ನಾಗರಪಂಚಮಿ: ಭಕ್ತಿ-ನಿಷ್ಠೆಯಿಂದ ಕ್ಷೀರಾಭಿಷೇಕ
Team Udayavani, Aug 6, 2019, 6:19 AM IST
ಕಾಸರಗೋಡು: ನಾಡಿನೆಲ್ಲೆಡೆ ಸೋಮವಾರ ಭಕ್ತಿ-ನಿಷ್ಠೆ-ಸಡಗರದಿಂದ ನಾಗರ ಪಂಚಮಿ ಆಚರಿಸಲಾಯಿತು. ನಾಡಿನ ಪ್ರಮುಖ ದೇವಾಲಯಗಳಲ್ಲಿ, ಮಂದಿರಗಳಲ್ಲಿ, ನಾಗನ ಬನಗಳಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ನಾಗನಿಗೆ ಎಳನೀರು ಮತ್ತು ಕ್ಷೀರಾಭಿಷೇಕ ನಡೆಸಿದರು. ವರ್ಷದ ಮೊದಲ ಹಬ್ಬದ ಸಡಗರ ಎಲ್ಲೆಡೆ ಕಂಡು ಬಂತು. ಪ್ರಕೃತಿಯನ್ನು ಪೂಜಿಸುವ ನಾಗಾರಾಧನೆ ಹೆಣ್ಮಕ್ಕಳಿಗೆ ವಿಶೇಷವಾಗಿದೆ.
ಕಾಸರಗೋಡಿನ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗಿನಿಂದಲೇ ನಾಗನಿಗೆ ಕ್ಷೀರಾಭಿಷೇಕ ಮತ್ತು ಎಳನೀರಿನ ಅಭಿಷೇಕ ಸಮರ್ಪಿಸಲು ಭಕ್ತರು ನೆರೆದಿದ್ದರು. ಇದೇ ರೀತಿ ಜಿಲ್ಲೆಯ ಬಹುತೇಕ ದೇವಸ್ಥಾನ, ಮಂದಿರ, ನಾಗಬನಗಳಲ್ಲಿ ದೃಶ್ಯಗಳು ಕಂಡು ಬಂತು. ನಾಗನಿಗೆ ಅಭಿಷೇಕ ಮಾಡುವ ಮೂಲಕ ಭಕ್ತರು ಕೃತಾರ್ಥ ಭಾವವನ್ನು ಹೊಂದಿದರು.
ಕಾಸರಗೋಡು ಬ್ಯಾಂಕ್ ರಸ್ತೆಯಲ್ಲಿರುವ ನಾಗರಾಜ ಕಟ್ಟೆಯಲ್ಲಿ ನಾಗನಿಗೆ ಹಾಲನ್ನೆರೆಯಲು ಭಾರೀ ಸಂಖ್ಯೆಯಲ್ಲಿ ಭಕ್ತರು ಬೆಳಗ್ಗಿನಿಂದಲೇ ಸರದಿಯಲ್ಲಿ ನಿಂತಿದ್ದರು.
ಕಾಸರಗೋಡು ನಗರದ ಎಸ್.ವಿ.ಟಿ. ರಸ್ತೆಯಲ್ಲಿರುವ ನಾಗನ ಕಟ್ಟೆಯಲ್ಲಿ ಭಕ್ತರುಅಭಿಷೇಕ ಮಾಡಿದರು.
ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ನೆಲ್ಲಿಕುಂಜೆ ಕೋಮರಾಡಿ ದೈವಸ್ಥಾನದ ನಾಗನಿಗೆ ಹಾಲನ್ನೆರೆಯಲು ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದು, ವಿಶೇಷ ಪೂಜೆ-ಪುನಸ್ಕಾರ ನಡೆಸಿದರು. ಹಲವೆಡೆ ನಾಗತಂಬಿಲ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