ಜಿಲ್ಲೆಯ ಜನರ ಗಮನ ಸೆಳೆದ ಎರಡು ದಿನಗಳ ಒಲಿಂಪಿಕ್ಸ್‌ ದಿನಾಚರಣೆ


Team Udayavani, Jun 25, 2019, 5:55 AM IST

24KSDE8

ಕಾಸರಗೋಡು: ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ನಡೆದ ಒಲಿಂಪಿಕ್ಸ್‌ ದಿನಾಚರಣೆ ಜನರ ಗಮನ ಸೆಳೆಯಿತು. ಮಾನವ ಸೌಹಾರ್ದಕ್ಕೆ ಪ್ರಾಧಾನ್ಯ ಒದಗಿಸಿ ಕ್ರೀಡೆಗೆ ಮಹತ್ವ ನೀಡಿ ಸ್ಥಳೀಯರಿಗೆ ಆದ್ಯತೆ ನೀಡಲಾಗಿತ್ತು.

ತ್ರಿಕರಿಪುರದಲ್ಲಿ ಕ್ರೀಡಾ ಜ್ಯೋತಿ ಪರ್ಯಟನೆ ಆರಂಭಗೊಂಡಿತ್ತು. ಶಾಸಕ ಎಂ. ರಾಜಗೋಪಾಲ್ ಉದ್ಘಾಟಿಸಿದರು. ಭಾರತೀಯ ಫುಟ್ಬಾಲ್ ತಂಡದ ಮಾಜಿ ಸದಸ್ಯ ಎಂ. ಸುರೇಶ್‌ ಕ್ರೀಡಾಜ್ಯೋತಿ ಪಡೆದುಕೊಂಡರು. ಜಿಲ್ಲಾ ಕ್ರೀಡಾ ಮಂಡಳಿ ಅಧ್ಯಕ್ಷ ಹಬೀಬ್‌ ರೆಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌ ಮುಖ್ಯ ಅತಿಥಿಯಾಗಿದ್ದರು. ಕ್ರೀಡಾ ಮಂಡಳಿ ರಾಜ್ಯ ಸಮಿತಿ ಸದಸ್ಯ ಟಿ.ವಿ.ಬಾಲನ್‌, ಜಿಲ್ಲಾ ಕ್ರೀಡಾ ಮಂಡಳಿ ಉಪಾಧ್ಯಕ್ಷ ಪಿ.ಪಿ.ಅಶೋಕನ್‌, ಪದಾಧಿಕಾರಿಗಳಾದ ವಿಜಯಮೋಹನ್‌, ಪಳ್ಳಂ ನಾರಾಯಣನ್‌, ಅನಿಲ್ ಬಂಗಳಂ, ಟಿ.ವಿ.ಕೃಷ್ಣನ್‌, ಸುಲ್ಫೆಕ್ಸ್‌ ಸಂಸ್ಥೆಯ ಪ್ರತಿನಿಧಿ ಮಹಮ್ಮದ್‌ ಕುಂಞಿ ಮೊದಲಾದವರು ಉಪಸ್ಥಿತರಿದ್ದರು.

ಕ್ರೀಡಾ ಜ್ಯೋತಿ ಪರ್ಯಟನೆಗೆ ನಡಕ್ಕಾವ್‌, ಕಾಲಿಕಡವು, ಚೆರುವತ್ತೂರು, ನೀಲೇಶ್ವರ, ಕಾಂಞಂಗಾಡ್‌, ಪಾಲಕುನ್ನು, ಮೇಲ್ಪರಂಬ, ಕಾಸರ ಗೋಡು ಪ್ರದೇಶಗಳಲ್ಲಿ ಕ್ರೀಡಾ ಜ್ಯೋತಿಗೆ ಸ್ವಾಗತ ನೀಡಲಾಯಿತು. ಸ್ಥಳೀಯಾಡಳಿತ ಸಂಸ್ಥೆಗಳ ಪದಾಧಿ ಕಾರಿಗಳು, ಸಾರ್ವಜನಿಕರು ನೇತೃತ್ವ ವಹಿಸಿದ್ದರು.

ಸಮಾರೋಪ ಸಮಾರಂಭ ಕಾಸರ ಗೋಡು ನಗರದ ನೂತನ ಬಸ್‌ ನಿಲ್ದಾಣ ಬಳಿ ಜರಗಿತು. ಶಾಸಕ ಎನ್‌.ಎ. ನೆಲ್ಲಿಕುನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಜನತೆಯನ್ನು ಒಂದಾಗಿಸಲು ಕ್ರೀಡೆಯೂ ಒಂದು ಮಾಧ್ಯಮ. ಜಾತಿ-ಮತ ಭೇದಗಳಿಲ್ಲದೆ ಜನ ಒಂದಾಗಿ ಬೆರೆಯಲು ಇದು ಸಹಕಾರಿ. ಕಾಸರಗೋಡಿನಂಥ ವಲಯದಲ್ಲಿ ಇದರ ಮಹತ್ವ ಅಧಿಕವಾಗಿದೆ ಎಂದವರು ತಿಳಿಸಿದರು.

ಹಗ್ಗಜಗ್ಗಾಟದ ರಾಷ್ಟ್ರೀಯ ಪಟು ಸಾಯಿಪ್ರಕಾಶ್‌ ಪ್ರತಿಜ್ಞೆ ನಡೆಸಿಕೊಟ್ಟರು. ಜಿಲ್ಲಾ ಕ್ರೀಡಾ ಮಂಡಳಿ ಅಧ್ಯಕ್ಷ ಹಬೀಬ್‌ ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧಾ ವಿಜೇತರಿಗೆ ಎಂ. ಸುರೇಶ್‌ ಬಹುಮಾನ ವಿತರಿಸಿದರು. ಉಪಾಧ್ಯಕ್ಷ ಪಿ.ಪಿ.ಅಶೋಕನ್‌ ಮಾಸ್ಟರ್‌, ಅನಿಲ್ ಬಂಗರ, ಪ್ರೊ| ರಘುನಾಥ್‌, ಕಾರ್ಯದರ್ಶಿ ಕೆ.ವಿ. ರಾಘವನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.