ಸಮೃದ್ಧಿ , ಸಂತೋಷದ ಹೊನಲಿನಲ್ಲಿ “ಓಣಂ’


Team Udayavani, Sep 10, 2019, 5:19 AM IST

09-BDK-11

ಕಾಸರಗೋಡು: ದೇವರ ನಾಡು ಎಂಬ ವೈಶಿಷ್ಟ್ಯವನ್ನು ಪಡೆದಿರುವ ಕೇರಳದಲ್ಲಿ ನ್ಯಾಯ ನಿಷ್ಠೆಯಿಂದ ನಾಡು ಬೆಳಗಿಸಿದ ಆದರ್ಶ ರಾಜ ಮಾವೇಲಿ (ಮಹಾಬಲಿ) ತಮ್ಮನ್ನೆಲ್ಲ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿ ಹೋಗುತ್ತಾನೆ ಎಂಬ ನಂಬಿಕೆಯಿಂದ ಮಲಯಾಳಿಗಳು ಓಣಂ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಶ್ರದ್ಧಾ ಭಕ್ತಿಯಿಂದ, ಸಂಭ್ರಮ, ಸಡಗರ ದಿಂದ ಆಚರಿಸುವುದು ರೂಢಿ. ಹತ್ತು ದಿನಗಳ ತನಕ ಆಚರಿಸುವ ಓಣಂ ಹಬ್ಬದ ಪ್ರಮುಖ ದಿನವಾದ “ತಿರುವೋಣಂ’ವನ್ನು ಸೆ. 11ರಂದು ವಿಶೇಷ ಸಂಭ್ರಮದಿಂದ ಕೊಂಡಾಡಲಿದ್ದಾರೆ.

ಸುಖ, ಶಾಂತಿ, ನೆಮ್ಮದಿಯ ಮತ್ತು ಭಾವೈಕ್ಯದ, ಸಾಮರಸ್ಯದ ಸಂದೇಶವನ್ನು ಸಾರುವ ಓಣಂ ಹಬ್ಬ ತನ್ನದೇ ಆದ ವೈಶಿಷ್ಟ್ಯವನ್ನು ಪಡೆದುಕೊಂಡಿದ್ದು, ಕೇರಳೀಯರ ನಾಡಹಬ್ಬವಾಗಿಯೂ, ರಾಷ್ಟ್ರೀಯ ಹಬ್ಬ ವಾಗಿಯೂ ಆಚರಿಸುತ್ತಾರೆ. ಓಣಂ ಹಬ್ಬ ದಂಗವಾಗಿ ವಿಶೇಷವಾಗಿ ರೂಪು ಪಡೆಯುವ ಹೂವಿನ ರಂಗೋಲಿ “ಪೂಕಳಂ’ ರಚಿಸಿ “ಮಾವೇಲಿ’ಯನ್ನು ಬರಮಾಡಿಕೊಳ್ಳುತ್ತಾರೆ. ಮನೆ, ಮಠ, ದೇವಸ್ಥಾನ, ದೈವಸ್ಥಾನ, ತರವಾಡು ಮನೆಗಳಲ್ಲಿ ಪೂಕಳಂ ರಚಿಸಿ ಸಂಭ್ರಮಿಸುವ ಕೇರಳೀಯರು “ಸದ್ಯ’ವನ್ನು ಉಂಡು (ವಿವಿಧ ಬಗೆಯ ಭೋಜನ) ಪರಸ್ಪರ ಶುಭಾಶಯವನ್ನು ಕೋರಿ ಮುಂದಿನ ದಿನಗಳಲ್ಲಿ ಸುಖ, ಶಾಂತಿ, ನೆಮ್ಮದಿಯ ಬದುಕಿಗಾಗಿ ಪ್ರಾರ್ಥಿಸುತ್ತಾರೆ. ಹೆಣ್ಣು ಮಕ್ಕಳ ಉತ್ಸವವೆಂದೇ ಪರಿಗಣಿಸಿ ರುವ ಉತ್ರಾಡಂ ಸೆಪ್ಟಂಬರ್‌ 10ರಂದು ಗಂಡು ಮಕ್ಕಳು ಹಾಗೂ ಇತರರಿಗಿರುವ ತಿರುವೋಣಂ ಸೆ. 11ರಂದು ಆಚರಿಸುವರು.

