ಶೋಚನೀಯ ಸ್ಥಿತಿಯ ಜನರಲ್‌ ಆಸ್ಪತ್ರೆ ರಸ್ತೆ ನವೀಕರಣ


Team Udayavani, May 13, 2019, 6:13 AM IST

general-hospital

ಕಾಸರಗೋಡು: ಜಿಲ್ಲಾ ಕೇಂದ್ರವಾದ ಕಾಸರಗೋಡು ನಗರದಲ್ಲಿರುವ ಸರಕಾರಿ ಜನರಲ್‌ ಆಸ್ಪತ್ರೆಯ ರಸ್ತೆ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದು, ಅದರ ನವೀಕರಣಕ್ಕೆ ತೀರ್ಮಾನಿಸಲಾಗಿದೆ. ನವೀಕರಣ ಕಾಮಗಾರಿಗೆ 10 ಲಕ್ಷ ರೂ. ಅನುಮತಿ ಲಭಿಸಿದೆ.

ಆಸ್ಪತ್ರೆಗೆ ತೆರಳುವ ಮುಖ್ಯ ದ್ವಾರದಲ್ಲಿ ರಸ್ತೆ ಅತ್ಯಂತ ಕೆಟ್ಟು ಹೋಗಿದ್ದು, ವಾಹನಗಳಿಗೆ ಸುಗಮವಾಗಿ ಸಾಗಲು ಸಾಧ್ಯವಾಗದೆ ಚಾಲಕರು ಸಮಸ್ಯೆಗೆ ಸಿಲುಕುತ್ತಿದ್ದರು. ಆಸ್ಪತ್ರೆಗೆ ಬರುವ ರೋಗಿಗಳಿಗೂ ಸಮಸ್ಯೆ ಉಂಟಾಗುತ್ತಿದೆ. ರಸ್ತೆಯಲ್ಲಿ ಹೊಂಡಗುಂಡಿ ನಿರ್ಮಾಣವಾಗಿದ್ದು, ಈ ರಸ್ತೆಯನ್ನು ನವೀಕರಿಸಲು ಅನುಮತಿ ಲಭಿಸುವುದರೊಂದಿಗೆ ರಸ್ತೆಗೆ ಶಾಪ ಮೋಕ್ಷ ಲಭಿಸಿದಂತಾಗಿದೆ.

ಕಾಸರಗೋಡು ಶಾಸಕ ಎನ್‌.ಎ.ನೆಲ್ಲಿಕುನ್ನು ಅವರ ಶಾಸಕ ನಿಧಿಯನ್ನು ಬಳಸಿಕೊಂಡು ಶೀಘ್ರವೇ ರಸ್ತೆ ಕಾಮಗಾರಿ ನಡೆಯಲಿದೆ. ರಸ್ತೆ ನವೀಕರಣಕ್ಕೆ ಆರು ಲಕ್ಷ ರೂ. ಎಸ್ಟಿಮೇಟ್‌ ನೀಡಲಾಗಿದೆ. ಆಸ್ಪತ್ರೆಯ ಮುಖ್ಯದ್ವಾರದಿಂದ ಆಸ್ಪತ್ರೆ ಪರಿಸರದವರೆಗೆ ರಸ್ತೆ ನಿರ್ಮಾಣವಾಗಲಿದೆ. ಕಾಂಕ್ರೀಟ್‌ ರಸ್ತೆಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ರಸ್ತೆ ನಿರ್ಮಾಣ ಈ ಮೊತ್ತದಲ್ಲಿ ಪೂರ್ಣಗೊಳಿಸುವುದು ಅಸಾಧ್ಯವಾಗುವ ಹಿನ್ನೆಲೆಯಲ್ಲಿ 10 ಲಕ್ಷ ರೂ. ಕಾಮಗಾರಿಗೆ ಅನುಮತಿ ನೀಡಲಾಗಿದೆ.

ಆಸ್ಪತ್ರೆಯ ಮುಖ್ಯದ್ವಾರದಲ್ಲಿ ರಸ್ತೆಯಲ್ಲಿ ಹೊಂಡಗುಂಡಿ ಸೃಷ್ಟಿಯಾಗಿರುವುದರಿಂದ ಆ್ಯಂಬುಲೆನ್ಸ್‌ಗಳಿಗೆ ಸುಗಮವಾಗಿ ಸಾಗಲು ಸಾಧ್ಯವಾಗುತ್ತಿಲ್ಲ. ಆ್ಯಂಬುಲೆನ್ಸ್‌ ಚಾಲಕರು ಸಾಹಸದಿಂದ ವಾಹನ ಚಲಾಯಿಸಬೇಕಾಗುತ್ತದೆ.

