ಮಾತು ಪಾಲಿಸದ ಸರಕಾರ: ಜ. 30ರಂದು ಎಂಡೋ ಸಂತ್ರಸ್ತರಿಂದ ಸೆಕ್ರೆಟರಿಯೇಟ್‌ ಮುತ್ತಿಗೆ


Team Udayavani, Jan 27, 2020, 10:04 PM IST

27KSDE3

ಕಾಸರಗೋಡು: ಹೆಲಿಕಾಪ್ಟರ್‌ನಲ್ಲಿ ಜಿಲ್ಲೆಯ 11 ಗ್ರಾ.ಪಂ.ಗಳಲ್ಲಿರುವ ತೋಟಗಾರಿಕಾ ನಿಗಮದ ಗೇರು ತೋಟ ಗಳಿಗೆ ಸಿಂಪಡಿಸಿದ ಎಂಡೋಸಲ್ಫಾನ್‌ ದುಷ್ಪರಿಣಾಮದಿಂದ ಕಂಗೆಟ್ಟ ಸಂತ್ರಸ್ತರ ವಿವಿಧ ಬೇಡಿಕೆಗಳ ಹೋರಾಟದ ಫಲವಾಗಿ ವಿವಿಧ ಸವಲತ್ತುಗಳ ಭರವಸೆ ಲಭಿಸಿದ್ದರೂ, ಅವುಗಳಲ್ಲಿ ಹೆಚ್ಚಿನವು ಈಡೇರದಿರುವುದರಿಂದ ಸಂತ್ರಸ್ತರು ಮತ್ತೆ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ಇದರಂತೆ ಜ. 30 ರಂದು ತಿರುವನಂತಪುರದಲ್ಲಿರುವ ಸೆಕ್ರೆಟರಿ ಯೇಟ್‌ಗೆ ಮುತ್ತಿಗೆ ಚಳವಳಿ ನಡೆಯಲಿದೆ.

2017 ರಲ್ಲಿ ನಡೆಸಲಾದ ವೈದ್ಯಕೀಯ ಶಿಬಿರದಲ್ಲಿ ಪತ್ತೆಹಚ್ಚಲಾದ 1905 ಮಂದಿಯಲ್ಲಿ 18 ವರ್ಷಕ್ಕಿಂತ ಕೆಳಗಿನ ಪ್ರಾಯದ ಮಕ್ಕಳನ್ನು ಸೇರಿಸುವಂತೆ ಎಂಡೋ ಸೆಲ್‌ ಸಭೆಯಲ್ಲಿ ತೀರ್ಮಾನವಾಗಿದ್ದರೂ ಈ ಮಕ್ಕಳಿಗೆ ಇದುವರೆಗೆ ಚಿಕಿತ್ಸಾ ಸೌಲಭ್ಯ ಸಹಿತ ಯಾವುದೇ ಸವಲತ್ತು ಲಭಿಸಿಲ್ಲ. 2017ರ ಸುಪ್ರೀಂ ಕೋರ್ಟ್‌ ತೀರ್ಪಿನನ್ವಯ ವಿಶೇಷ ವೈದ್ಯಕೀಯ ಶಿಬಿರದಲ್ಲಿ ಗುರುತಿಸಲ್ಪಟ್ಟ ಎಂಡೋ ಪೀಡಿತರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಬೇಕೆಂಬ ಆದೇಶವನ್ನೂ ಪಾಲಿಸಿಲ್ಲ. ಎಂಡೋಸಲ್ಫಾನ್‌ ದುಷ್ಪರಿಣಾಮದಿಂದ ಬಳಲುತ್ತಿರುವವರಿಗೆ ಪುನರ್ವಸತಿ ಕಲ್ಪಿಸಲು ಟ್ರಿಬ್ಯೂನಲ್‌ ಸ್ಥಾಪಿಸುವಂತೆ ಮಾಡಿಕೊಂಡ ಮನವಿಗೂ ಸರಕಾರದ ಸ್ಪಂದನೆಯಿಲ್ಲ.
ಎಂಡೋಸಲ್ಫಾನ್‌ ದುಷ್ಪರಿಣಾಮ ಪೀಡಿತರು ಮತ್ತೆ ಬೀದಿಗಿಳಿದು ಹೋರಾಡಲು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಜಾರಿಗೆ ಸರಕಾರ ಮುಂದಾಗುತ್ತಿಲ್ಲ ಎಂಬುದು ಸಂತ್ರಸ್ತರ ಪರ ಹೋರಾಟ ನಡೆಸುವ ಸಂಘಟನೆಗಳ ಪದಾಧಿಕಾರಿಗಳ ಆರೋಪವಾಗಿದೆ.

