ಕಾಸರಗೋಡು ಡಿಸಿಗೆ ರಾಷ್ಟ್ರೀಯ ಪ್ರಶಸ್ತಿ


Team Udayavani, Jan 24, 2020, 6:30 AM IST

kasargod-dc

ಕಾಸರಗೋಡು : 2019- 20ನೇ ವರ್ಷದ ಇ- ಗವರ್ನೆನ್ಸ್‌ಗಿರುವ ರಾಷ್ಟ್ರೀಯ ಪ್ರಶಸ್ತಿಗೆ ಕಾಸರಗೋಡು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ಆಯ್ಕೆಯಾಗಿದ್ದಾರೆ.

ಕೇಂದ್ರ ಪರ್ಸನಲ್‌, ಪಬ್ಲಿಕ್‌ ಗ್ರಿವೆನ್ಸೆಸ್‌ ಆ್ಯಂಡ್‌ ಪೆನ್ಶನ್ಸ್‌ ಸಚಿವಾಲಯ ಸಿಬ್ಬಂದಿ ಆಡಳಿತ ಪರಿಷ್ಕಾರ ಇಲಾಖೆ ಏರ್ಪಡಿಸಿರುವ ಪುರಸ್ಕಾರಕ್ಕೆ ಅವರು ಆಯ್ಕೆಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ನೇತೃತ್ವದಲ್ಲಿ ವಿಶೇಷಚೇತನರಿಗಾಗಿ ಜಾರಿಗೊಳಿಸಿರುವ “ವೀ ಡಿಸರ್ವ್‌’ ಯೋಜನೆಗಾಗಿ ಈ ಪುರಸ್ಕಾರ ಸಂದಿದೆ. ಇ-ಗವರ್ನೆನ್ಸ್‌ನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಚಟುವಟಿಕೆ ನಡೆಸಿದ ಯೋಜನೆಗಾಗಿ ಚಿನ್ನದ ಪದಕ ಇವರಿಗೆ ಲಭಿಸಲಿದೆ. ಫೆ. 8ರಂದು ಮುಂಬಯಿಯಲ್ಲಿ ನಡೆಯುವ ಇ-ಗವರ್ನೆನ್ಸ್‌ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕಾಸರಗೋಡು ಜಿಲ್ಲೆಗೆ ಈ ಮೂಲಕ ಪ್ರಥಮ ಬಾರಿಗೆ ಈ ಪುರಸ್ಕಾರ ಲಭಿಸುತ್ತಿದೆ. ಕಂದಾಯ ಸಚಿವ ಇ.ಚಂದ್ರಶೇಖರನ್‌ ಅವರು ಜಿಲ್ಲಾ ಧಿಕಾರಿ ಅವರನ್ನು ಅಭಿನಂದಿಸಿದರು.

ಗಾಲಿಕುರ್ಚಿ, ಎಂ.ಆರ್‌. ಕಿಟ್‌, ಬ್ರೈಲಿ ಕೈನ್‌, ಸ್ಮಾರ್ಟ್‌ ಫೋನ್‌ ಸಹಿತ ಸಹಾಯಕ ಉಪಕರಣಗಳನ್ನು, ವಿವಿಧ ರೀತಿಯ ಕ್ರಚಸ್‌ ಸಹಿತ ಉಪಕರಣಗಳನ್ನು ಈ ಯೋಜನೆಯ ಅಂಗವಾಗಿ ಈಗಾಗಲೇ ವಿತರಣೆ ನಡೆಸಲಾಗಿದೆ. ಯೋಜನೆಯ ಅಂಗವಾಗಿ ನಡೆದ ಶಿಬಿರಗಳಲ್ಲಿ 19,578 ವಿಶೇಷಚೇತನರು ಭಾಗವಹಿಸಿದ್ದಾರೆ. ಇವರಲ್ಲಿ 4,886 ಮಂದಿಯ ಸಮಗ್ರ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. 3,745 ಮಂದಿಗೆ ವೈದ್ಯಕೀಯ ಮಂಡಳಿಯ ಅರ್ಹತಾಪತ್ರ ಲಭಿಸಿದೆ. 21 ಗ್ರಾಮ ಪಂಚಾಯತ್‌ಗಳಲ್ಲಿ ಈ ಶಿಬಿರ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಹಂತದಲ್ಲಿ ಎಲ್ಲ ವಿಶೇಷ ಚೇತನರಿಗೆ ಯು.ಡಿ.ಐ.ಡಿ. ಕಾರ್ಡ್‌ ಲಭಿಸಲಿದೆ. ಈ ಯೋಜನೆ ಜಾರಿ ಮೂಲಕ 2016ರ ರಾಷ್ಟ್ರೀಯ ವಿಶೇಷಚೇತನ ಕಾಯಿದೆ ಜಾರಿಗೊಳಿಸಿದ ದೇಶದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆ ಕಾಸರಗೋಡಿಗೆ ಲಭಿಸಿದೆ.

“ವೀ ಡಿಸರ್ವ್‌’
ಅರ್ಹ ವ್ಯಕ್ತಿಗೆ ಸೂಕ್ತ ಅವಧಿಯಲ್ಲಿ ಅಗತ್ಯವಿರುವ ಸಹಾಯ ಒದಗಿಸುವ ಉದ್ದೇಶದಿಂದ ಕಾಸರಗೋಡು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ರಚಿಸಿದ ಯೋಜನೆ “ವೀ ಡಿಸರ್ವ್‌’. ಕೇಂದ್ರ ಸರಕಾರದ ಎ.ಡಿ.ಐ.ಪಿ. ಯೋಜನೆಯೊಂದಿಗೆ ಸಹಕರಿಸಿ ಈ ಯೋಜನೆ ಜಾರಿಗೊಳ್ಳುತ್ತಿದೆ. ಎ.ಡಿ.ಐ.ಪಿ. ಸ್ಕೀಂ ಪ್ರಕಾರ ಜಿಲ್ಲೆಯಲ್ಲಿ ನಡೆಸಿದ ಶಿಬಿರಗಳಲ್ಲಿ ಆಯ್ಕೆಗೊಂಡ ವಿಶೇಷ ಚೇತನರಿಗೆ ಕೇಂದ್ರ ಸರಕಾರಿ ಸಂಸ್ಥೆ ಅಲೀಂಕೋದ ಸಹಕಾರದೊಂದಿಗೆ ಸಹಾಯ ಉಪಕರಣಗಳನ್ನು ವಿತರಿಸಲಾಗಿದೆ. ಯೋಜನೆ ಪ್ರಕಾರ ಈಗಾಗಲೇ 757 ಅತ್ಯಾಧುನಿಕ ಸಹಾಯಕ ಉಪಕರಣಗಳನ್ನು ವಿತರಿಸಲಾಗಿದೆ. ಜಿಲ್ಲಾ ಆಡಳಿತಕ್ಕಾಗಿ ಕೇರಳ ಸಾಮಾಜಿಕ ಸುರಕ್ಷಾ ಮಿಷನ್‌ ಯೋಜನೆಯ ಏಕಸೂತ್ರತೆ ನಿರ್ವಹಿಸುತ್ತಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.