ನೆರೆ ಪರಿಹಾರ ಕೇಂದ್ರ: ಕಾರ್ಯಪ್ಪ ಕಾಲೇಜು ಎನ್‌ಸಿಸಿ ಕೆಡೆಟ್‌ಗಳ ಮಾದರಿ ಸೇವೆ


Team Udayavani, Aug 22, 2019, 5:00 AM IST

g-13

ಮಡಿಕೇರಿ: ನಗರದ 19ನೇ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್‌ ಆಫೀಸರ್‌ ವಿ.ಎಂ.ನಾಯಕ್‌ ಅವರ ಮಾರ್ಗದರ್ಶನದಲ್ಲಿ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜ್‌ನ‌ 50ಕ್ಕೂ ಹೆಚ್ಚು ಎನ್‌ಸಿಸಿ ಕೆಡೆಟ್‌ಗಳು ಎನ್‌ಸಿಸಿ ಅಧಿಕಾರಿ ಮೇಜರ್‌ ರಾಘವ ಬಿ. ಅವರ ನೇತೃತ್ವದಲ್ಲಿ ಕಳೆದ 8 ದಿನಗಳಿಂದ ಜಿಲ್ಲೆಯ ವಿವಿಧೆಡೆ ಸಂತ್ರಸ್ತರು ಆಶ್ರಯ ಪಡೆದಿರುವ ಪರಿಹಾರ‌ ಕೇಂದ್ರಗಳಲ್ಲಿ ನಿಸ್ವಾರ್ಥ ಸೇವೆಯಲ್ಲಿ ತೊಡಗಿದ್ದಾರೆ.

ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂತ್ರಸ್ತರಿಗೆ ಧೈರ್ಯ ತುಂಬುತ್ತಾ ನೊಂದವರಿಗೆ ಯಾವುದೇ ರೀತಿಯಲ್ಲಿ ಕೊರತೆಗಳು ಉಂಟಾಗದಂತೆ ನಿಗಾ ವಹಿಸುತ್ತಿದ್ದಾರೆ. ಆಹಾರ ಸಾಮಾಗ್ರಿಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವಲ್ಲಿ ಇತರ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸೇವಾ ಇಲಾಖೆಯ ಮೂಲಕ ನೀಡಲಾಗುವ ಪಡಿತರವನ್ನು ತಲುಪಿಸುವುದು, ಆಹಾರದ ಪೊಟ್ಟಣಗಳನ್ನು ಸಿದ್ಧಪಡಿಸುವುದು ಮತ್ತು ವಿತರಿಸುವುದು, ಪರಿಹಾರ ಕೇಂದ್ರಗಳ ಶುಚಿತ್ವವನ್ನು ಕಾಪಾಡುವುದು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಫ‌ಲಾಪೇಕ್ಷೆ ಇಲ್ಲದೆ ಕೆಡೆಟ್‌ಗಳು ತಮ್ಮನ್ನು ತೊಂಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ನಿಸ್ವಾರ್ಥ ಸೇವೆಗೆ ಸಂತ್ರಸ್ತರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪರಿಹಾರ ಕೇಂದ್ರಗಳಾದ ಚೆಯ್ಯಂಡಾಣೆ, ನಾಪೋಕ್ಲು, ವಾಟೆಕಾಡು, ಮರಗೋಡು, ಮೂರ್ನಾಡು, ಗುಹ್ಯ, ಕೊಂಡಂಗೇರಿ ಪ್ರದೇಶಗಳಿಗೆ ಕೆಡೆಟ್‌ಗಳ ತಂಡ ತೆರಳಿ ಮುಂದಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದರೆ ಯಾವ ರೀತಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಕೆಡೆಟ್‌ಗಳು ಜನರಲ್ಲಿ ಜಾಗೃತಿ ಮೂಡಿಸಿದರು.

ಫೀ.ಮಾ.ಕಾರ್ಯಪ್ಪ ಕಾಲೇಜ್‌ನ ಎನ್‌ಸಿಸಿ ಅಧಿಕಾರಿ ಮೇಜರ್‌ ರಾಘವ ಮಾತನಾಡಿ, ಕಾರ್ಯಪ್ಪ ಕಾಲೇಜ್‌ನಲ್ಲಿ ಎನ್‌ಸಿಸಿ ಕೆಡೆಟ್‌ಗಳಾಗಿದ್ದ 9 ವಿದ್ಯಾರ್ಥಿಗಳು ಭಾರತೀಯ ಸೈನ್ಯಕ್ಕೆ ಭರ್ತಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಎನ್‌ಸಿಸಿ ವಿದ್ಯಾರ್ಥಿಗಳು ಸಮಾಜ ಸೇವೆಯ ಜೊತೆಗೆ ದೇಶ ಸೇವೆಯಲ್ಲೂ ತೊಡಗುವುದು ಹೆಮ್ಮೆಯ ವಿಚಾರವೆಂದರು.

ಕಾಲೇಜು ಪ್ರಾಂಶುಪಾಲ ಡಾ.ಜಗತ್‌ ತಿಮ್ಮಯ್ಯ ಅವರ ಸಹಕಾರದಿಂದ ನಮ್ಮ ಸೇವೆ ಯಶಸ್ವಿಯಾಗಿದೆ ಎಂದು ವಿದ್ಯಾರ್ಥಿಗಳು ತೃಪ್ತಿ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.