ಕುಂದ್ರುಕೋಡಿ: ತೆರವಾಗದ ಟಿ.ಸಿ.ಯಿಂದ ಸಮಸ್ಯೆ ಗಂಭೀರ


Team Udayavani, Jun 10, 2019, 6:05 AM IST

kundrukodi

ಜಾಲ್ಸೂರು: ಮನೆಯ ಪಕ್ಕದಲ್ಲಿ ಅಳವಡಿಸಿರುವ ಟ್ರಾನ್ಸ್‌ ಫಾರ್ಮರ್‌ ತೆರವುಗೊಳಿಸಲು ಮೆಸ್ಕಾಂಗೆ ಮನವಿ ಸಲ್ಲಿಸಿದ್ದರೂ ಇನ್ನೂ ಟಿಸಿ ತೆರವುಗೊಂಡಿಲ್ಲ. ಮಳೆಗಾಲದಲ್ಲಿ ಗಾಳಿ, ಗುಡುಗುಗಳಿಗೆ ಬೆಂಕಿ ಕಿಡಿ ಬರುತ್ತಿದ್ದು, ಮನೆಯೊಳಗಿರಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಾಲ್ಸೂರು ಗ್ರಾಮದ ಕುಂದ್ರುಕೋಡಿಯ ಕೆ. ನಾರ್ಣಪ್ಪ ಅವರ ಮನೆ ಸಮೀಪ ಮೆಸ್ಕಾಂ ಟಿ.ಸಿ.ಯೊಂದನ್ನು ಅಳವಡಿಸಿದೆ. ಯಾವುದೇ ಮುನ್ಸೂಚನೆ ಕೊಡದೆ ಹಾಕಲಾಗಿರುವ ಈ ಟಿ.ಸಿ. ಮನೆಯಿಂದ ಗರಿಷ್ಠ 6 ಮೀ. ಅಂತರದಲ್ಲಿದೆ. ಟಿ.ಸಿ. ತೆರವಿಗೆ ಕಳೆದ ಒಂದು ವರ್ಷದಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಕೊಟ್ಟರೂ ಸ್ಪಂದಿಸುತ್ತಿಲ್ಲ ಎನ್ನುವುದು ನಾರ್ಣಪ್ಪ ಅವರ ಅಳಲು. ಈ ಹಿಂದೆ ಅಳವಡಿಸಿದ್ದ ಸ್ಥಳದಿಂದ ಟಿ.ಸಿ. ತೆರವುಗೊಳಿಸಿ ಇಲ್ಲಿಗೆ ವರ್ಗಾಯಿಸಿ¨ªಾರೆ. ಮೊದಲಿನ ಟಿ.ಸಿ. 15 ಮೀಟರ್‌ ದೂರದಲ್ಲಿತ್ತು. ಅಲ್ಲಿ ಜನವಸತಿ ಇರಲಿಲ್ಲ. ಈಗ ನಾರ್ಣಪ್ಪ ಅವರ ಮನೆಯ ಪಕ್ಕದÇÉೇ ಹಾಕಿ¨ªಾರೆ. ಮೊದಲು ಟಿ.ಸಿ. ಇದ್ದ ಸ್ಥಳದಲ್ಲಿ ಕಟ್ಟಡವೊಂದು ನಿರ್ಮಾಣವಾಗಿದೆ.

ಟ್ರಾನ್‌ ಫಾರ್ಮರ್‌ನಲ್ಲಿ ಆಗಾಗ ಬೆಂಕಿ ಕಿಡಿ ಕಾಣಿಸಿಕೊಳ್ಳುತ್ತಿದ್ದು, ಮಳೆಗಾಲದಲ್ಲಿ ಅಪಾಯದ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದ ಸುರಿದ ಮಳೆಗೆ ಬೆಂಕಿ ಕಿಡಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಹೇಳುತ್ತಾರೆ.
ನಾರ್ಣಪ್ಪ ದಂಪತಿ ಜಾಲೂÕರಿನ ಮುಖ್ಯ ಪೇಟೆಯಲ್ಲಿ ಟೈಲರಿಂಗ್‌ ಕೆಲಸ ಮಾಡುತ್ತಿದ್ದಾರೆ. ಬೆಳಗಿನ ಹೊತ್ತಲ್ಲಿ ಮನೆಯಲ್ಲಿ ಯಾರೂ ಇರುವುದಿಲ್ಲ.
ಈ ಭಾಗದಲ್ಲಿ ಕಾಲನಿ ಮಕ್ಕಳು ಹೊರಗಡೆ ಆಟವಾಡುತ್ತಾರೆ. ಅನಾಹುತ ಸಂಭವಿಸಿದರೆ ಗಮನಿಸುವವರಿಲ್ಲ. ಟಿ.ಸಿ. ಹಾಕುವ ಮೊದಲು ಆ ಜಾಗದಲ್ಲಿ ಮನೆಗೆ ಮಾರ್ಗ ಮಾಡುವ ಯೋಚನೆಯಿತ್ತು.

