ತಾಲೂಕು ಜಾನಪದ ಪರಿಷತ್‌: ಮತದಾನ ಜಾಗೃತಿ ಚಿತ್ರಕಲಾ ಸ್ಪರ್ಧೆ


Team Udayavani, Apr 17, 2019, 6:30 AM IST

taluk-janapada-parishad

ಮಡಿಕೇರಿ: ಮತದಾರರಲ್ಲಿ ತಮ್ಮ ಹಕ್ಕಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್‌ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್‌ , ಮತದಾರರ ಶಿಕ್ಷಣ, ಸಹಭಾಗಿತ್ವ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿತ ಮತ ದಾರರ ಜಾಗೃತಿ ಕುರಿತ ಬೃಹತ್‌ ಕ್ಯಾನ್ವಾಸ್‌ ಅಪಾರ ಜನ ಮೆಚ್ಚುಗೆ ಗಳಿಸಿತು.

ಮಡಿಕೇರಿಯ ರಾಜಾಸೀಟ್‌ ನಲ್ಲಿ ವಿಶ್ವ ಚಿತ್ರ ಕಲಾ ದಿನಾಚರಣೆ ಸಂದರ್ಭ ಆಯೋಜಿತ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಿತ್ರಕಲಾವಿದ ಬಿ.ಆರ್‌.ಸತೀಶ್‌ ರಚಿಸಿದ ಮತದಾನದ ಮಹತ್ವ ಬಿಂಬಿಸುವ ಕೈಬೆರಳಿನ ಬೃಹತ್‌ ಚಿತ್ರಕ್ಕೆ ಬಣ್ಣ ಸಿಂಪಡಣೆ ಮೂಲಕ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಮತದಾರರ ಶಿಕ್ಷಣ, ಸಹಭಾಗಿತ್ವ ಸಮಿತಿ ಅಧ್ಯಕ್ಷೆ ಲಕ್ಷ್ಮೀಪ್ರಿಯ ಉದ್ಘಾಟಿಸಿದರು.

ಮತದಾರರಲ್ಲಿ ಮತದಾನ ಸಂದರ್ಭ ರಾಜಕೀಯ ಪಕ್ಷಗಳ ಆಮಿಷಕ್ಕೆ ಬಲಿಯಾ ಗದಿರಿ ಎಂಬುದೂ ಸೇರಿದಂತೆ ವಿವಿಧ ಜಾಗೃತಿ ಸಂದೇಶಗಳ ಬ್ಯಾನರ್‌ ಅನಾವರಣಗೊಳಿಸಿದ ಬಳಿಕ ಮಾತನಾಡಿದ ಕೆ.ಲಕ್ಷ್ಮೀಪ್ರಿಯಾ ಅವರು 18 ರಂದು ನಡೆಯುವ ಮತ ದಾನದಂದು 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ದಾನ ಮಾಡುವಂತಾಗಬೇಕು ಎಂದು ಕೋರಿದರು.

ಈಗಾಗಲೇ 10 ಸಖೀ ಮತಗಟ್ಟೆಗಳು, 5 ಸಾಂಪ್ರದಾಯಿಕ ಮತಗಟ್ಟೆಗಳು, 1 ವಿಶೇಷಚೇತನರ ಮತಗಟ್ಟೆ ಹಾಗೂ ನಗರಸಭೆಯಲ್ಲಿ ಒಂದು ಮಾದರಿ ಮತಗಟ್ಟೆ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದರು. ಜಿಲ್ಲಾ ಜಾನದಪ ಪರಿಷತ್‌ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಪ್ರತಿಯೊಬ್ಬರ ಮತ ಅತ್ಯ ಮೂಲ್ಯವಾಗಿದ್ದು, ಒಂದೊಂದು ಮತವೂ ರಾಷ್ಟ್ರದ ಚರಿತ್ರೆಯನ್ನೇ ಬದಲಿಸಲಿದೆ. ಆದ್ದರಿಂದ ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.

ಕೊ. ಜಿ. ಕಾ.ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್‌. ಸವಿತಾ ರೈ, ಕೊಡಗು ಪ್ರಸ್‌ ಕ್ಲಬ್‌ ಅಧ್ಯಕ್ಷ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಸ್ವೀಪ್‌ ಜಿಲ್ಲಾ ರಾಯಭಾರಿ ಭಾಗೀರಥಿ ಹುಲಿತಾಳ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಮತದಾನವಾಗುತ್ತದೆ. ಅದೇ ರೀತಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿಯೂ ಹೆಚ್ಚಿನ ಮತದಾನ ಆಗಬೇಕು. ಮತ ದಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.

