ಕವಿಗೆ ಕಾಲಕ್ಕೆ ತಕ್ಕಂತೆ ಮುನ್ನಡೆಯುವ ಶಕ್ತಿಯಿದೆ: ವೆಂಕಟ್‌ ಭಟ್‌ ಎಡನೀರು


Team Udayavani, Jul 16, 2019, 5:38 AM IST

15KSDE12

ಉಪ್ಪಳ: ಕಲೆ, ಸಾಹಿತ್ಯ ಪ್ರಕಾರಗಳು ಕಾಲಘಟ್ಟದ ಜನಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ. ಕಲೆ, ಸಾಹಿತ್ಯಗಳ ಆಸಕ್ತಿಯಿಲ್ಲದವರ ಬದುಕು ಆಪ್ಯಾಯ ಮಾನವಾಗಿರಲಾರದು. ಆಸಕ್ತಿಯಿ ರುವವರು ಎಲ್ಲಿದ್ದರೂ ಸಾಹಿತ್ಯ ಸೇವೆಯ ಮೂಲಕ ಖುಷಿ ಕಾಣುವರು ಎಂದು ಪ್ರಸಿದ್ಧ ವ್ಯಂಗ್ಯಚಿತ್ರ ಕಲಾವಿದ, ಸಾಹಿತಿ ವೆಂಕಟ್‌ ಭಟ್‌ ಎಡನೀರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಮತ್ತು ಪೆರ್ಲದ ಸವಿ ಹೃದಯದ ಕವಿ ಮಿತ್ರರು ಸಂಘಟನೆಗಳ ಜಂಟಿ ಆಶ್ರಯದಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುಟುಕು ಸಂಭ್ರಮ-2019 ಕಾರ್ಯಕ್ರಮದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬದುಕು ಎಣಿಸಿದಷ್ಟು ಸವ್ಯವಾಗಿ ಎಲ್ಲಾ ಸಂದರ್ಭದಲ್ಲೂ ಇರಲಾರದು. ಆದರೆ ಕವಿ-ಕಲಾವಿದ ಕಾಲಕ್ಕೆ ತಕ್ಕಂತೆ ಬದುಕನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದವನಾಗಿದ್ದು, ಸಾಮಾಜಿಕ ಕಳಕಳಿಯಲ್ಲಿ ಎಲ್ಲರೊಡನೆ ಒಂದಾಗಿ ಯೋಗಿಯಂತೆ ತ್ಯಾಗಿಯಾಗುತ್ತಾನೆ ಎಂದು ಅವರು ಈ ಸಂದರ್ಭ ತಿಳಿಸಿದರು. ಪ್ರಸ್ತುತ ವ್ಯಂಗ್ಯಚಿತ್ರಗಳ ಸ್ಥಾನವನ್ನು ಚುಟುಕು ಸಾಹಿತ್ಯ ಪ್ರಕಾರ ಆವರಿಸಿಕೊಂಡಿದೆ. ಒಂದೇ ನೊಗದ ಜೋಡಿ ಹಸುಗಳಂತೆ ವ್ಯವಸ್ಥೆಯನ್ನು ತೀಡಿ-ತಿದ್ದುವ ಉತ್ತಮ ರಚನೆಗಳು ಯುವ ಹೃದಯಗಳಲ್ಲಿ ಹುಟ್ಟಿ ಸಾರಸ್ವತ ಲೋಕಕ್ಕೆ ಕೊಡುಗೆಯಾಗಬೇಕು ಎಂದು ಕರೆ ನೀಡಿದರು. ಶಶಿಕಲಾ ಕುಂಬಳೆ, ಶ್ಯಾಮಲಾ ರವಿರಾಜ್‌ ಕುಂಬಳೆ, ಗೋಪಾಲಕೃಷ್ಣ ಭಟ್‌ ಗೋಳಿತ್ತಡ್ಕ, ಗುಣಾಜೆ ರಾಮಚಂದ್ರ ಭಟ್‌, ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್‌, ಕೆ.ನರಸಿಂಹ ಭಟ್‌ ಏತಡ್ಕ, ಪುಷ್ಪಾ ಕೆ., ಅಭಿಲಾಷ್‌ ಪೆರ್ಲ, ರಿತೇಶ್‌ ಕಿರಣ್‌ ಕಾಟುಕುಕ್ಕೆ, ನಿರ್ಮಲಾ ಶೇಸಪ್ಪ ಖಂಡಿಗೆ,, ಮೌನೇಶ್‌ ಆಚಾರ್ಯ, ಜ್ಯೋತ್ಸಾ$° ಎಂ.ಕಡಂದೇಲು, ಎನ್‌.ಸುಬ್ರಾಯ ಭಟ್‌, ಕೆ.ಎಸ್‌.ದೇವರಾಜ್‌ ಆಚಾರ್ಯ ಕುಂಬಳೆ, ಜುನೈದ್‌ ಕೊಡಗು, ಶಾಂತಾ ಪುತ್ತೂರು, ಪ್ರಭಾವತಿ ಕೆದಿಲಾಯ ಪುಂಡೂರು, ಜಯಾನಂದ ಪೆರಾಜೆ, ಸುಶೀಲಾ ಕೆ.ಪದ್ಯಾಣ, ರಾಮ ವೈ.ಬಿ.ಏದಾರ್‌, ಸುರೇಖಾ ಎಳವಾರ‌, ಸ್ವರಚಿತ ಕವನಗಳನ್ನು ವಾಚಿಸಿದರು. ಕವಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ತಾರಾನಾಥ ಬೋಳಾರ್‌, ಪ್ರಧಾನ ಕಾರ್ಯದರ್ಶಿ ಹರೀಶ್‌ ಸುಲಾಯ ಒಡ್ಡಂಬೆಟ್ಟು ನಿಕಟಪೂರ್ವ ಅಧ್ಯಕ್ಷ ಇರಾ ನೇಮು ಪೂಜಾರಿ, ಸವಿ ಹೃದಯದ ಕವಿ ಮಿತ್ರರು ವೇದಿಕೆಯ ಸಂಚಾಲಕ ಸುಭಾಷ್‌ ಪೆರ್ಲ, ರವಿಶಂಕರ ಜಿ.ಕೆ.ಕೆದಂಬಾಡಿ, ಹರೀಶ್‌ ಪೆರ್ಲ, ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಉಪಸ್ಥಿತರಿದ್ದರು. ಪುರುಷೋತ್ತಮ ಭಟ್‌ ಕೆ.ಸ್ವಾಗತಿಸಿ, ವಂದಿಸಿದರು. ಜಯ ಮಣಿಯಂಪಾರೆ ಕಾರ್ಯಕ್ರಮ ನಿರೂಪಿಸಿದರು.

