ಕಡಲ್ಕೊರೆತ, ಅಪಾಯದಲ್ಲಿ ಮನೆಗಳು


Team Udayavani, Aug 7, 2019, 5:44 AM IST

kasargod

ಕಾಸರಗೋಡು: ಕೆಲವು ದಿನ ಗಳ ಬಿಡುವಿನ ಬಳಿಕ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಉಪ್ಪಳದ ಹನುಮಾನ್‌ ನಗರ, ಮಣಿಮುಂಡ, ಕೀಯೂರು, ಚೇರಂಗೈ, ತೃಕ್ಕನ್ನಾಡ್‌ ಮೊದಲಾದೆಡೆ ಕಡಲ್ಕೊರೆತ ಉಂಟಾಗಿದ್ದು, ಹಲವು ಮನೆಗಳು ಅಪಾಯದಂಚಿನಲ್ಲಿವೆ.

ಕಡಲ್ಕೊರೆತದಿಂದ ಹನುಮಾನ್‌ ನಗರ ಸಮುದ್ರ ತೀರದ ರಸ್ತೆ ಸಂಪೂರ್ಣ ನೀರು ಪಾಲಾಗಿದ್ದು, ಸಂಚಾರ ಮೊಟಕು ಗೊಂಡಿದೆ. ಸ್ಥಳೀಯರ ಹಿತ್ತಿಲ ಆವರಣ ಗೋಡೆಗೆ ನೀರು ಬಡಿಯುತ್ತಿದ್ದು, ಹಲವು ಮನೆಗಳು ಅಪಾಯದಂಚಿನಲ್ಲಿವೆ. ಈಗಾಗಲೇ ಒಂದು ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಳೆದ ಒಂದು ವಾರದಿಂದ ಕಡಲ್ಕೊರೆತ ತೀವ್ರಗೊಂಡಿದ್ದು, ಇದೀಗ ಇಲ್ಲಿನ ರಸ್ತೆ ಸುಮಾರು ಒಂದು ಕಿಲೋ ಮೀಟರ್‌ ಉದ್ದದಲ್ಲಿ ಕುಸಿದು ಹೋಗಿದೆ. ರಸ್ತೆ ಬದಿಯಲ್ಲಿ ಕಟ್ಟಿದ ತಡೆಗೋಡೆ ಕೂಡ ಕುಸಿದಿದೆ. ಇದೀಗ ಈ ಪರಿಸರದಲ್ಲಿ ಮೀನು ಕಾರ್ಮಿಕರಾದ ಲಕ್ಷ್ಮಣ, ಮೋಹಿನಿ, ಯಮುನಾ, ಜಯ ಕುಮಾರ, ಶರ್ಮಿಳಾ, ಅಶೋಕ, ಅನಿಲ್ ಸಹಿತ ಹಲವರ ಮನೆ ಅಪಾಯದಂಚಿನಲ್ಲಿದೆ. ಮೋಹಿನಿ ಅವರ ಕುಟುಂಬವನ್ನು ಸ್ಥಳಾಂತರಿಸಲಾಗಿದೆ. ಮುಸೋಡಿಯಲ್ಲೂ ಕಡಲ್ಕೊರೆತ ಉಂಟಾಗಿದ್ದು, ಸಮುದ್ರ ಭೋರ್ಗರೆಯುತ್ತಿದೆ. ಮುಸೋಡಿಯಿಂದ ಐಲ ಶಿವಾಜಿನಗರ ತನಕ ರಸ್ತೆಯಿದ್ದು, ಹನುಮಾನ್‌ ನಗರದಲ್ಲಿ ರಸ್ತೆ ಪೂರ್ತಿ ಸಮುದ್ರ ಪಾಲಾಗಿರುವುದರಿಂದ ಈ ಪರಿಸರ ಪ್ರದೇಶ ಹಾಗೂ ಶಿವಾಜಿನಗರ ನಿವಾಸಿಗಳು ಸಮಸ್ಯೆಗೆ ಸಿಲುಕಿದ್ದಾರೆ.

ಕಾಸರಗೋಡು ಜಿಲ್ಲೆಯ ನದಿಗಳಲ್ಲಿ ನೀರು ಮೇಲಕ್ಕೇರುತ್ತಿದ್ದು, ಇನ್ನಷ್ಟು ಮಳೆ ಸುರಿದರೆ ಹೊಳೆಗಳು ಉಕ್ಕಿ ಹರಿಯಲಿವೆ. ಇದು ಅಪಾಯಕ್ಕೂ ಕಾರಣವಾಗಲಿದೆ. ಮಧೂರಿನ ಮಧುವಾಹಿನಿ ಹೊಳೆಯ ನೀರು ಮೇಲೇರುತ್ತಿದೆ.

ಉಪ್ಪಳ ಗೇಟ್ ಬಳಿಯಲ್ಲಿ ಬೃಹತ್‌ ಮರವೊಂದು ತಂತಿ ಮೇಲೆ ಬಿದ್ದು ವಿದ್ಯುತ್‌ ಕಂಬಗಳು ಹಾನಿಗೀಡಾಗಿವೆೆ. ವಿದ್ಯುತ್‌ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿದ್ಯುತ್‌ ಸಂಪರ್ಕ ಕಡಿದ ಕಾರಣದಿಂದ ಸಂಭವನೀಯ ಅಪಾಯ ತಪ್ಪಿತು. ಮರ ಬಿದ್ದ ಹಿನ್ನೆಲೆಯಲ್ಲಿ ಕೆಲವು ಹೊತ್ತು ಸಾರಿಗೆ ಮೊಟಕುಗೊಂಡಿತು. ಮರವನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಪುನರಾರಂಭಗೊಂಡಿತು.

ಮುಂದಿನ 24 ತಾಸುಗಳಲ್ಲಿ ರಾಜ್ಯದ ಕಡಲ ಕಿನಾರೆಯ ದಕ್ಷಿಣ, ಪಶ್ಚಿಮ ದಿಶೆಯಲ್ಲಿ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೇರಳ ಮತ್ತು ಲಕ್ಷದ್ವೀಪದ ಮೀನುಗಾರರು ಕಡಲಿಗೆ ತೆರಳಬಾರದು ಎಂದು ಹವಾಮಾನ ನಿಗಾ ಕೇಂದ್ರ ಮುನ್ಸೂಚನೆ ನೀಡಿದೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.