ಜಿಲ್ಲೆಯ ಜನರ ಗಮನ ಸೆಳೆದ ಎರಡು ದಿನಗಳ ಒಲಿಂಪಿಕ್ಸ್‌ ದಿನಾಚರಣೆ


Team Udayavani, Jun 25, 2019, 5:55 AM IST

24KSDE8

ಕಾಸರಗೋಡು: ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ನಡೆದ ಒಲಿಂಪಿಕ್ಸ್‌ ದಿನಾಚರಣೆ ಜನರ ಗಮನ ಸೆಳೆಯಿತು. ಮಾನವ ಸೌಹಾರ್ದಕ್ಕೆ ಪ್ರಾಧಾನ್ಯ ಒದಗಿಸಿ ಕ್ರೀಡೆಗೆ ಮಹತ್ವ ನೀಡಿ ಸ್ಥಳೀಯರಿಗೆ ಆದ್ಯತೆ ನೀಡಲಾಗಿತ್ತು.

ತ್ರಿಕರಿಪುರದಲ್ಲಿ ಕ್ರೀಡಾ ಜ್ಯೋತಿ ಪರ್ಯಟನೆ ಆರಂಭಗೊಂಡಿತ್ತು. ಶಾಸಕ ಎಂ. ರಾಜಗೋಪಾಲ್ ಉದ್ಘಾಟಿಸಿದರು. ಭಾರತೀಯ ಫುಟ್ಬಾಲ್ ತಂಡದ ಮಾಜಿ ಸದಸ್ಯ ಎಂ. ಸುರೇಶ್‌ ಕ್ರೀಡಾಜ್ಯೋತಿ ಪಡೆದುಕೊಂಡರು. ಜಿಲ್ಲಾ ಕ್ರೀಡಾ ಮಂಡಳಿ ಅಧ್ಯಕ್ಷ ಹಬೀಬ್‌ ರೆಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌ ಮುಖ್ಯ ಅತಿಥಿಯಾಗಿದ್ದರು. ಕ್ರೀಡಾ ಮಂಡಳಿ ರಾಜ್ಯ ಸಮಿತಿ ಸದಸ್ಯ ಟಿ.ವಿ.ಬಾಲನ್‌, ಜಿಲ್ಲಾ ಕ್ರೀಡಾ ಮಂಡಳಿ ಉಪಾಧ್ಯಕ್ಷ ಪಿ.ಪಿ.ಅಶೋಕನ್‌, ಪದಾಧಿಕಾರಿಗಳಾದ ವಿಜಯಮೋಹನ್‌, ಪಳ್ಳಂ ನಾರಾಯಣನ್‌, ಅನಿಲ್ ಬಂಗಳಂ, ಟಿ.ವಿ.ಕೃಷ್ಣನ್‌, ಸುಲ್ಫೆಕ್ಸ್‌ ಸಂಸ್ಥೆಯ ಪ್ರತಿನಿಧಿ ಮಹಮ್ಮದ್‌ ಕುಂಞಿ ಮೊದಲಾದವರು ಉಪಸ್ಥಿತರಿದ್ದರು.

ಕ್ರೀಡಾ ಜ್ಯೋತಿ ಪರ್ಯಟನೆಗೆ ನಡಕ್ಕಾವ್‌, ಕಾಲಿಕಡವು, ಚೆರುವತ್ತೂರು, ನೀಲೇಶ್ವರ, ಕಾಂಞಂಗಾಡ್‌, ಪಾಲಕುನ್ನು, ಮೇಲ್ಪರಂಬ, ಕಾಸರ ಗೋಡು ಪ್ರದೇಶಗಳಲ್ಲಿ ಕ್ರೀಡಾ ಜ್ಯೋತಿಗೆ ಸ್ವಾಗತ ನೀಡಲಾಯಿತು. ಸ್ಥಳೀಯಾಡಳಿತ ಸಂಸ್ಥೆಗಳ ಪದಾಧಿ ಕಾರಿಗಳು, ಸಾರ್ವಜನಿಕರು ನೇತೃತ್ವ ವಹಿಸಿದ್ದರು.

ಸಮಾರೋಪ ಸಮಾರಂಭ ಕಾಸರ ಗೋಡು ನಗರದ ನೂತನ ಬಸ್‌ ನಿಲ್ದಾಣ ಬಳಿ ಜರಗಿತು. ಶಾಸಕ ಎನ್‌.ಎ. ನೆಲ್ಲಿಕುನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಜನತೆಯನ್ನು ಒಂದಾಗಿಸಲು ಕ್ರೀಡೆಯೂ ಒಂದು ಮಾಧ್ಯಮ. ಜಾತಿ-ಮತ ಭೇದಗಳಿಲ್ಲದೆ ಜನ ಒಂದಾಗಿ ಬೆರೆಯಲು ಇದು ಸಹಕಾರಿ. ಕಾಸರಗೋಡಿನಂಥ ವಲಯದಲ್ಲಿ ಇದರ ಮಹತ್ವ ಅಧಿಕವಾಗಿದೆ ಎಂದವರು ತಿಳಿಸಿದರು.

ಹಗ್ಗಜಗ್ಗಾಟದ ರಾಷ್ಟ್ರೀಯ ಪಟು ಸಾಯಿಪ್ರಕಾಶ್‌ ಪ್ರತಿಜ್ಞೆ ನಡೆಸಿಕೊಟ್ಟರು. ಜಿಲ್ಲಾ ಕ್ರೀಡಾ ಮಂಡಳಿ ಅಧ್ಯಕ್ಷ ಹಬೀಬ್‌ ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧಾ ವಿಜೇತರಿಗೆ ಎಂ. ಸುರೇಶ್‌ ಬಹುಮಾನ ವಿತರಿಸಿದರು. ಉಪಾಧ್ಯಕ್ಷ ಪಿ.ಪಿ.ಅಶೋಕನ್‌ ಮಾಸ್ಟರ್‌, ಅನಿಲ್ ಬಂಗರ, ಪ್ರೊ| ರಘುನಾಥ್‌, ಕಾರ್ಯದರ್ಶಿ ಕೆ.ವಿ. ರಾಘವನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.