಾಗೂ ಅಪಾಯವನ್ನು ಎದುರಿಸುವಂತಾಗಿದೆ. ಕಳೆದ ಒಂದು ವಾರದೊಳಗೆ ಇಲ್ಲಿ ಎರಡು ದುರಂತಗಳು ಸಂಭವಿಸಿವೆ. ಕಾರ್ಮಿಕರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿ ಅವಘಡಗಳು ನಿತ್ಯ ಸಂಭವಿಸುತ್ತಿವೆ. ಇಲ್ಲಿನ ಮೀನುಗಾರಿಕೆಯಿಂದ ಮಾತ್ರ ಬದುಕು ಕಟ್ಟಿಕೊಂಡಿರುವ ನೂರಾರು ಮೀನು ಕಾರ್ಮಿಕರು ಹಾರ್ಬರ್‌ ಅವೈಜ್ಞಾನಿಕದಿಂದಾಗಿ ಭಯದಲ್ಲಿ ಬದುಕು ಸಾಗಿಸುವಂತಾಗಿದೆ.

ಕಾಮಗಾರಿ ಪ್ರಾರಂಭದಲ್ಲಿಯೇ ಇಲ್ಲಿನ ಮೀನು ಕಾರ್ಮಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಎಂಜಿನಿಯರ್‌ಗಳಿಗೆ ಹಾರ್ಬರ್‌ನ ಅವೈಜ್ಞಾನಿಕ ಕಾಮಗಾರಿ ಕುರಿತು ಮಾಹಿತಿ ನೀಡಿದ್ದರೂ, ಇದನ್ನು ಅಧಿಕಾರಿ ವರ್ಗ ಗಮನಹರಿಸಿಲ್ಲ ಎಂದು ಆರೋಪಿಸಿರುವ ಇವರು ಇದರ ಪರಿಣಾಮ ಇಲ್ಲಿ ನಿತ್ಯ ಅವಘಡ ಸಂಭವಿಸುತ್ತಿದೆಯೆಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಸಂಘದ ಉಪಾಧ್ಯಕ್ಷ ಅಬ್ದುಲ್‌ ರಹಿಮಾನ್‌ ಹಾಜಿ, ಕಾರ್ಯದರ್ಶಿ ಮೊಹಮ್ಮದ್‌ ಅಲಿ, ಜತೆ ಕಾರ್ಯದರ್ಶಿಗಳಾದ ಅಝೀಝ್, ಅಶ್ರಫ್‌ ಉಪಸ್ಥಿತರಿದ್ದರು.

ಮೂಲ ಸೌಕರ್ಯ ಒದಗಿಸಲು ಸ್ಪಂದಿಸಿ
ಪ್ರಸ್ತುತ ತಡೆಗೋಡೆ ನಿರ್ಮಾಣದ ಕಾಮಗಾರಿ ಶಾಸ್ತ್ರೀಯವಾಗಿ ಮಾಡಬೇಕು. ದೋಣಿ ಹಾದು ಹೋಗುವ ಸ್ಥಳಗಳಲ್ಲಿ ಮರಳು ತೆರವುಗೊಳಿಸಲು ತುರ್ತು ಕ್ರಮ ಕೈಗೊಳ್ಳಬೇಕು, ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲಿ ಆರಂಭಿಸ ಬೇಕು, ಜೆಟ್ಟಿ ನಿರ್ಮಾಣದ ಲೋಪ ಗಳನ್ನು ಶೀಘ್ರವೇ ಪರಿಹರಿಸಬೇಕು, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ ಹಾಗೂ ಶೌಚಾಲಯದ ಕಾಮಗಾರಿ ನಡೆಸಬೇಕು, ಹೊಸಬೆಟ್ಟು ಕಡಪ್ಪುರದಲ್ಲಿ ನೂತನ ಮೀನುಗಾರಿಕೆ ಜೆಟ್ಟಿ ನಿರ್ಮಿಸ ಬೇಕು, ಸಂಪೂರ್ಣ ಮೂಲ ಸೌಕರ್ಯಗಳೊಂದಿಗೆ ಮಾತ್ರವೇ ಹಾರ್ಬರ್‌ನ ಉದ್ಘಾಟನೆ ನಡೆಸ ಬೇಕು. ಈ ಕುರಿತಂತೆ ತಂಡವೊಂದು ಮುಖ್ಯಮಂತ್ರಿ, ಬಂದರು ಸಚಿವರನ್ನು ಭೇಟಿ ಮಾಡಿ ಮನವಿ ನೀಡಲಾಗು ವುದು. ಮನವಿಗೆ ಸ್ಪಂದಿಸದಿದ್ದಲ್ಲಿ ಹೋರಾಟ ನಡೆಸುವುದಾಗಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.