ಸಮರೋಪಾದಿ ಕಾರ್ಯಾಚರಣೆಗಿಳಿದ ಜಿಲ್ಲಾಡಳಿತ

ಕೋವಿಡ್‌-19 ರೋಗಬಾಧಿತರ ಸಂಖ್ಯೆ ದುಪ್ಪಟ್ಟು

Team Udayavani, Mar 25, 2020, 4:23 AM IST

ಕೋವಿಡ್‌-19 ರೋಗಬಾಧಿತರ ಸಂಖ್ಯೆ ದುಪ್ಪಟ್ಟು

ಮಂಜೇಶ್ವರ: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ವೈರಸ್‌ ರೋಗಬಾಧಿತರ ಸಂಖ್ಯೆ ದಿನೇ ದಿನೇ ದುಪ್ಪಟ್ಟಾಗುವುದರೊಂದಿಗೆ ಎಲ್ಲ ಇಲಾಖೆಗಳು ಹೈ ಅಲರ್ಟ್‌ ಆಗಿ ಕಾರ್ಯ ನಿರ್ವಹಿಸತೊಡಗಿವೆ. ಮಂಗಳ ವಾರದಂದು ಜಿಲ್ಲೆಯಲ್ಲಿ ಲಾಕ್‌ ಡೌನ್‌ ಬಿಗಿಗೊಳಿಸಲಾಗಿದ್ದು, ಹೆಚ್ಚುವರಿ ಪೊಲೀಸ್‌ ತಂಡವನ್ನು ಆಯೋಜಿಸ ಲಾಗಿದೆ. ಆರೋಗ್ಯ ಇಲಾಖೆ, ಸ್ಥಳಿಯಾ ಡಳಿತ ಸಂಸ್ಥೆ, ವಿದ್ಯಾಭ್ಯಾಸ ಇಲಾಖೆ, ನಾಗರಿಕ ಪೂರೈಕೆ ಇಲಾಖೆ ಜಂಟಿಯಾಗಿ ಸಮರೋಪಾದಿಯ ಕಾರ್ಯಾ ಚರಣೆಗಿಳಿದಿದ್ದು. ರೋಗ ಹರಡದಂತೆ ವ್ಯಾಪಕ ಜಾಗ್ರತೆ ಏರ್ಪಡಿಸಲಾಗಿದೆ.

ಪಂಚಾಯತ್‌ ಮಟ್ಟದಲ್ಲಿ ತುರ್ತು ಕೊಠಡಿಗಳು
ಆಸ್ಪತ್ರೆಗಳಲ್ಲಿ ಹೆಚ್ಚುವರಿ ವಾರ್ಡ್‌ಗಳನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದರೂ ಇದೀಗ ಪ್ರತಿಯೊಂದು ಪಂಚಾಯತ‌ನ್ನು ಕೇಂದ್ರೀಕರಿಸಿ ವಿಶೇಷ ತುರ್ತು ಚಿಕಿತ್ಸೆ ವ್ಯವಸ್ಥೆ ಘಟಕವನ್ನು ಸ್ಥಾಪಿಸಲಾಗಿದೆ. ಸ್ಥಳಿಯಾಡಳಿತ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ವಿವಿಧ ಯುವಜನ ಸಂಘಟನೆಯ ಕಾರ್ಯಕರ್ತರ ನೆರವಿನೊಂದಿಗೆ ಶಾಲಾ ಕಟ್ಟಡದಲ್ಲಿ ತುರ್ತು ಚಿಕಿತ್ಸಾ ಕೊಠಡಿಗಳನ್ನು ವಿನ್ಯಾಸಗೊಳಿಸಲಾಗಿದೆ. ಕೊರೊನಾ ಪೀಡಿತರಿಗೆ ಕ್ವಾರಂಟೈನ್‌ ಕೊಠಡಿ ಹಾಗೂ ಶಂಕಿತರಿಗೆ ಐಸೋ ಲೇಶನ್‌ ಕೊಠಡಿಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ.

ಮನೆ ಬಿಟ್ಟು ಹೊರಬರಬೇಡಿ: ಮನವಿ
ವಿದೇಶಗಳಿಂದ ಆಗಮಿಸಿದವರು, ಅನ್ಯರಾಜ್ಯಗಳಿಂದ ಆಗಮಿಸಿದವರು ತತ್‌ಕ್ಷಣವೇ ಆಯಾ ಪ್ರಾಥಾಮಿಕ ಕೇಂದ್ರಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ. ತಪಾಸಣೆಯ ಬಳಿಕ ರೋಗಬಾಧಿತರನ್ನು ತತ್‌ಕ್ಷಣವೇ ಚಿಕಿತ್ಸಾ ಕೊಠಡಿಗೆ ಸ್ಥಳಾಂತರಿಸಲಾಗುವುದು ಮಾತ್ರವಲ್ಲ ಅವರ ವಿವರವನ್ನು ಗೌಪ್ಯವಾಗಿಡಲಾಗುವುದು. ರೋಗ ಬಾಧಿತರಲ್ಲದವರು 14 ದಿವಸಗಳ ಕಾಲ ಮನೆ ಯಲ್ಲಿಯೇ ಐಸೋಲೇಶನ್‌ ನಲ್ಲಿರಬೇಕಾಗಿದ್ದು, ಯಾವುದೇ ಕಾರಣಕ್ಕೂ ಸಾರ್ವಜಿನಿಕವಾಗಿ ಬೆರೆಯ ಬಾರದು. ವೈದ್ಯರ ನಿರ್ದೇಶಗಳನ್ನು ಉಲ್ಲಂಘಿಸಿ ಮನೆಬಿಟ್ಟು ಹೊರಬರು ವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.