ಎಂಡೋ ಸಂತ್ರಸ್ತರಿಗೆ ಲಭಿಸುತ್ತಿದ್ದ ಮಾಸಿಕ ಪಿಂಚಣಿಯೂ ಸಕಾಲಕ್ಕೆ ಕೈ ಸೇರುತ್ತಿಲ್ಲ. ಸಂತ್ರಸ್ತರ ಪಿಂಚಣಿ ಮೊತ್ತ ಹೆಚ್ಚಿಸಬೇಕೆಂಬ ಬೇಡಿಕೆ ಹಲವು ತಿಂಗಳಿಂದ ಕೇಳಿ ಬರುತ್ತಿದ್ದು, ಇದೀಗ ಪಿಂಚಣಿ ಮೊತ್ತವೇ ಸ್ಥಗಿತಗೊಂಡಿದೆ. ಇದರಿಂದ ಸಂತ್ರಸ್ತರು ಮತ್ತಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಎಂಡೋ ಸಂತ್ರಸ್ತರ ಚಿಕಿತ್ಸೆಗಾಗಿ ನ್ಯೂರೋಲೊಜಿಸ್ಟ್‌ ನೇಮಕಾತಿಯೂ ನಡೆದಿಲ್ಲ. ಜಿಲ್ಲೆಯಲ್ಲಿ ದಾಸ್ತಾನಿರುವ ಎಂಡೋಸಲ್ಫಾನ್‌ ಕೀಟನಾಶಕವನ್ನು ವೈಜ್ಞಾನಿಕವಾಗಿ ನಿಷ್ಕಿೃಯಗೊಳಿಸುವ ಬಗ್ಗೆಯೂ ಇದುವರೆಗೆ ಕ್ರಮ ಕೈಗೊಂಡಿಲ್ಲ. ಇನ್ನು ಎಂಡೋ ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡಬೇಕೆಂಬ ಆಯಿಷಾ ಪೋತ್ತಿ ಅಧ್ಯಕ್ಷರಾಗಿರುವ ವಿಧಾನಸಭಾ ಸಮಿತಿ ಶಿಫಾರಸಿಗೂ ಬೆಲೆಯಿಲ್ಲದಾಗಿದೆ ಎಂದು ಸಮಿತಿ ಆರೋಪಿಸುತ್ತಿದೆ.

ಜ.30ರಂದು
ಸೆಕ್ರೆಟರಿಯೇಟ್‌ ಮುತ್ತಿಗೆ
ಎಂಡೋ ದುಷ್ಪರಿಣಾಮದಿಂದ ಸಂಕಷ್ಟ ಅನುಭವಿಸುತ್ತಿರುವ ಎಂಡೋ ಸಂತ್ರಸ್ತರ ತಾಯಂದಿರು ಜ. 30ರಂದು ತಿರುವನಂತಪುರ ಸೆಕ್ರೆಟರಿಯೇಟ್‌ ಮುಂಭಾಗದಲ್ಲಿ ಧರಣಿ ನಡೆಸುವರು. 2019 ಜನವರಿ 30ರಂದು ತಿರುವನಂತಪುರ ಸೆಕ್ರೆಟರಿಯೇಟ್‌ ಮುಂಭಾಗ ನಡೆಸಿದ ನಿರಾಹಾರ ಸತ್ಯಾಗ್ರಹದ ಸಂದರ್ಭದಲ್ಲಿ ಸರಕಾರ ಮಧ್ಯ ಪ್ರವೇಶಿಸಿ ಕೈಗೊಂಡ ತೀರ್ಮಾನ ಇದುವರೆಗೂ ಜಾರಿಯಾಗಿಲ್ಲ. ಸರಕಾರ ಎಂಡೋ ಸಂತ್ರಸ್ತರ ಪುನರ್ವಸತಿ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಪ್ರತಿಭಟಿಸಿ ಹಾಗೂ ಪಿಂಚಣಿ ಸಹಿತ ವಿವಿಧ ಸವಲತ್ತುಗಳನ್ನು ಶೀಘ್ರವೇ ಮಂಜೂರು ಗೊಳಿಸುವಂತೆ ಒತ್ತಾಯಿಸಿ ಸೆಕ್ರೆಟರಿಯೇಟ್‌ಗೆ ಮುತ್ತಿಗೆ ಚಳವಳಿ ನಡೆಯುವುದು. ಇದರ ಪೂರ್ವಭಾವಿಯಾಗಿ ಜ. 19ರಂದು ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಸಂತ್ರಸ್ತರು “ಹೋರಾಟ ಜ್ಯೋತಿ’ ಬೆಳಗಿಸುವ ಮೂಲಕ ಸೆಕ್ರೆಟರಿಯೇಟ್‌ ಎದುರು ನಡೆಯುವ ಧರಣಿಗೆ ಬೆಂಬಲ ಸೂಚಿಸಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.