ಸಾಹಿತಿ, ಕಲಾವಿದರ ಸುಖ ದುಃಖ ತೆರೆದುಕೊಂಡ ‘ಸಾಹಿತ್ಯ ಸಂತೆ’


Team Udayavani, Dec 24, 2018, 12:51 PM IST

24-december-9.gif

ಕಾಸರಗೋಡು: ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಕರಂದಕ್ಕಾಡಿನ ‘ಪದ್ಮಗಿರಿ ಕಲಾಕುಟೀರ’ದಲ್ಲಿ ‘ಸಾಹಿತ್ಯ ಸಂತೆ’ ಬದುಕಿನ ಸಣ್ಣ ಸುಖಗಳು…. ಎನ್ನುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಹಿತಿ, ಕಲಾವಿದರು ತಮ್ಮ ಸುಖ, ದು:ಖವನ್ನು ತೆರೆದುಕೊಂಡು ಕಾರ್ಯಕ್ರಮಕ್ಕೆ ಹೊಸ ರಂಗು ನೀಡಿದರು.

ಡಾ|ವಿವೇಕ ರೈ, ಡಾ|ನಾ.ದಾಮೋದರ ಶೆಟ್ಟಿ, ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಪಿ.ಎಸ್‌.ಪುಣಿಂಚಿತ್ತಾಯ, ಖ್ಯಾತ ವೈದ್ಯ ಡಾ|ಶ್ರೀಪಾದ್‌ ರಾವ್‌, ಪತ್ರಕರ್ತ ಯು.ಕೆ.ಕುಮಾರನಾಥ್‌ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಯಾವುದೇ ಕಾರ್ಯದಲ್ಲೂ ಸಾಕಷ್ಟು ಚಿಂತಿಸಿದ ಬಳಿಕವೇ ಮುನ್ನಡಿ ಇಡಬೇಕು. ಇಲ್ಲದಿದ್ದರೆ ಬದುಕಿನಲ್ಲಿ ಸಮಸ್ಯೆಗಳ ಸರಮಾಲೆ ಎದುರಿಸಬೇಕಾಗುತ್ತದೆ ಎಂದು ಡಾ|ವಿವೇಕ ರೈ ಅವರು ಹೇಳಿದರು. ಈ ಮಾತುಗಳಿಗೆ ಜರ್ಮನಿಯಲ್ಲಿ ಕಳೆದ ದಿನಗಳಲ್ಲಿ ಎದುರಿಸಿದ ಸಮಸ್ಯೆಗಳನ್ನು ಉದಾಹರಣೆಯನ್ನಿತ್ತರು. ಮನುಷ್ಯ ರಿಲ್ಯಾಕ್ಸ್‌ ಆದಾಗ ಸಾಧನೆಗೆ ಸುಗಮವಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಕಾಲದ ಹರಿವಿನಲ್ಲಿ ಕೊಚ್ಚಿಹೋದ, ಹತ್ತಿರವಿದ್ದರೂ ದೂರವಾದ, ತೆರೆಯಲೆತ್ನಿಸಿದರೂ ಮುಚ್ಚಿಹೋದ, ನಗಲೆತ್ನಿಸಿದರೂ ಅಳುವಾದ, ಅಳಲೆತ್ನಿಸಿದರೆ ಜೀವನವೇ ಆದ, ಎಷ್ಟೆಷ್ಟೋ ಪರಸ್ಪರ ಹಂಚ ಬೇಕಾಗಿದ್ದ ಸಿಹಿ ಕಹಿ ನೆನಪುಗಳು, ಕಾಲಗರ್ಭದೊಳಗಿಂದ ಹೊರ ಜಿಗಿಯಲು ಇದೊಂದು ವಿಶಿಷ್ಟ, ವಿಭಿನ್ನ ಅವಕಾಶವನ್ನೊದಗಿಸಿತು.

ಕಾರ್ಯಕ್ರಮದಲ್ಲಿ ರವೀಂದ್ರ ಜೋಷಿ, ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಡಾ|ವಸಂತ ಕುಮಾರ್‌ ಪೆರ್ಲ, ಶಶಿರಾಜ ಕಾವೂರು, ಬಿ.ಎನ್‌. ಸುಬ್ರಹ್ಮಣ್ಯ, ಸ್ನೇಹಲತಾ ದಿವಾಕರ್‌, ಕವಿತಾ ಕೂಡ್ಲು, ಗೀತಾ ಕೋಟೆ ಸುಳ್ಯ, ಸೀತಾಲಕ್ಷ್ಮೀ ಕರ್ಕಿಕೋಡಿ, ಚೇತನ ಕುಂಬಳೆ, ಯಶವಂತ ಬೋಳೂರು, ಮಲಾರ್‌ ಜಯರಾಮ ರೈ, ಯೋಗೀಶ್‌ ರಾವ್‌ ಚಿಗುರುಪಾದೆ, ಪ್ರವೀಣ ಪುಣಿಂಚಿತ್ತಾಯ, ಮುಹಮ್ಮದ್‌ ಅನ್ಸಾರಿ, ಜ್ಯೋತಿಪ್ರಭಾ ಎಸ್‌.ರಾವ್‌, ಬಿ.ನರಸಿಂಗ ರಾವ್‌, ಹರೀಶ್‌ ಒಡ್ಡಂಬೆಟ್ಟು, ಗಣೇಶ್‌ ಪೈ ಬದಿಯಡ್ಕ, ಗೋವಿಂದ ಭಟ್‌ ಬಳ್ಳಮೂಲೆ, ಡಾ|ಸುದೇಶ್‌ ರಾವ್‌, ಟಿ.ಶಂಕರನಾರಾಯಣ ಭಟ್‌, ಕಿಶೋರ್‌ ಪೆರ್ಲ, ಸಾಯಿಭದ್ರಾ ರೈ, ಸತೀಶ್ಚಂದ್ರ ಭಂಡಾರಿ ಕೋಳಾರು, ಜಯಾನಂದ ಹೊಸದುರ್ಗ, ಬಿ.ರಾಮಮೂರ್ತಿ, ಸುಬ್ಬಣ್ಣ ಶೆಟ್ಟಿ, ಉದಯ ಕುಮಾರ್‌ ಮನ್ನಿಪ್ಪಾಡಿ, ರಘು ಮೀಪುಗುರಿ ಮೊದಲಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ರಂಗಚಿನ್ನಾರಿ ಸಂಚಾಲಕ ಕಾಸರಗೋಡು ಚಿನ್ನಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಭಯ ನಿವಾರಣೆಯಾಗಬೇಕು
ಮಕ್ಕಳಲ್ಲಿ ಭಯ ಹುಟ್ಟಿಸುವುದರಿಂದ ಜೀವನ ಪರ್ಯಂತ ಭಯ ಕಾಡುತ್ತಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಭಯವನ್ನು ಹುಟ್ಟಿಸದೆ ವಾಸ್ತವವನ್ನು ಮನನ ಮಾಡಬೇಕು ಎಂದು ಡಾ|ನಾ.ದಾಮೋದರ ಶೆಟ್ಟಿ ಅವರು ಹೇಳಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.