ಪೇಯ್ಡ್ ನ್ಯೂಸ್‌ ವಿರುದ್ಧ ವಿಚಾರ ಸಂಕಿರಣ


Team Udayavani, Apr 3, 2019, 6:59 PM IST

PAID-NEWS

ಬದಿಯಡ್ಕ :ಪೇಯ್ಡ್ ನ್ಯೂಸ್‌ ವಿರುದ್ಧ ಜಾಗೃತಿ ವಿಚಾರ ಸಂಕಿರಣ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ಜರಗಿತು. ಎಂ.ಸಿ.ಎಂ.ಸಿ. ಜಿಲ್ಲಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ಡಿ. ಸಜಿತ್‌ ಬಾಬು ಉದ್ಘಾಟಿಸಿದರು. ಚುನಾವಣೆ ವಿಭಾಗ ಸಹಾಯಕ ಜಿಲ್ಲಾಧಿಕಾರಿ ವಿ.ಪಿ. ಅಬ್ದುಲ್‌ ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಎಂ.ಸಿ.ಎಂ.ಸಿ. ಸದಸ್ಯರಾದ ಕಾರಸಗೋಡು ಆರ್‌.ಡಿ.ಒ.ಪಿ.ಎ. ಅಬ್ದು ಸಮದ್‌, ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ. ಉಣ್ಣಿಕೃಷ್ಣನ್‌, ಜಿಲ್ಲಾ ಇನ್‌ ಫಾರ್ಮೆಟಿಕ್ಸ್‌ ಅಧಿಕಾರಿ ಕೆ.ರಾಜನ್‌, ಸ್ವತಂತ್ರ ಸದಸ್ಯ ಜಿ.ಬಿ. ವತ್ಸನ್‌, ಹೆಚ್ಚುವರಿ ಕಾನೂನು ಕಾರ್ಯದರ್ಶಿ (ನಿವೃತ್ತ) ಎಂ ಸೀತಾರಾಮ, ಕಾಸರಗೋಡು ಪ್ರಸ್‌ ಕ್ಲಬ್‌ ಅಧ್ಯಕ್ಷ ಟಿ.ಎ. ಶಾಫಿ ಉಪಸ್ಥಿತರಿದ್ದರು.

ಪೇಯ್ಡ್ ನ್ಯೂಸ್‌ ಎಂದರೇನು ?
ಹಣ ಯಾ ಇತರ ಸೌಲಭ್ಯಗಳನ್ನು ಪಡೆದು ಯಾವುದಾದರೂ ಮಾಧ್ಯಮಗಳಲ್ಲಿ ಪ್ರಕಟಿಸುವ ಯಾವ ಸುದ್ದಿಯೂ, ಅವಲೋಕನವೂ ಪೈಡ್ ನ್ಯೂಸ್‌ ಎಂದು ಪರಿಗಣಿಸಲಾಗುವುದು ಎಂದು ಪ್ರಸ್‌ ಕೌನ್ಸಿಲ್‌ ಆಫ್‌ ಇಂಡಿಯಾ ನಿರ್ವಚನೆ ನೀಡಿದ್ದು , ಇದನ್ನು ಚುನಾವಣೆ ಆಯೋಗ ಅಂಗೀಕರಿಸಿದೆ.

ಪೇಯ್ಡ್ ನ್ಯೂಸ್‌ ವಿರುದ್ಧ ಜಾಗ್ರತೆ ಬೇಕು
ಪೈಡ್ ನ್ಯೂಸ್‌ ಜನತೆಯನ್ನು ತಪ್ಪು ದಾರಿಗೆಳೆಯುವ ಯತ್ನ ನಡೆಸುತ್ತಿದೆ. ಅವರ ಮಾಹಿತಿ ಹಕ್ಕನ್ನು ಕಸಿಯುವ ಪ್ರಯತ್ನವನ್ನೂ ಮಾಡುತ್ತದೆ. ಚುನಾವಣೆ ವೆಚ್ಚದ ನಿಯಂತ್ರಣವನ್ನು ಉಲ್ಲಂಘಿಸಲು ಇದನ್ನು ಗುಪ್ತ ಮಾರ್ಗವಾಗಿ ಬಳಸಲಾಗುತ್ತದೆ ಎಂದು ತಿಳಿಯಲಾಗಿದೆ.

ಯಾವುದಕ್ಕೆಲ್ಲ ಅನುಮತಿ ಬೇಕು ?
ಮೆಸೆಜ್‌ಗಳು, ಕಮೆಂಟ್‌ಗಳು, ಫೋಟೋಗಳು, ವೀಡಿಯೋ ಪೋಸ್ಟ್‌ಗಳು, ಬ್ಲೋಗ್‌ಗಳು, ವೆಬ್‌ ಸೈಟ್‌ಗಳು ಮೊದಲಾದೆಡೆ ನಡೆಸಲಾಗುವ ವಿಮರ್ಶೆಗಳು, ಸಾಮಾಜಿಕ ಜಾಲ ತಾಣಗಳಲ್ಲಿನ ಪೋಸ್ಟ್‌ಗಳು ಇತ್ಯಾದಿ ರಾಜಕೀಯ ಜಾಹೀರಾತು ಎಂದು ಪರಿಶೀಲಿಸಲಾಗುವುದಿಲ್ಲ. ಅದರೊಂದಿಗೆ ಇವುಗಳಿಗೆ ಮುಂಗಡ ಅನುಮತಿ ಅಗತ್ಯವಿಲ್ಲ . ಇದೇ ವೇಳೆ ಇ – ಪೇಪರ್‌ಗಳಲ್ಲಿ ನೀಡಲಾಗುವ ಜಾಹಿರಾತು ಸಮಿತಿಯ ಅನುಮತಿ ಪಡೆದಿರಬೇಕು.

ಭಾಗವಹಿಸಿದ ಪತ್ರಕರ್ತರು ಪರಿಣತರೊಂದಿಗೆ ಸಂವಾದ ನಡೆಸಿದರು. ಜಿಲ್ಲಾ ಮಾಹಿತಿ ಅಧಿಕಾರಿ ಮಧುಸೂದನನ್‌ ಎಂ. ಸ್ವಾಗತಿಸಿದರು. ಜಿಲ್ಲಾ ಮಾಹಿತಿ ಕಚೇರಿ ಸಹಾಯಕ ಸಂಪಾದಕ ರಶೀದ್‌ ಬಾಬು ಪಿ. ವಂದಿಸಿದರು. ಜಿಲ್ಲಾ ಶುಚಿತ್ವ ಮಿಷನ್‌ ಸ್ವೀಪ್‌ ಕಾರ್ಯಕ್ರಮ ವತಿಯಿಂದ ಮತದಾನ ಜಾಗೃತಿ ವೀಡಿಯೋ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.