ಓಣಂ ಹಬ್ಬದ ಪ್ರಮುಖ ದಿನವಾದ “ತಿರುವೋಣಂ’ ಸಂಭ್ರಮದಿಂದ ಆಚರಿಸು ವರು. ಬೆಳಗ್ಗೆ ಎದ್ದು ಶುಚೀಭೂìತರಾಗಿ ಸಮೀಪದ ದೇವಸ್ಥಾನಗಳಿಗೆ, ಮಂದಿರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಕುಟುಂಬ ಸಮೇತರಾಗಿ ಓಣಂ ಸಂತೋಷವನ್ನು ಹಂಚಿಕೊಳ್ಳುತ್ತಾರೆ. ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವುದೂ ಇದೆ.

ಕೇರಳೀಯರು ಎಲ್ಲೇ ಇರಲಿ. ಓಣಂ ಬಂತೆಂದರೆ ತವರಿಗೆ ತಲುಪಿ ಕುಟುಂಬದ ಜತೆ ಸೇರಿಕೊಳ್ಳುತ್ತಾರೆ. ಸುಖದುಃಖಕ್ಕೆ ಮಿಡಿಯುತ್ತಾರೆ. ಕೇರಳೀಯರಿಗೆ ಓಣಂ ಕೇವಲ ಹಬ್ಬ ಮಾತ್ರವಲ್ಲ. ಅದು ಸಮೃದ್ಧಿಯ ದಿನವೂ ಹೌದು. ಕೃಷಿಕರ ದಿನವೂ ಹೌದು. ಈ ಕಾರಣದಿಂದ ಓಣಂ ಕೇರಳೀಯರಿಗೆ ರಾಷ್ಟ್ರೀಯ ಹಬ್ಬ.

ಮಾವೇಲಿ ರಾಜನು ವರ್ಷಕ್ಕೊಮ್ಮೆ ಭೂಮಿಗೆ ಬಂದು ತನ್ನ ಪ್ರಜೆಗಳ ಸಂಕಷ್ಟಗಳನ್ನು ಪರಿಹರಿಸುತ್ತಾನೆ ಎಂಬ ನಂಬಿಕೆಯಲ್ಲಿ ಆಚರಿಸುವ ಓಣಂ ಅತ್ತ ನಕ್ಷತ್ರದಿಂದ ತಿರುವೋಣಂ ವರೆಗಿನ 10 ದಿವಸಗಳ ಕಾಲ ಸಂಭ್ರಮದಿಂದ ಕುಣಿದಾಡುತ್ತಾರೆ. ಓಣಂಗೆ ಸಂಬಂಧಿಸಿ ಹಲವು ಕಥೆಗಳನ್ನು ಹೆಣೆಯಲಾಗಿದೆ. ಕನ್ನಡಿಗರು ನಂಬಿರುವ ಮಹಾಬಲಿಯನ್ನು ಮಲಯಾಳಿಗಳು “ಮಾವೇಲಿ’ ಎನ್ನುವ ಬಲಿಚಕ್ರವರ್ತಿಯ ಸುತ್ತ ಓಣಂ ಸಂಬಂಧ ಕಥೆಯನ್ನು ಹೆಣೆಯಲಾಗಿದೆ.

