ಕರಿಂಬಿಲ ಗುಡ್ಡೆ ಕುಸಿತ; ವ್ಯಾಪಾರಿಗಳಿಂದ ಧರಣಿಗೆ ಸಿದ್ಧತೆ


Team Udayavani, Aug 13, 2019, 9:54 PM IST

karimbila

ಬದಿಯಡ್ಕ: ಬದಿಯಡ್ಕ- ಪೆರ್ಲ ರಸ್ತೆಯ ಕರಿಂಬಿಲದಲ್ಲಿ ಗುಡ್ಡೆ ಕುಸಿತದಿಂದ ಉಂಟಾದ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಮಾಡುವ ಉದ್ದೇಶದಿಂದ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಆಶ್ರಯದಲ್ಲಿ ಆಗೋಸ್ತು 15ರಂದು ಬೆಳಗ್ಗೆ 11.30ರಿಂದ 1ಗಂಟೆಯ ತನಕ ಧರಣಿ ನಡೆಸಲು ವ್ಯಾಪಾರಿ ಭವನದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು, ವ್ಯಾಪಾರಿಗಳು, ಕೂಲಿ ಕೆಲಸಗಾರರು ಸೇರಿದಂತೆ ಈ ಭಾಗದ ಎಲ್ಲರೂ ರಸ್ತೆ ತಡೆ ಉಂಟುಮಾಡಿದ ಸಮಸ್ಯೆಯಿಂದ ಕಂಗೆಟ್ಟಿದ್ದು ಸೂಕ್ತ ಕ್ರಮ ಕೈಗೊಂಡು ಪರಿಹಾರ ಕಾಣದಿದ್ದಲ್ಲಿ ಜನಜೀವನ ಸಂಕಷ್ಟಕರವಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಧರಣಿಯಲ್ಲಿ ಶಾಲಾ ವಿದ್ಯಾರ್ಥಿಗಳ ರಕ್ಣಕರು, ವ್ಯಾಪರಿಗಳು ಸೇರಿದಂತೆ ಬದಿಯಡ್ಕ ಪ್ರದೇಶದ ಜನರು ಪಾಲ್ಗೊಳ್ಳಲಿದ್ದಾರೆ.

ಈ ಹಿಂದೆಯೇ ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡುವಂತೆ ಕೋರಿ ಜಿಲ್ಲಾಧಿಕಾರಿ, ಶಾಸಕರು, ಪಿಡ್ಜ್ಲುಡಿ ಆಫೀಸರುಗಳು, ಲೋಕೋಪಯೋಗಿ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೂ ಮನವಿ ಸಲ್ಲಿಸಲಾಗಿದ್ದು ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಇದುವರೆಗೂ ಲಭಿಸಿಲ್ಲ. ಸಚಿವರಿಗೆ ಹಾಗೂ ಇಲಾಖಾ ಅಧಿಕಾರಿಗಳಿಗೆ ಕೈಯಾರೆ ಮನವಿ ಸಲ್ಲಿಸಿದ್ದರೂ ಏನೂ ಉಪಯೋಗ ಆಗಲಿಲ್ಲ.

ಬದಿಯಡ್ಕ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಅಧ್ಯಕ್ಷ ಕುಂಜಾರು ಮೊಹಮ್ಮದ್ ಹಾಜಿ, ರಾಜ್ಯ ಸಮಿತಿಯ ಉಪಾಧ್ಯಕ್ಷ ಎಸ್.ಎನ್.ಮಯ್ಯ, ಕಾರ್ಯದರ್ಶಿ ನರೆಂದ್ರ.ಬಿ ಬದಿಯಡ್ಕ, ಜತೆ ಕಾರ್ಯದರ್ಶಿ ಹಮೀದ್, ಉಪಾಧ್ಯಕ್ಷರುಗಳಾದ ಉದಯ, ರಾಜು ಸ್ಟೀಫನ್, ರವಿ ನವಶಕ್ತಿ, ಖಜಾಂಚಿ ಜ್ಞಾನದೇವ ಶೆಣೈ ಮುಂತಾದವರು ಉಪಸ್ಥಿತರಿದ್ದರು.

ಸಮೀಪದ ಕಾಡಮನೆ ಮೂಲಕ ಹಾದುಹೋಗುವ
ಬದಿಗಳಲ್ಲಿರುವ ಕಾಡುಪೊದೆಗಳನ್ನು ಸರಿಸಿ ತಾತ್ಕಾಲಿಕ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಕರಿಂಬಿಲ ಗುಡ್ಡ ಜಾರಿ ನಿಂತಿರುವ ಕಾರಣ ಇನ್ನಷ್ಟು ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಧ್ಯದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ತೀರ್ಮಾನ ಕೈಗೊಳ್ಳುವುದು ಕಷ್ಟಸಾಧ್ಯ
– ಕೃಷ್ಣ ಭಟ್, ಅಧ್ಯಕ್ಷರು ಬದಿಯಡ್ಕ ಗ್ರಾಮ ಪಂಚಾಯತ್

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.