“ಸಾಹಿತ್ಯ ವಲಯವೂ ಪ್ರಭಾವಶಾಲಿ’
ಚುಟುಕು ಸಾಹಿತ್ಯ ಸಂಭ್ರಮದ ಅಂತಿಮ ಭಾಗದಲ್ಲಿ ನಡೆದ ಚುಟುಕು ಗೋಷ್ಠಿಯನ್ನು ಮಂಗಳೂರು ತಾಲೂಕು ಚುಸಾಪ ಅಧ್ಯಕ್ಷ ಡಾ| ಸುರೇಶ ನೆಗಳಗುಳಿ ಉದ್ಘಾಟಿಸಿ ಚಾಲನೆ ನೀಡಿದರು. ಅವರು ಈ ಸಂದರ್ಭ ಮಾತನಾಡಿ, ಭೌಗೋಳಿಕರಣದ ಭಾಗವಾಗಿ ಸ್ಥಿತ್ಯಂತರಗೊಳ್ಳುತ್ತಿರುವ ಇಂದು ಸಾಹಿತ್ಯ ವಲಯವೂ ಪ್ರಭಾವಶಾಲಿಯಾಗಿ ವಿವಿಧ ವಿಭಾಗ ಗಳಲ್ಲಿ ಹರಡುತ್ತಿದೆ. ಇತರ ಭಾಷೆಗಳ ಗಾಢ ಪ್ರಭಾವ ಕನ್ನಡದ ಮೇಲೂ ಉಂಟಾಗಿದ್ದು, ಬೆಳವಣಿಗೆ ಪಡೆಯುತ್ತಿರುವ ಗಝಲ್‌ಕಾವ್ಯ ಪ್ರಕಾರ ಜನಪ್ರಿಯ‌ವಾಗುತ್ತಿದೆ ಎಂದು ತಿಳಿಸಿದರು. ಸರಳ-ಸುಂದರ ರಚಿಸಲ್ಪಡುವ ಗಜಲ ಕಾವ್ಯ ಪ್ರಕಾರ ಕವಿತೆಗಳ ಆಸ್ವಾದಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದ್ದು, ಸಾಹಿತ್ಯ ಸಂಭ್ರಮ ದಂತಹ ಕಾರ್ಯಕ್ರಮಗಳಿಂದ ಕ್ರಿಯಾಶೀಲ ವಾಗಿರಲಿ ಎಂದು ಡಾ| ನೆಗಳಗುಳಿ ವರು ಹಾರೈಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.