ವಿರಾಜಪೇಟೆಯ ಗಾಯಕರಾದ ಜಾನಪದ ಪರಿಷತ್‌ ಸದಸ್ಯರೂ ಆಗಿರುವ ಬಿ.ಕೆ.ಮೋಹನ್‌ , ಕ್ಲಿಫ‌ರ್ಡ್‌ ಡಿಮೆಲ್ಲೋ ಮತ್ತು ಟಾಮಿ ಥೋಮಸ್‌ ತಂಡದಿಂದ ಮತದಾನದ ಬಗ್ಗೆ ವಿಶೇಷವಾದ ಹಾಡು ಗಾರಿಕೆ ಮನಸೆಳೆಯಿತು.
ಮ. ತಾ. ಜಾ.ಪ. ಅಧ್ಯಕ್ಷ ಅನಿಲ್‌ ಎಚ್‌. ಟಿ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ ಅಧ್ಯಕ್ಷ ಜಿ.ಆರ್‌.ರವಿಶಂಕರ್‌, ವಾರ್ತಾಧಿಕಾರಿ ಚಿನ್ನಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮಮ್ತಾಜ್‌, ಮತದಾರರ ಶಿಕ್ಷಣ, ಸಹಭಾಗಿತ್ವ ಸಮಿತಿ ಕೊಡಗು ಜಿಲ್ಲಾ ರಾಯಭಾರಿ ಈಶ್ವರಿ, ಹಿರಿಯ ಜಾನಪದ ಕಲಾವಿದೆ ಸುಳ್ಳಿಮಾಡ ಗೌರಿ ನಂಜಪ್ಪ, ಎಂ.ಕೆ.ಅರುಣ್‌ , ಸಂಗೀತಾ ಪ್ರಸನ್ನ, ಅಂಬೆಕಲ್‌ ನವೀನ್‌ ಕುಶಾಲಪ್ಪ ಸೇರಿದಂತೆ ರೋಟರಿ ಮಿಸ್ಟಿ ಹಿಲ್ಸ್‌, ಜಯಾಚಿಣ್ಣಪ್ಪ, ಪಿ.ಆರ್‌.ರಾಜೇಶ್‌, ನಿರ್ದೇಶಕ ಚೆಯ್ಯಂಡ ಸತ್ಯ, ಮೇರಿ ನಾಣಯ್ಯ ಸೇರಿದಂತೆ ಅನೇಕರು ಪಾಲ್ಗೊಂಡು ನಾನೂ ಸ್ಮಾರ್ಟ್‌ ಮತದಾರ ಎಂಬ ಸಂದೇಶಕ್ಕೆ ಸಹಿ ಹಾಕಿ ಮತದಾನದ ಮಹತ್ವ ಸಾರಿದರು. ಮಧ್ಯಾಹ್ನದವರೆಗೂ ರಾಜಾಸೀಟ್‌ ನಲ್ಲಿ ಪ್ರವಾಸಿಗರೂ ಸೇರಿದಂತೆ ನೂರಾರು ಸಾರ್ವಜನಿಕರು ಕ್ಯಾನ್ವಸ್‌ ನಲ್ಲಿ ಸಹಿ ಹಾಕಿದರು. ಮತದಾನ ಸಂಬಂಧಿತ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ವಿಭಾಗದಲ್ಲಿ ಆಯೋಜಿತ ಚಿತ್ರಕಲಾ ಸ್ಪರ್ಧೆಯಲ್ಲಿ 148 ಸ್ಪರ್ಧಿಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮತದಾನ ಮಹತ್ವ
ಚಿತ್ರಕಲಾವಿದ ಬಿ.ಆರ್‌.ಸತೀಶ್‌ ಮಾತನಾಡಿ ಒಂದು ಚಿತ್ರ ಸಾವಿರ ಪದಗಳಿಗೆ ಸಮವೆಂಬಂತೆ ಚಿತ್ರಕಲೆ ಮೂಲಕ ಮತದಾನ ಮಹತ್ವ ಸಾರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಅರ್ಹರು ಮತದಾನ ಮಾಡುವಂತಾಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.