ಅಂಗವಿಕಲರಿಗೆ ವಿಶೇಷ ದ್ವಿಚಕ್ರ ವಾಹನ ವಿತರಣೆ
Team Udayavani, Mar 8, 2019, 1:00 AM IST
ಬದಿಯಡ್ಕ: ಅಂಗವಿಕಲರು ಎಲ್ಲರಂತೆ ಜೀವನದ ಪಯಣ ಮುನ್ನಡೆಸ ಬೇಕು ಎಂಬ ಉದ್ದೇಶವನ್ನಿರಿಸಿ ಅವರಿಗಾಗಿ ವಿಶೇಷ ವಾಹನಗಳನ್ನು ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್. ಕೃಷ್ಣ ಭಟ್ ಹೇಳಿದರು.
ಬದಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ 2018-19ನೇ ಸಾಲಿನ ಅರ್ಹ ಫಲಾನುಭವಿಗಳಾದ 7 ಮಂದಿ ಅಂಗವಿಕಲರಿಗೆ ವಿಶೇಷ ದ್ವಿಚಕ್ರ ವಾಹನವನ್ನು ವಿತರಿಸಿ ಅವರು ಮಾತನಾಡಿ ದರು. ಸಾಮಾನ್ಯ ನಾಗರಿಕರಂತೆ ಅವರೂ ಬದುಕುವುದರೊಂದಿಗೆ ತಮ್ಮ ಕುಟುಂಬ ವನ್ನು ಮುನ್ನಡೆಸಲು ಈ ವಾಹನವು ಸಹಕಾರಿ ಯಾಗಲಿ ಎಂದು ಅವರು ಹಾರೈಸಿದರು.
ಗ್ರಾ.ಪಂ. ಉಪಾಧ್ಯಕ್ಷೆ ಸೆ„ಬುನ್ನೀಸಾ ಅಧ್ಯಕ್ಷತೆಯನ್ನು ವಹಿಸಿದ್ದರು.
ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನ್ವರ್ ಓಝೋನ್, ಶ್ಯಾಮಪ್ರಸಾದ ಮಾನ್ಯ, ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಪ್ರಭು ಕರಿಂಬಿಲ, ಬಾಲಕೃಷ್ಣ ಶೆಟ್ಟಿ ಕಡಾರು, ಮುನೀರ್ ಉಪಸ್ಥಿತರಿದ್ದು ಮಾತನಾಡಿದರು. ಒಟ್ಟು ಏಳುಮಂದಿ ಫಲಾನುಭವಿಗಳಿಗೆ ಹೀರೋ ಕಂಪೆನಿಯ ಸ್ಕೂಟರನ್ನು ವಿತರಿಸಲಾಯಿತು.
ಆಯ್ಕೆ ಸಮಿತಿಯ ಐಸಿಡಿಎಸ್ನ ಜ್ಯೋತಿ ಸ್ವಾಗತಿಸಿ, ಭವ್ಯಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