ಓಣಂ ಹಬ್ಬವನ್ನು ಮಲಯಾಳಿಗಳು ವಿಶಿಷ್ಟವಾಗಿ ಆಚರಿಸುತ್ತಾರೆ. ಇಲ್ಲಿನ ಪ್ರಧಾನ ಆಕರ್ಷಣೆ ಹೂವಿನ ರಂಗೋಲಿ ಪೂಕಳಂ. ಇದಕ್ಕಾಗಿ ಮಕ್ಕಳು ಓಣಂ ಪಾಟನ್ನು (ಹಾಡು) ಹಾಡುತ್ತಾ ಹೂಗಳನ್ನು ಕೊಯ್ದು ತರುತ್ತಾರೆ. ಬಳಿಕ ಮನೆಯ ಮುಂಭಾಗದಲ್ಲಿ ಪೂಕಳಂ ರಚಿಸಲಾಗುತ್ತದೆ. ಇದರಲ್ಲೂ ಎರಡು ರೀತಿ ಇದೆ. ಒಂದು ಸಾಧಾರಣ ಪೂಕಳಂ. ಇನ್ನೊಂದು ವಾಮನನ ಪ್ರತಿರೂಪವಾದ ತ್ರಿಕ್ಕಾಕ್ಕರೆಯಪ್ಪನನ್ನು ಹೂ ರಂಗೋಲಿಯ ಮಧ್ಯದಲ್ಲಿ ಸ್ಥಾಪಿಸಲಾಗುತ್ತದೆ.

ಓಣಂ ಸದ್ಯ
ಓಣಂ ಹಬ್ಬದ ದಿನದಲ್ಲಿ ಹೂವಿನ ರಂಗೋಲಿ ಪೂಕಳಂ ಹೇಗೆ ವೈಶಿಷ್ಟ್ಯವನ್ನು ಪಡೆದಿದೆಯೋ ಅದೇ ರೀತಿ “ಓಣಂ ಸದ್ಯ’ (ಓಣಂ ಭೋಜನ) ಅಷ್ಟೇ ಮಹತ್ವವನ್ನು ಪಡೆದಿದೆ. ಪರಂಪರಾಗತ ಶೈಲಿಯ ಉಪ್ಪೇರಿ, ಕಿಚ್ಚಡಿ, ರಸಂ, ಅವಿಲ್‌, ಓಲನ್‌, ಕಾಳನ್‌, ತೋರನ್‌, ಪಚ್ಚಿಡಿ, ಕೂಟುಕ್ಕರಿ, ಸಾಂಬಾರು, ಕುರುಮ ಹೀಗೆ ಖಾದ್ಯಗಳ ಪಟ್ಟಿ ಬೆಳೆಯುತ್ತದೆ. ಬಾಳೆ ಹಣ್ಣಿಗೆ ಪ್ರಾಶಸ್ತ್ಯ ಹೆಚ್ಚು. ಮೊಸರಿನಿಂದ, ಮಿಶ್ರಿತ ತರಕಾರಿಗಳಿಂದ, ಹಣ್ಣು ಹಂಪಲುಗಳಿಂದ ಶುದ್ಧ ಶಾಕಾಹಾರಿಯ ಸುಮಾರು 60 ಕ್ಕೂ ಹೆಚ್ಚು ನಮೂನೆಗಳ ಭಕ್ಷ್ಯಗಳನ್ನು ತಯಾರಿಸಿ ಸೇವಿಸುವರು. ವಿವಿಧ ರೀತಿಯ ಪಾಯಸವನ್ನು ಉಣ್ಣುವರು. ವೆಳ್ಳ (ಪಾಲ್‌) ಪಾಯಸ, ಅಡಪಾಯಸ, ಸೇಮಿಗೆ ಪಾಯಸ, ಕಡಲೆ ಪಾಯಸ, ಹೆಸರು ಬೇಳೆ ಪಾಯಸ, ಅಕ್ಕಿ ಪಾಯಸ, ಹಲಸಿನ ಪಾಯಸ ಹೀಗೆ ಸುಮಾರು ಏಳು ಬಗೆಯ ಪಾಯಸಗಳೊಂದಿಗೆ ಅನೇಕ ರೀತಿಯ ಸಿಹಿ, ಖಾದ್ಯಗಳನ್ನು ತಯಾರಿಸಿ ಸಂಭ್ರಮಿಸುವರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.