ಹೃದಯ ಶ್ರೀಮಂತಿಕೆಯಿಂದ ಸಂತ್ರಸ್ತರಿಗೆ ಸಹಾಯ ಒದಗಿಸಿದ ಮರಿಯುಮ್ಮ

ಹೀಗೊಂದು ಅರ್ಥಪೂರ್ಣ ಬಕ್ರೀದ್‌ ಆಚರಿಸಿದ ವೃದ್ಧೆ

Team Udayavani, Aug 14, 2019, 8:01 PM IST

mariyamma

ಬದಿಯಡ್ಕ: ಬಿರುಸಿನ ಗಾಳಿ ಮಳೆಯಿಂದ ಕಂಗೆಟ್ಟ ಸಂತ್ರಸ್ತರ ಪುನರ್ವಸತಿಗೆ ಕೈಜೋಡಿಸುವ ಮೂಲಕ 77 ರ ಹರೆಯದ ಮರಿಯುಮ್ಮ ಮಾನವೀಯ ಸ್ಪಂದನದೊಂದಿಗೆ ಅರ್ಥಪೂರ್ಣವಾಗಿ ಬಕ್ರೀದ್ ಹಬ್ಬ ಆಚರಿಸಿಕೊಂಡಿದ್ದಾರೆ. ಇತರರ ಸಂಕಷ್ಟದಿಂದ ನೊಂದು ಸಹಾಯ ಹಸ್ತ ಚಾಚುವುದಕ್ಕೆ ಆರ್ಥಿಕವಾಗಿ ಶ್ರೀಮಂತರೇ ಆಗಬೇಕಿಲ್ಲ. ಹƒದಯ ಶ್ರೀಮಂತಿಕೆ ಇದ್ದರೆ ಸಾಕು ಎಂಬುದನ್ನು ಇವರು ಕೃತಿಯಿಂದ ತೋರಿದ್ದಾರೆ. ಹಬ್ಬಕ್ಕಾಗಿ ಕಷ್ಟಪಟ್ಟು ಸಂಗ್ರಹಿಸಿದ್ದ, ಹಬ್ಬದ ಕೊಡುಗೆಯಾಗಿ ಲಭಿಸಿದ್ದ ಸಾಮಾಗ್ರಿಗಳನ್ನೆಲ್ಲ ಸಂತ್ರಸ್ತರಿಗೆ ಹಸ್ತಾಂತರಿಸುವ ಮೂಲಕ ಮರಿಯುಮ್ಮ ವಿಭಿನ್ನರಾಗಿ ಕಾಣುತ್ತಾರೆ. ಪ್ರಾಕೃತಿಕ ದುರಂತಕ್ಕೆ ನೋಡುನೋಡುತ್ತಿದ್ದಂತೆಯೇ ತುತ್ತಾಗಿ ಎಲ್ಲವನ್ನೂ ಕಳೆದುಕೊಂಡ ಜನರಿಗೆಕೈಲಾದ ಸಹಾಯ ಮಾಡುವ ಮೂಲಕ ಆರ್ಥಿಕವಾಗಿ ಅಷೇrನೂ ಸಂಪನ್ನರಲ್ಲದೇ ಇದ್ದರೂ, ಮಾನವೀಯ ಮೌಲ್ಯಗಳ ಮೂಲಕ ಮರಿಯುಮ್ಮ ಮಾದರಿಯಾಗಿದ್ದಾರೆ. ಹಬ್ಬದ ಅಂಗವಾಗಿ ಪಡನ್ನಕ್ಕಾಡ್‌ ಕೃಷಿ ಕಾಲೇಜಿನ ಕಲೆಕ್ಷನ್‌ ಸೆಂಟರ್‌ ಗೆ ಆಗಮಿಸಿ ಸಂತ್ರಸ್ತರಿಗೆ ಬಟ್ಟೆ, ಇನ್ನಿತರ ಅನಿವಾರ್ಯ ಸಾಮಾಗ್ರಿಗಳನ್ನು ಹಂಚಿ ಹಬ್ಬವನ್ನು ಕೊಂಡಾಡಿದರು. 