ಆದರೆ ಅದನ್ನು ಅನುಷ್ಠಾನಕ್ಕೆ ತರುವ ಮೊದಲೇ ಟಿ.ಸಿ. ಅಳವಡಿಸಿ¨ªಾರೆ. ಇನ್ನೂ ಮಳೆಗಾಲದಲ್ಲಿ ತೊಂದರೆ ಯಾಗಬಹುದು. ಸಮಸ್ಯೆಯ ತೀವ್ರತೆ ಅಧಿಕಾರಿಗಳಿಗೆ ಮನದಟ್ಟಾಗಿ ಪರಿಹಾರ ಕಂಡರೆ ಅನುಕೂಲ ಎಂದು ನಾರ್ಣಪ್ಪ ದಂಪತಿ ಹೇಳುತ್ತಾರೆ.

ಶಾಸಕರಿಗೂ ದೂರು
ಕುಂದ್ರುಕೋಡಿಯಲ್ಲಿ ಅಳವಡಿಸಿರುವ ಟಿ.ಸಿ. ತೆರವುಗೊಳಿಸಲು ಮೆಸ್ಕಾಂಗೆ ಪತ್ರ ಬರೆಯಲಾಗಿದೆ. ಫೋನ್‌ ಮೂಲಕ ಸುಳ್ಯ ಶಾಸಕರಿಗೆ ಮನವಿ ಮಾಡಿ¨ªಾರೆ.

ಜಾಲೂÕರು ಗ್ರಾ.ಪಂ.ಗೂ ದೂರು ಕೊಡಲಾಗಿದೆ.
ವಿಭಾಗೀಯ ಅಭಿಯಂತರು, ಮೆಸ್ಕಾಂ ಉಪವಿಭಾಗ ಸುಳ್ಯ, ಅಧೀಕ್ಷಕ ಎಂಜಿನಿಯರ್‌ ವಿದ್ಯುತ್‌ ನಿರ್ವಹಣೆ ಮತ್ತು ಪಾಲನೆ ವೃತ್ತ ಮಂಗಳೂರು, ಕಾರ್ಯಪಾಲಕ ಅಭಿಯಂತರು ಮೆಸ್ಕಾಂ ಮಂಗಳೂರು, ಇ.ಇ. ಪುತ್ತೂರು ಮೆಸ್ಕಾಂ, ಎ.ಇ. ಸುಳ್ಯ ಮೆಸ್ಕಾಂ, ಜೆ.ಇ.ಸುಳ್ಯ ಮೆಸ್ಕಾಂ ಇವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ತೆರವುಗೊಳಿಸಿಲ್ಲ.

ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ
ಟಿ.ಸಿ. ತೆರವುಗೊಳಿಸಲು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ¨ªಾರೆ. ತೆರವುಗೊಳಿಸುವ ಭರವಸೆ ನೀಡಿದ್ದರು. ಕಳೆದ ಶನಿವಾರ ಕೆಲಸಗಾರರು ಟಿ.ಸಿ. ತೆರವುಗೊಳಿಸಲು ಆಗಮಿಸಿ¨ªಾರೆ. ಬೇರೆ ಜಾಗಕ್ಕೆ ವರ್ಗಾವಣೆ ಮಾಡಲು ಕೇಳಿದಾಗ ಜಾಗದ ಮಾಲಕರು ಆಕ್ಷೇಪಣೆ ವ್ಯಕ್ತಪಡಿಸಿ¨ªಾರೆ. ಹೀಗಾಗಿ ತೆರವುಗೊಳಿಸಲು ಸಾಧ್ಯವಾಗಲಿಲ್ಲ. ಅಧಿಕಾರಿಗಳಿಂದ ಧನಾತ್ಮಕ ಪ್ರತಿಕ್ರಿಯೆ ದೊರತಿದ್ದರೂ, ಯಾವುದೇ ಪ್ರಯೋಜನವಾಗಲಿಲ್ಲ. ಟ್ರಾನ್ಸ್‌ಫಾರ್ಮರ್‌ ಇದುವರೆಗೆ ತೆರವುಗೊಳಿಸಲಿಲ್ಲ ಎಂದು ನಾರ್ಣಪ್ಪ ಹೇಳಿ¨ªಾರೆ. ಮಳೆಗಾಲದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಈ ನಿಟ್ಟಿನಲ್ಲಿ ಮೆಸ್ಕಾಂ ತತ್‌ಕ್ಷಣ ಕಾರ್ಯಪ್ರರ್ವತ್ತರಾಗಬೇಕಿದೆ.

ಶೀಘ್ರ ಟಿ.ಸಿ. ತೆರವು
ಟಿ.ಸಿ. ಸ್ಥಳ ಬದಲಿಕೆಗೆ ಸ್ಥಳೀಯರ ಆಕ್ಷೇಪವಿದೆ. ಹೀಗಾಗಿ ಬೇರೆ ಜಾಗವನ್ನು ನೋಡಿ ತೆರವು ಕಾರ್ಯ ಮಾಡಬೇಕಿದೆ. ಆದಷ್ಟು ಬೇಗ ಟಿ.ಸಿ. ಅಲ್ಲಿಂದ ತೆರವುಗೊಳಿಸಲಾಗುವುದು.
– ಹರೀಶ್‌ ಎ.ಇ. ಮೆಸ್ಕಾಂ, ಸುಳ್ಯ

– ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.