ಕಡಲ್ಕೊರೆತ, ಗುಡ್ಡ‌ ಜರಿದು ಮನೆಗೆ ಹಾನಿ,ಕೃಷಿ ನಾಶ

ಕಾಸರಗೋಡು ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌

Team Udayavani, Jul 20, 2019, 5:43 AM IST

19KSDE10

ಮಳೆಯಿಂದಾಗಿ ಮೀಪುಗುರಿಯಲ್ಲಿ ರಸ್ತೆಯಲ್ಲೇ ಹರಿಯುವ ಮಳೆ ನೀರು.

ಕಾಸರಗೋಡು: ಪ್ರಸ್ತುತ ವರ್ಷದಲ್ಲಿ ಪ್ರಥಮವಾಗಿ ಉತ್ತಮ ಮಳೆ ಯಾಗುತ್ತಿದ್ದು ಕಾಸರಗೋಡು ಜಿಲ್ಲೆಯಲ್ಲಿ ವಿವಿಧೆಡೆ ಕಡಲ್ಕೊರೆತ, ಕೃಷಿ ನಾಶ ಸಂಭವಿಸಿದೆ. ಮೊಗ್ರಾಲ್‌ ಪುತ್ತೂರಿನಲ್ಲಿ ಗುಡ್ಡೆ ಜರಿದು ಮನೆಯೊಂದು ಹಾನಿಗೀಡಾಗಿದೆ.

ಕಾಸರಗೋಡು ನೆಲ್ಲಿಕುಂಜೆ ಸಮುದ್ರ ಕಿನಾರೆಯಲ್ಲಿರುವ ಪಾರ್ಕ್‌ ನ ಸುತ್ತುಗೋಡೆಯ ಒಂದು ಭಾಗ ತೀವ್ರ ಕಡಲ್ಕೊರೆತದಿಂದ ಕುಸಿದು ಬಿದ್ದಿದೆ. ಮಾತ್ರವಲ್ಲ ಉದ್ಯಾನದಿಂದ ಸಮುದ್ರಕ್ಕೆ ಇಳಿಯುವ ಮೆಟ್ಟಿಲುಗಳೂ ಕಡಲ್ಕೊರೆತದಿಂದ ಸಮುದ್ರ ಪಾಲಾಗಿವೆ. ಇದಲ್ಲದೆ ಉದ್ಯಾನದ ಇತರ ಸುತ್ತುಗೋಡೆಗಳೂ ಕುಸಿದು ಬೀಳುವ ಅಂಚಿನಲ್ಲಿವೆ. ಕಾಸರಗೋಡು ಲೈಟ್‌ ಹೌಸ್‌ ಬಳಿಯಲ್ಲಿರುವ ಈ ಪಾರ್ಕ್‌ ಹಾನಿಗೀಡಾಗಿದೆ.

ಮೊಗ್ರಾಲ್‌ ಪುತ್ತೂರಿನ ದೊಡ್ಡ ಹಿತ್ತಿಲುವಿನ ವಿಮಲ ಅವರ ಮನೆಯ ಮೇಲೆ ಗುಡ್ಡ ಜರಿದು ಬಿದ್ದಿದೆ. ಇದರಿಂದ ಮನೆಯ ಅಡುಗೆ ಕೊಠಡಿ, ಸಿಟೌಟ್‌ ಭಾಗಗಳು ಹಾನಿಗೀಡಾಗಿವೆ. ನಿದ್ರಿಸುತ್ತಿದ್ದ ವಿಮಲ ಹಾಗೂ ಮಕ್ಕಳು ಶಬ್ದ ಕೇಳಿ ಹೊರಕ್ಕೆ ಓಡಿದ ಕಾರಣದಿಂದ ಅಪಾಯದಿಂದ ಪಾರಾಗಿದ್ದಾರೆ.

ಸರಿಯಾಗಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಬಹುತೇಕ ಕಡೆಗಳಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಬೋವಿಕ್ಕಾನದಿಂದ ಚೆರ್ಕಳ ವರೆಗಿನ ರಸ್ತೆಯಲ್ಲಿ ಮಳೆ ನೀರು ಕಟ್ಟಿ ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ರಸ್ತೆ ಬದಿಯಲ್ಲಿ ಸೂಕ್ತವಾದ ಚರಂಡಿ ಇಲ್ಲದ ಕಾರಣ ಮಳೆ ನೀರೆಲ್ಲ ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದಾಗಿ ವಾಹನ ಸಂಚಾರ ಸಂದರ್ಭದಲ್ಲಿ ಕಾರಂಜಿಯಂತೆ ನೀರು ಚಿಮ್ಮುತ್ತದೆ. ಇದರಿಂದ ನಡೆದು ಹೋಗುವವರಿಗೂ ದ್ವಿಚಕ್ರ, ತ್ರಿಚಕ್ರ ಸಹಿತ ಸಣ್ಣ ವಾಹನಗಳಲ್ಲಿ ಪ್ರಯಾಣಿಸುವವರಿಗೆ ಕೆಸರು ನೀರಿನ ಅಭಿಷೇಕವಾಗುತ್ತಿದೆ.

ಇದೇ ರೀತಿ ಚೆಂಗಳದಿಂದ ನಾಯ ಮ್ಮಾರ್‌ಮೂಲೆ ವರೆಗೂ ಚರಂಡಿ ಅವ್ಯವ ಸ್ಥೆಯಿಂದ ಮಳೆ ನೀರು ಹೆದ್ದಾರಿಯಲ್ಲೇ ಹರಿಯುತ್ತಿದೆ. ರಸ್ತೆ ಬದಿಯ ತಗ್ಗು ಪ್ರದೇಶವನ್ನು ಮಣ್ಣು, ಕಲ್ಲು ಹಾಕಿ ಎತ್ತರಗೊಳಿಸಿದ ಕಾರಣ ಆ ಭಾಗದ ನೀರು ಕೂಡಾ ರಸ್ತೆಗೆ ಹರಿಯುತ್ತಿದೆ.

ಮಾವಿನಕಟ್ಟೆ-ಕೋಳಾರಿ ರಸ್ತೆಯಲ್ಲೂ ಸ್ಥಿತಿ ಇದೇ ರೀತಿಯಿದೆ. ಕಾಸರಗೋಡು ನಗರದಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ.

ಆರೆಂಜ್‌ ಅಲರ್ಟ್‌
ರಾಜ್ಯದಲ್ಲಿ ಶುಕ್ರವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು ಕಾಸರಗೋಡು ಸಹಿತ 9 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೋಟ್ಟಯಂ, ಪತ್ತನಂತಿಟ್ಟ, ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಆಲಪ್ಪುಳ, ಎರ್ನಾಕುಳಂ ಜಿಲ್ಲೆಯಲ್ಲಿ ಎಲ್ಲೋ ಅಲೆರ್ಟ್‌ ಘೋಷಿಸಲಾಗಿದೆ. ಸಮುದ್ರದಲ್ಲಿ ಭಾರೀ ಬಿರುಗಾಳಿ ಬೀಸಿ ಕಡಲುಬ್ಬರ ಆಳೆತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಹೇಳಿದೆ. ಈ ಹಿನ್ನೆಲೆಯಲ್ಲಿ ಬೆಸ್ತರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.