20 ಕಿಲೋ ಅಕ್ಕಿ, ಅರ್ಧ ಲೀಟರ್‌ ತೆಂಗಿನೆಣ್ಣೆ, ಚಹಾ ಪುಡಿ, ಬಟ್ಟೆಬರೆ ಇತ್ಯಾದಿಗಳನ್ನು ಅವರು ಹಸ್ತಾಂತರಿಸಿದರು. ಪುತ್ರ ಅಮೀರ್‌ ಅವರೊಂದಿಗೆ ತ್ರಿಕರಿಪುರದ ಹರಿಜನ ಕಾಲನಿಯಲ್ಲಿ 4 ಸೆಂಟ್ಸ್‌ ಜಾಗದಲ್ಲಿರುವಪುಟ್ಟ ಮನೆಯಲ್ಲಿ ಮರಿಯುಮ್ಮ ವಾಸವಾಗಿದ್ದಾರೆ. ಪತಿ ಅಬ್ದುಲಾVದರ್‌ ಅವರು ನಿಧನಹೊಂದಿ 50 ವರ್ಷಗಳೇ ಕಳೆದಿವೆ. 6 ಮಕ್ಕಳನ್ನು ಹಡೆದಿದ್ದ ಮರಿಯುಮ್ಮ ಅವರಿಗೆ ಈಗ ಮೂವರು ಮಾತ್ರ ಜೀವಂತವಾಗಿದ್ದಾರೆ. ಒಬ್ಬ ಪುತ್ರಿ ವಿವಾಹಿತರಾಗಿ ಪತಿಯ ಮನೆಯಲ್ಲಿದ್ದಾರೆ. ಹೃದ್ರೋಗಿಯಾದ ಪುತ್ರನ ಜತೆ ಮರಿಯುಮ್ಮ ಬದುಕುತ್ತಿದ್ದಾರೆ. ಕಡಲೆ ಮಾರಾಟಗಾರರಾಗಿದ್ದ ಪುತ್ರನಿಗೆ ಈಗ ರೋಗದ ಹಿನ್ನೆಲೆಯಿಂದ ಕೆಲಸಕ್ಕೆ ತೆರಳಲಾಗುತ್ತಿಲ್ಲ. ಸ್ಥಳೀಯ ಕೆಲವು ಸಂಘಟನೆಗಳು-ಸಾರ್ವಜನಿಕರು ನೀಡುವ ಸಹಾಯವೊಂದೇ ಬದುಕಿಗೆ ಆಸರೆಯಾಗಿದೆ. ಈ ಸಲದ ಬಿರುಸಿನಮಳೆ,ಅದರಿಂದ ತಲೆದೋರಿದ ನೆರೆಹಾವಳಿಗಳು ಮರಿಯುಮ್ಮ ಅವರನ್ನು ತುಂಬಾ ಕಾಡಿತ್ತು. ಬದುಕಿನಲ್ಲಿ ನಿರಂತರ ಬವಣೆ ಕಂಡ ಹಿರಿಯಜೀವಕ್ಕೆ ಇತರರ ಸಂಕಷ್ಟ ಬಲುಬೇಗ ಅರ್ಥವಾಗಿತ್ತು. ಈ ಕಾರಣದಿಂದ ಹಬ್ಬಕ್ಕಾಗಿ ಪಡೆದಿದ್ದ ಹೊಸ ಸಾಮಾಗ್ರಿಗಳನ್ನೆಲ್ಲ ಸಂತ್ರಸ್ತರಿಗೆ ದಾನ ಮಾಡುವ ಮೂಲಕ ಮನೋನೆಮ್ಮದಿ ಪಡೆದಿದ್ದಾರೆ. ತಮಗೆ ಬೇಕಾದುದನ್ನು ದೇವರೇ ನೀಡುವನು ಎಂಬ ವಿಶ್ವಾಸ ಅವರದು. ಇತತರಿಗೆ ಸಹಾಯ ಮಾಡುವ ಮನಸ್ಸನ್ನು ಮನುಷ್ಯ ಬೆಳೆಸಿಕೊಳ್ಳಬೇಕು ಎಂಬುದು ಮರಿಯುಮ್ಮ ಸಮಾಜಕ್ಕೆ ನೀಡುವ ಸಂದೇಶ.

– ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.