ಕಾಸರಗೋಡು ನಗರದೆಲ್ಲೆಡೆ ಮುರಿದುಬಿದ್ದ ಚರಂಡಿ ಸ್ಲಾಬ್‌

ಪಾದಚಾರಿಗಳಿಗೆ ಅಪಾಯ ಭೀತಿ

Team Udayavani, Mar 28, 2019, 6:30 AM IST

charandi-slab

ಕಾಸರಗೋಡು: ಪಾದಚಾರಿಗಳಿಗೆ ಅಪಾಯ ಭೀತಿಯೊಡ್ಡಿರುವ ಕಾಸರಗೋಡು ನಗರದ ಕಾಲುದಾರಿಗಳು (ಫುಟ್‌ಪಾತ್‌ಗಳು) ಹಲವೆಡೆಗಳಲ್ಲಿ ಬಿರುಕು ಬಿಟ್ಟಿವೆ. ಪ್ರತಿದಿನವೂ ಜನಸಂದಣಿ ಇರುವ ಕಾಸರಗೋಡು ನಗರದ ಚರಂಡಿಯ ಮೇಲೆ ಹಾಸಿದ ಕಾಂಕ್ರೀಟ್‌ ಸ್ಲಾಬ್‌ಗಳನ್ನು ಕಾಲುದಾರಿಯಾಗಿ ಉಪ ಯೋಗಿಸಲಾಗುತ್ತಿದ್ದು, ಇದು ಹಲವು ಕಡೆಗಳಲ್ಲಿ ತುಂಡಾಗಿ ಬಿದ್ದಿವೆ.

ನಗರದ ಹೊಸ ಬಸ್‌ ನಿಲ್ದಾಣ, ಹಳೆ ಬಸ್‌ ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ, ತಾಯಲಂಗಾಡಿ, ಬ್ಯಾಂಕ್‌ ರೋಡ್‌, ಎಂ.ಜಿ.ರೋಡ್‌, ಕರಂದಕ್ಕಾಡು, ಕೆಪಿಆರ್‌ ರಾವ್‌ ರೋಡ್‌, ನಾಯಕ್ಸ್‌ ರೋಡ್‌, ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ಪರಿಸರ, ಕೋಟೆಕಣಿ ರಸ್ತೆ ಸಹಿತ ಹಲವೆಡೆ ಸ್ಲಾಬ್‌ಗಳು ಹಾನಿಗೊಂಡಿವೆ.

ಈ ದಾರಿಯಾಗಿ ನಡೆಯುವಾಗ ಮಕ್ಕಳು, ಮಹಿಳೆಯರು, ವಯೋವೃದ್ಧರು ಸೇರಿದಂತೆ ಇತರ ಎಲ್ಲರೂ ಚರಂಡಿಯೊಳಗೆ ಬಿದ್ದು ಗಾಯಗೊಂಡಿರುವ ಹಲವಾರು ಘಟನೆಗಳು ನಡೆದಿವೆ. ಕಾಸರಗೋಡು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆ, ಕಾಸರಗೋಡು ಜಿಯುಪಿ ಶಾಲೆ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಸಣ್ಣ ಮಕ್ಕಳು ಸಂಚರಿಸುವ ದಾರಿಯಲ್ಲೂ ಈ ರೀತಿಯಾಗಿ ಸ್ಲಾಬ್‌ಗಳು ಮುರಿದು ಬಿದ್ದಿವೆ.

ತಾಯಲಂಗಾಡಿ ರೈಲು ನಿಲ್ದಾಣ ರಸ್ತೆಯಲ್ಲೂ ಇದೇ ಸ್ಥಿತಿ ಇದೆ. ಕೆಲವು ಕಡೆಗಳಲ್ಲಿ ಮುರಿದ ಸ್ಲಾಬ್‌ಗಳನ್ನು ತೆಗೆಯದೆ ಅದರ ಮೇಲೆ ಮತ್ತೂಂದನ್ನು ಸ್ಥಾಪಿಸಿ ಮತ್ತಷ್ಟು ಸಮಸ್ಯೆ ಸೃಷ್ಟಿಸಲಾಗಿದೆ. ತುಂಡಾಗಿರುವ ಸ್ಲಾಬ್‌ ತೆಗೆದು ಹೊಸತನ್ನು ಸ್ಥಾಪಿಸಬೇಕೆಂದು ಹಲವು ಬಾರಿ ಆಗ್ರಹಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿದೆ.
ಕಾಸರಗೋಡು ನಗರವು ಸಮಗ್ರ ಅಭಿವೃದ್ಧಿಯಿಂದ ವಂಚಿತವಾಗಿದೆ. ಇನ್ನೂ ಹೇಳಿಕೊಳ್ಳುವಂತಹ ಪ್ರಗತಿ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ನಗರಸಭಾ ಆಡಳಿತಕ್ಕೆ ದೊಡ್ಡ ಜವಾಬ್ದಾರಿಯಿದ್ದರೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಲಾಗಿದೆ. ಇಡೀ ಜಿಲ್ಲೆಯ ಪ್ರಮುಖ ಕೇಂದ್ರವಾಗಿರುವ ಕಾಸರಗೋಡಿನ ಫುಟ್‌ಪಾತ್‌ ವ್ಯವಸ್ಥೆಯೇ ಇಷ್ಟೊಂದು ಕೆಳಮಟ್ಟದಲ್ಲಿದ್ದು, ಇತರ ವ್ಯವಸ್ಥೆಗಳಿಗೆ ಕೈಗನ್ನಡಿಯಂತಿದೆ. ಆಡಳಿತವು ಫುಟ್‌ಪಾತ್‌ ವ್ಯವಸ್ಥೆಯನ್ನುಸರಿಪಡಿÓಬೇಕೆಂಬ ಆಗ್ರಹ ವ್ಯಾಪಕವಾಗಿದೆ.

ಕಾಲುದಾರಿಗಳು ಅಸ್ತವ್ಯಸ್ತ
ಕಾಸರಗೋಡು ನಗರದ ಹಲವು ಭಾಗಗಳಲ್ಲಿ ಕಾಲುದಾರಿಗಳು ಅಸ್ತವ್ಯಸ್ತವಾಗಿದ್ದು, ಇದರಿಂಜ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳಂತೂ ನಡೆಯುವಾಗ ಬಹಳಷ್ಟು ಕಡೆಗಳಲ್ಲಿ ಬಿದ್ದು ಗಾಯಗೊಂಡಿದ್ದಾರೆ.

ನಗರಸಭಾ ಆಡಳಿತವು ಮೌನಕ್ಕೆ ಶರಣಾಗಿದೆ. ನಗರಸಭೆ ‌ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಐಶಾರಾಮಿ ವಾಹನಗಳಲ್ಲಿ ಸಂಚರಿಸುತ್ತಿದ್ದರೂ, ಕನಿಷ್ಠ ಸಮರ್ಪಕ ಫುಟ್‌ಪಾತ್‌ ವ್ಯವಸ್ಥೆ ಕೂಡ ಮಾಡದಿರುವುದು ದೌರ್ಭಾಗ್ಯ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.