50 ಮೀಟರ್‌ನಷ್ಟು ಹಾನಿ
ನಗರದ ಎಂ.ಜಿ. ರಸ್ತೆಯಿಂದ ಆಸ್ಪತ್ರೆಗೆ ತಲುಪಲಿರುವ 50 ಮೀಟರ್‌ನಷ್ಟು ರಸ್ತೆ ಸಂಪೂರ್ಣ ಶೋಚನೀಯವಾಗಿದೆ. ರಸ್ತೆಯಿಂದ ವಾಹನಗಳು ಹಾದು ಹೋಗುವಾಗ ಜಲ್ಲಿ ಸಿಡಿಯುಔಊದು ಸಾಮಾನ್ಯವಾಗಿದೆ. ಜಲ್ಲಿ ಸಿಡಿದು ರಸ್ತೆ ಪಕ್ಕದಲ್ಲಿ ಸಾಗುವವರ ಮೈಮೇಲೆ ಬಿದ್ದು ಗಾಯಗೊಂಡ ಘಟನೆಗಳೂ ನಡೆದಿವೆ. ರಸ್ತೆಯ ಶೋಚನೀಯ ಸ್ಥಿತಿಯಿಂದಾಗಿ ಅಪಾಯಕ್ಕೆ ಕಾರಣ ವಾಗುತ್ತಿದೆ. ಕೆಲವು ತಿಂಗಳುಗಳಿಂದ ರಸ್ತೆ ಹಾನಿಯಾಗು ತ್ತಲೇ ಬಂದಿದ್ದರೂ ಈ ವರೆಗೂ ಸಂಬಂಧಪಟ್ಟವರು ಇತ್ತ ಗಮನ ಹರಿಸಿರಲಿಲ್ಲ. ಸುಮಾರು 50 ಮೀಟರ್‌ಗಿಂತಲೂ ಕಡಿಮೆ ಇರುವ ರಸ್ತೆಯನ್ನು ನವೀಕರಿಸುವ ಬಗ್ಗೆ ಇತ್ತ ಗಮನ ಹರಿಸದಿರುವ ಬಗ್ಗೆ ವ್ಯಾಪಕ ಪ್ರತಿಭಟನೆಗೂ ಕಾರಣವಾಗಿತ್ತು.

ಹೊಂಡಗುಂಡಿ ರಸ್ತೆ
ರಸ್ತೆಗೆ ಹಾಸಲಾಗಿದ್ದ ಕಗ್ಗಲ್ಲು ಮೇಲೆ ಬಿದ್ದು ಹೊಂಡ ಗುಂಡಿಯಾಗಿದೆ. ರಸ್ತೆ ಶೋಚನೀಯವಾಗಿರುವುದರಿಂದ ತುರ್ತು ವಿಭಾಗಕ್ಕೆ ಕೊಂಡೊಯ್ಯುವ ರೋಗಿಗಳ ದುಃಸ್ಥಿತಿ ದಯನೀಯವಾಗಿದೆ. ರಸ್ತೆ ಸಂಪೂರ್ಣ ಕೆಟ್ಟು ಹೋದುದರಿಂದಾಗಿ ಗರ್ಭಿಣಿಯರೂ ಹೆಚ್ಚು ಸಂಕಷ್ಟ ಅನುಭವಿಸುವಂತಾಗಿದೆ. ರೋಗಿಗಳ ಜತೆಯಲ್ಲಿ ಬರುವವರು ರಸ್ತೆಯ ಸ್ಥಿತಿಯನ್ನು ಕಂಡು ಶಾಪ ಹಾಕಿದ್ದು ಇದೆ.

ಮುಂದಿನ ಕೆಲವು ದಿನಗಳಲ್ಲಿ ಮಳೆ ಆರಂಭವಾಗುವ ಮುನ್ನವೇ ರಸ್ತೆ ದುರಸ್ತಿ ಸಾಧ್ಯವಾಗದಿದ್ದಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನು ನವೀಕರಿಸಲು ಅನುಮತಿ ಲಭಿಸಿರುವುದರಿಂದ ಶೀಘ್ರವೇ ರಸ್ತೆ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿದೆ.

ಶಾಸಕ ನಿಧಿ ಬಳಕೆ
ಅತ್ಯಂತ ಕೆಟ್ಟ ಸ್ಥಿತಿಯಲ್ಲಿರುವ ಈ ರಸ್ತೆಯನ್ನು ನವೀಕರಿಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಶಾಸಕ ನಿಧಿಯನ್ನು ಬಳಸಿಕೊಳ್ಳಲಾಗುವುದು. ಶೀಘ್ರವೇ ರಸ್ತೆ ಕಾಮಗಾರಿ ಆರಂಭಿಸಲಾಗುವುದು. ರಸ್ತೆಯನ್ನು ಕಾಂಕ್ರೀಟ್‌ಗೊಳಿಸುವ ಹಿನ್ನೆಲೆಯಲ್ಲಿ ಶಾಸಕ ನಿಧಿಯಿಂದ 10 ಲಕ್ಷ ರೂ. ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ.
– ಎನ್‌.ಎ. ನೆಲ್ಲಿಕುನ್ನು, ಶಾಸಕರು, ಕಾಸರಗೋಡು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.