ಸ್ವಯಂ ಸೇವಕರೂ ಎಚ್ಚರವಾಗಿರಿ
ಇದೀಗ ಎಲ್ಲೆಡೆ ಆತಂಕದ ಕರಿಛಾಯೆ ಮೂಡಿದ್ದು, ಕಾಸರಗೋಡು ಜಿಲ್ಲೆಯ ಜನತೆಯ ಪರಿಸ್ಥಿತಿ ಊಹಿಸಲಾಸಾಧ್ಯವಾಗಿದೆ. ಕೊರೊನ ವೈರಸ್‌ ರೋಗ ಹರಡದಂತೆ ಹಲವಾರು ಸಂಘಟನೆಗಳು ಮುಂಚೂಣಿಗೆ ಬಂದಿವೆ. ಪಂಚಾಯತ್‌ ಮಟ್ಟದ ಐಸೋಲೇಶನ್‌ ಕೊಠಡಿ ಸ್ಥಾಪನೆಗೆ ಕಾಯಾವಾಚಾಮನಸಾ ದುಡಿದಿದ್ದಾರೆ. ಈ ನಡುವೆ ಇವರ ಆರೋಗ್ಯ ಸುರಕ್ಷತೆಯ ಬಗ್ಗೆಯೂ ಎಚ್ಚರ ಅತ್ಯಗತ್ಯ. ಆರೋಗ್ಯ ಇಲಾಖೆಯು ಈ ಕುರಿತು ಮಾಹಿತಿಯನ್ನು ನೀಡಿದ್ದು, ಸ್ವಯಂ ಸೇವಕರೂ ಸ್ವಯಂ ಸುರಕ್ಷರಾಗಿರಬೇಕೆಂದು ಎಚ್ಚರಿಕೆ ನೀಡಿದೆ.

ಆಹಾರ ಸಾಮಗ್ರಿಗಳ ಬೆಲೆ ದುಪ್ಪಟ್ಟು
ಎಲ್ಲೆಡೆ ಲಾಕ್‌ ಡೌನ್‌ ಹಾಗೂ ಗಡಿ ಪ್ರದೇಶಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸರಕು ಸಾಗಾಟದ ಮೇಲೂ ಪರಿಣಾಮ ಬೀರಿದೆ. ಇದರಿಂದಾಗಿ ದಿನಸಿ ಸಾಮಾಗ್ರಿಗಳ ಬೆಲೆ ಗಗನಕ್ಕೇರಿದೆ. ತರಕಾರಿ ಸಾಮಾಗ್ರಿಗಳ ಅಲಭ್ಯತೆ ಸಮಸ್ಯೆ ತಲೆದೋರಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಸರಕಾರದ ಸಾರ್ವಜಿನಕ ವಿತರಣಾ ವ್ಯವಸ್ಥೆಯಲ್ಲಿ ವಿಶೆಷ ಬದಲಾವಣೆ ತರದಿದ್ದಲ್ಲಿ ಜನಸಾಮಾನ್ಯರು ಆಹಾರಕ್ಕಾಗಿ ಪರದಾಡಬೇಕಾದ ಸಮಯ ಖಂಡಿತಾ ದೂರವಿಲ್ಲ

ಲಾಕ್‌ಡೌನ್‌ ಮುಂದುವರಿಕೆ ಸಾಧ್ಯತೆ
ಕೊರೋನಾ ವೈರಸ್‌ ವ್ಯಾಪಕವಾಗಿ ಹರಡುವುದನ್ನು ಒಂದು ಹಂತದ ಮಟ್ಟಿಗೆ ನಿಯಂತ್ರಿಸಲು ಲಾಕ್‌ ಡೌನ್‌ ಏರ್ಪಡಿಸಲಾಗಿದ್ದು, ಕೋವಿಡ್‌ 19 ನಿಯಂತ್ರಣಕ್ಕೆ ಬರದಿದ್ದರೆ ಲಾಕ್‌ ಡೌನ್‌ ಮುಂದುವರಿಯಲಿರುವ ಸೂಚನೆಯನ್ನು ಸರಕಾರ ನೀಡಿದೆ, ಮಾತ್ರವಲ್ಲ ಕಾಸರಗೋಡಿನಲ್ಲಿ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಶತಾಗತಾಯ ಪ್ರಯತ್ನಿಸುತ್ತಿದೆ.

ಜಿಲ್ಲೆಯಲ್ಲಿ ಸರ್ವವೂ ನಿಶ್ಚಲವಾಗಿದ್ದು, ಕೊರೋನಾ ವೈರಾಣು ದಾಳಿಗೆ ಹೆದರಿ ಸಾರ್ವಜನಿಕರು ಭಯಾಂತಕಕ್ಕೊಳಗಾಗಿದ್ದಾರೆ. ರೋಗ ಹರಡದಂತೆ ಸ್ವಯಂಪ್ರೇರಿತರಾಗಿ ಎಲ್ಲರೂ ಮನೆಯಲ್ಲಿ ಕುಳಿತುಕೊಳ್ಳುವುದೇ ಏಕಮಾರ್ಗವಾಗಿದೆಯೆಂದು ಕಾಸರಗೋಡು ಜಿಲ್ಲಾಧಿಕಾರಿ ಡಾ| ಸಜಿತ್‌ ಬಾಬು ಜಿಲ್ಲೆಯ ಜನತೆಗೆ ಭಿನ್ನವಿಸಿದ್ದು, ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಶುಚಿತ್ವಕ್ಕೆ ಗಮನಕೊಡುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.