ವೃದ್ಧ ಮಂದಿರದಲ್ಲಿ ತಂಗಿದ್ದ ಮಹಿಳೆ ಸಂಬಂಧಿಕರಿಗೆ ಹಸ್ತಾಂತರ


Team Udayavani, Apr 13, 2019, 3:11 PM IST

Maniyamma

ಬದಿಯಡ್ಕ : ವೃದ್ಧ ಮಂದಿರದಲ್ಲಿ ತಂಗಿದ್ದ ವೃದ್ಧೆಯ ಸಂಬಂಧಿಕರನ್ನು ಪತ್ತೆ ಮಾಡಿ ಅವರ ವಶಕ್ಕೆ ಹಸ್ತಾಂತರಿಸಲಾಗಿದೆ.ಕಾಸರಗೋಡು ಸರಕಾರಿ ವೃದ್ಧಸದನದಲ್ಲಿ ಆಶ್ರಯ ಪಡೆಯುತ್ತಿದ್ದ ಮಣಿಯಮ್ಮ (75) ಈ ರೀತಿ ಸಂಬಂಧಿಕರಿಗೆ ಹಸ್ತಾಂತರಗೊಂಡವರು.

2018 ಡೆಸೆಂಬರ್‌ ತಿಂಗಳಲ್ಲಿ ಪಿಂಕ್‌ ಪೋಲೀಸರ (ಮಹಿಳೆಯರಿಗೆ ಸಹಾಯ ಒದಗಿಸುವ ಮಹಿಳಾ ಪೋಲೀಸ್‌ ದಳ) ಸಹಾಯದಿಂದ ಸರಕಾರಿ ವೃದ್ಧ ಮಂದಿರ ಸೇರಿದ್ದರು. ತಮಿಳುನಾಡಿನಿಂದ ಬಸ್‌ ಮೂಲಕ ಚಿಕ್ಕಮಂಗಳೂರಿನಲ್ಲಿರುವ ಪುತ್ರಿಯ ಮನೆಗೆ ತೆರಳುವ ದಾರಿ ಮಧ್ಯೆ ಕಾಸರಗೋಡಿನಲ್ಲಿ ಇಳಿದ ಮೂಲಕ ಅವರು ಯಾತ್ರೆಯಿಂದ ಕಳಚಿಕೊಂಡಿದ್ದರು. ನಂತರ ಅನಾಥ ಸ್ಥಿತಿಯಲ್ಲಿ ಕಂಡು ಬಂದ ಅವರನ್ನು ಪಿಂಕ್‌ ಪೋಲೀಸರು ವೃದ್ಧ ಮಂದಿರಕ್ಕೆ ಸೇರ್ಪಡೆಗೊಳಿಸಿದ್ದರು.

ತಮ್ಮ ಊರಿನ ಬಗ್ಗೆ , ಸಂಬಂಧಿಕರ ಬಗ್ಗೆ ಮಾಹಿತಿ ನೀಡಲು ಸಾಧ್ಯವಾಗದಷ್ಟು ದುರ್ಬಲರಾದ ಹಿನ್ನಲೆಯಲ್ಲಿ ಇವರ ವಿಳಾಸ ಪತ್ತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಷ್ಟ ಸಾಧ್ಯವಾಗಿತ್ತು. ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರ ಮತ್ತು ವೃದ್ಧ ಮಂದಿರದ ಅಧಿಕಾರಿಗಳು ನಡೆಸಿದ ಯತ್ನದ ಫಲವಾಗಿ ತಮಿಳುನಾಡಿನ ತಿಟ್ಟುಗಟ್ಟಿ ಪೋಲೀಸರ ಸಹಾಯದಿಂದ ನಡೆದ ತನಿಖೆಯಲ್ಲಿ ಮಣಿಯಮ್ಮ ಅವರ ವಿಳಾಸ ಮತ್ತು ಸಂಬಂಧಿಕರ ಪತ್ತೆಯಾಗಿತ್ತು.

ಮಣಿಯಮ್ಮ ಅವರನ್ನು ಸಂಬಂಧಿಕರಿಗೆ ಒಪ್ಪಿಸುವ ಸಂಬಂಧ ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರ ಕಚೇರಿಯಲ್ಲಿ ಸಭೆ ನಡೆಯಿತು. ಜಿಲ್ಲಾ ನ್ಯಾಯಮೂರ್ತಿ ಎಸ್‌. ಮನೋಹರ್‌ ಕಿಣಿ ಅವರು ಮಣಿಯಮ್ಮ ಅವರನ್ನು ಪುತ್ರಿಗೆ ಹಸ್ತಾಂತರಿಸಿದ್ದಾರೆ.

ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶನ್‌ ಪಿ.ಟಿ., ವೃದ್ಧ ಮಂದಿರ ವರಿಷ್ಠಾಧಿಕಾರಿ ಪಂಕಜಾಕ್ಷನ್‌ ಪಿ.ಎಂ. ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.